ಅನ್ವೇಷಣಾ -2016 ರಾಜ್ಯಮಟ್ಟದ ಕಾರ್ಯಾಗಾರ

ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಪಡೆಯುವ ಹಂತದಲ್ಲಿ ನಿರ್ದಿಷ್ಟ ಗುರಿಯನ್ನು ಇಟ್ಟುಕೊಳ್ಳಬೇಕು. ನಿರಂತರ ಪರಿಶ್ರಮದ ಮೂಲಕ ಗುರಿಯನ್ನು ಮುಟ್ಟಲು ಸಾಧ್ಯ. ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರತರಲು ಅನ್ವೇಷಣಾ –2016 ನಂತಹ ಕಾರ್ಯಾಗಾರಗಳ ಅಗತ್ಯತೆ ಇದೆ ಎಂದು ಕಕ್ಯಪದವಿನ ಎಲ್.ಸಿ.ಆರ್ ವಿದ್ಯಾಸಂಸ್ಥೆಯ ಸಂಸ್ಥಾಪಕ ರೋಹಿನಾಥ ಪಾದೆ ಅಭಿಪ್ರಾಯಪಟ್ಟರು.

ಅವರು ಬಿ.ಸಿ.ರೋಡು ಗಾಣದಪಡ್ಪುವಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ  ಯುವವಾಹಿನಿ(ರಿ)ಬಂಟ್ವಾಳ ತಾಲೂಕು ಘಟಕದ ವತಿಯಿಂದ  ನಡೆದ ಅನ್ವೇಷಣಾ-2016′ ಶೈಕ್ಷಣಿಕ, ವೃತ್ತಿಮಾರ್ಗದರ್ಶನ ಕುರಿತ ರಾಜ್ಯಮಟ್ಟದ ಒಂದು ದಿನದ ಕಾರ್ಯಾಗಾರದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಜಾಹೀರಾತು

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್ ಅನ್ವೇಷಣಾ-2016 ನ್ನು ಉದ್ಘಾಟಿಸಿದರು. ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಪ್ರಧಾನ ಕಾರ್ಯದರ್ಶಿ ಬಿ.ತಮ್ಮಯ್ಯ ಶುಭಾಶಂಸನೆ ಗೈದರು. 

ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿ  ಅಧ್ಯಕ್ಷೆ  ಭಾರತಿ ಬಿ.ಕುಂದರ್, ಬಿಲ್ಲವ ಮಹಾಮಂಡಲದ ವಕ್ತಾರ ಹರಿಕೃಷ್ಣ ಬಂಟ್ವಾಳ ಮತ್ತು ಆರಾಧನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಕೋರ್ಯ ವೇದಿಕೆಯಲ್ಲಿದ್ದರು.

ಜಾಹೀರಾತು

ಕಾರ್ಯಾಗಾರದ ಅಧ್ಯಕ್ಷತೆಯನ್ನು ಯುವವಾಹಿನಿ ಕೇಂದ್ರಸಮಿತಿಯ ವ್ಯಕ್ತಿತ್ವ ವಿಕಸನ ನಿರ್ದೇಶಕ ಗೋಪಾಲಕೃಷ್ಣ ಕುಂದರ್ ವಹಿಸಿದ್ದರು.

ಅನ್ವೇಷಣಾ –2016 ಕಾರ್ಯಾಗಾರದ ಸಂಯೋಜಕ ಚೇತನ್ ಎಂ., ಹಾಗೂ ವಿದ್ಯಾರ್ಥಿ ಸಂಘಟನೆಯ ನಿರ್ದೇಶಕ ವಿಜಿತ್ ಕೋಟ್ಯಾನ್,ಯುವವಾಹಿನಿ ಬಂಟ್ವಾಳ ತಾಲೂಕು  ಘಟಕದ ಅಧ್ಯಕ್ಷ ಅರುಣ್ ಕುಮಾರ್, ಕೋಶಾಧಿಕಾರಿ ಸತೀಶ್ ಪೂಜಾರಿ ಬಾಯಿಲ, ಕಾರ್ಯಾಗಾರದ ಸಹಸಂಚಾಲಕರಾದ ನಿತಿನ್ ಎಚ್.ಯು., ಕಿರಣ್ ರಾಜ್ ಪೂಂಜೆರಕೋಡಿ, ಉಪನ್ಯಾಸಕ ಶಿವಪ್ರಸಾದ್ ಉಪಸ್ಥಿತರಿದ್ದರು. 

ಯುವವಾಹಿನಿ ಮಾಜಿ ಅಧ್ಯಕ್ಷ  ಪ್ರೇಮನಾಥ ಕೆ ಸ್ವಾಗತಿಸಿದರು. ನಿಕಟಪೂರ್ವ ಅಧ್ಯಕ್ಷ ರಾಜೇಶ್ ಸುವರ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು. 

ಜಾಹೀರಾತು

ಸಹನಾ ಪ್ರಾರ್ಥಿಸಿದರು. ಯುವವಾಹಿನಿಯ ಜತೆಕಾರ್ಯದರ್ಶಿ ಜಯಶ್ರೀ ಕರ್ಕೇರ  ಧನ್ಯವಾದಗೈದರು. ಯುವವಾಹಿನಿ  ಮಾಜಿ ಅಧ್ಯಕ್ಷ ಹರೀಶ್ ಎಸ್  ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಅನ್ವೇಷಣಾ -2016 ರಾಜ್ಯಮಟ್ಟದ ಕಾರ್ಯಾಗಾರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*