ಪಾವೆಂ ಲೇಖನ ಸಮಗ್ರ ಸಂಪುಟ ಹೊರತರಲಿ

ಡಾ.ಅಜಕ್ಕಳ ಗಿರೀಶ ಭಟ್ ಅವರು ಬರೆದ ಪಾವೆಂ ಕುರಿತ ಅಂಕಣಬರೆಹಕ್ಕೆ ಬೆಂಗಳೂರಿನಲ್ಲಿ ವಾಸಿಸುತ್ತಿರುವ ನಿವೃತ್ತ ಪೋಸ್ಟ್ ಮಾಸ್ಟರ್ ಎಂ.ಎ.ಶ್ರೀರಂಗ ಪಾವೆಂ ಕುರಿತು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದ್ದಾರೆ.

ಪಾವೆಂ ಅವರ ಆಸಕ್ತಿಗಳು ಹಲವು ಮುಖದವು. ಪತ್ರಿಕೋದ್ಯಮ ಅದರಲ್ಲಿ ಒಂದು. ಭೈರಪ್ಪನವರು ತಮ್ಮ ‘ಪರ್ವ’ ಕಾದಂಬರಿ ಬರೆಯುತ್ತಿದ್ದ ಸಂದರ್ಭ  ಒಮ್ಮೆ ಹುಬ್ಬಳ್ಳಿಗೆ ಹೋಗಿದ್ದಾಗ ಪಾವೆಂ ಅವರ ಭೇಟಿಯಿಂದ ತಮಗಾದ ಅನುಭವವನ್ನು ‘ನಾನೇಕೆ ಬರೆಯುತ್ತೇನೆ’  ಪುಸ್ತಕದಲ್ಲಿರುವ ‘ಪರ್ವ ಬರೆದದ್ದು’ ಎಂಬ ದೀರ್ಘ ಲೇಖನದಲ್ಲಿ ಈ ರೀತಿ ಜ್ಞಾಪಿಸಿಕೊಂಡಿದ್ದಾರೆ.

ಜಾಹೀರಾತು

‘ನಾನು ಮಹಾಭಾರತ ಕುರಿತು  ವಾಸ್ತವದ ನೆಲೆಯಲ್ಲಿ ಒಂದು ಕಾದಂಬರಿ ಬರೆಯುತ್ತಿದ್ದೇನೆ ಎಂಬ ವಿಷಯ ತಿಳಿದ ಪಾವೆಂ ಅವರು ಹುಬ್ಬಳ್ಳಿಯಲ್ಲಿ ನಾನಿದ್ದ ಲಾಡ್ಜ್ ಗೆ ಬಂದು  ಮಾತಾಡುತ್ತಾ ನಾನೂ ಈ ಬಗ್ಗೆ  ಯೋಚಿಸಿದ್ದೇನೆ ಎಂದು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಸಂಯುಕ್ತ ಕರ್ನಾಟಕ ಪತ್ರಿಕೆಯ ಲೈಬ್ರರಿಗೆ ಕರೆದುಕೊಂಡು ಹೋಗಿ ಅಲ್ಲಿದ್ದ ಪುಸ್ತಕಗಳನ್ನು ಕೊಡುತ್ತಿದ್ದರು. ಹುಬ್ಬಳ್ಳಿಯ ಆ ಲಾಡ್ಜ್ ನಲ್ಲಿ ನಾನಿದ್ದ  ಅಷ್ಟು  ದಿನವೂ  ಪ್ರತಿ ದಿನ ಬೆಳಗ್ಗೆಯೇ ಬಂದು ನನ್ನೊಡನೆ ವಿಚಾರವಿನಿಮಯ ಮಾಡಿ ನನ್ನ  ಯೋಚನೆಗಳು ಸ್ಪುಟವಾಗುವಂತೆ ಸಹಕರಿಸುತ್ತಿದ್ದರು. ………  ಮೈಸೂರಿಗೆ ನಾನು ವಾಪಸ್ ಬಂದು ಪರ್ವದ ಬರವಣಿಗೆ ಮುಂದುವರಿಸಿದಾಗ ,ಕೆಲವೊಂದು ಸಂದರ್ಭಗಳಲ್ಲಿ ಕಾದಂಬರಿಯ ಬರವಣಿಗೆಯು ಪೂರ್ತಿ ಮುಗಿಯುವ ತನಕ ನನ್ನ ಜತೆ ಪಾವೆಂ ಅಂಥವರು  ಇರಬೇಕಿತ್ತು ಎಂದು ಎಷ್ಟೋ ಸಾರಿ ಅನಿಸಿದ್ದುಂಟು.’

ಇಂದು  ಬಹುಮುಖ ಪ್ರತಿಭೆಯ ವ್ಯಕ್ತಿ, ಸಾಹಿತಿ, ಪತ್ರಕರ್ತ ಎಂಬ ಪದಗಳು ಕ್ಲೀಷೆ ಎನ್ನುವ ಮಟ್ಟಿಗೆ ಆಗಿಹೋಗಿದೆ. ಕೆಲವೊಮ್ಮೆ ಅಪಾತ್ರರಿಗೂ ಅವರ ಹೆಸರಿನ ಮುಂದೆ ಬಿರುದು ಬಾವಲಿಗಳಂತೆ  ಅದು ಅಂಟಿಕೊಂಡಿರುವುದೂ ಉಂಟು. ಆದರೆ ಪಾವೆಂ ಅವರ ವಿಷಯದಲ್ಲಿ ‘ಬಹುಮುಖ ಪ್ರತಿಭೆ’ ಎಂಬುದು ಕ್ಲೀಷೆಯಲ್ಲ . ಸತ್ಯವಾದ ಮಾತು.

ಇಂದು ಅವರ ಎಷ್ಟೋ ಪುಸ್ತಕಗಳು ಔಟ್ ಆಫ್ ಪ್ರಿಂಟ್ ಆಗಿವೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸಾಹಿತ್ಯ ಅಕಾಡೆಮಿ, ಅಥವಾ  ಕನ್ನಡ ಸಂಸ್ಕೃತಿ ಇಲಾಖೆಗಳು  ಪಾವೆಂ ಅವರ  ಲೇಖನಗಳ ಸಮಗ್ರ ಸಂಪುಟ ತಂದರೆ ಒಳ್ಳೆಯದು.  ಆದರೆ ಇದುವರೆಗೆ ಆ ಕೆಲಸ  ಆಗಿಲ್ಲ ಎಂದು ಕಾಣುತ್ತದೆ.  ಖಾಸಗಿ ಪ್ರಕಾಶಕರ ಲಾಭ ನಷ್ಟದ ಲೆಕ್ಕಾಚಾರದ ನಡುವೆ ಅವು ಮರು ಮುದ್ರಣವಾಗಬೇಕಾದರೆ ಅವರಿಗೆ ಪಾವೆಂ ಅವರ  ಬರವಣಿಗೆ, ವ್ಯಕ್ತಿತ್ವ ಇವುಗಳ ಬಗ್ಗೆ  ಆಸಕ್ತಿ ಇದ್ದರೆ  ಮಾತ್ರ ಸಾಧ್ಯವಾದೀತೇನೋ?

ಜಾಹೀರಾತು

ಬಹುಷಃ ಇಂದಿನ ಪೀಳಿಗೆಯ ಓದುಗರಿಗೆ ಅಷ್ಟಾಗಿ ಪರಿಚಯವಿರಲಾರದ  ‘ಪಾವೆಂ’  ಅವರನ್ನು ತಮ್ಮ ಅಂಕಣದ ಮೂಲಕ  ಜ್ಞಾಪಿಸಿಕೊಟ್ಟಿದ್ದಕ್ಕೆ ಗಿರೀಶ್ ಭಟ್ ಅವರಿಗೆ ವಂದನೆಗಳು. 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಪಾವೆಂ ಲೇಖನ ಸಮಗ್ರ ಸಂಪುಟ ಹೊರತರಲಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*