ಕಳೆದ ಹಲವಾರು ವರ್ಷಗಳಿಂದ ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ತನ್ನ ಬಗ್ಗೆ ಬಂಟ್ವಾಳ ಕ್ಷೇತ್ರದ ಜನರಲ್ಲಿ ಅಪನಂಬಿಕೆ ಮತ್ತು ದ್ವೇಷ ಹುಟ್ಟಿಸುವ ದೃಷ್ಟಿಯಿಂದ ವಾಟ್ಸಾಪ್ ಮೂಲಕ ಸಂದೇಶಗಳನ್ನು ರವಾನಿಸಲಾಗುತ್ತಿದೆ ಎಂದು ಪ್ರಗತಿಪರ ಕೃಷಿಕ, ಬಿಜೆಪಿ ನಾಯಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಆರೋಪಿಸಿದ್ದಾರೆ. ಈ ಕುರಿತು ಅವರು ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದಾರೆ.
ವಾಟ್ಸಾಪ್ ಗುಂಪೊಂದರಲ್ಲಿ ಈ ರೀತಿಯ ಸಂದೇಶ ಹಾಕಲಾಗಿದೆ. ಇದಾದ ಬಳಿಕ ತನಗೆ ನೂರಾರು ಜನರು ಪ್ರತಿಕ್ರಿಯೆ ಕೇಳಿದ್ದು, ಮಾನಸಿಕ ಕಿರುಕುಳವಾಗಿದೆ. ಅನಾವಶ್ಯಕವಾಗಿ ತನ್ನ ಹೆಸರನ್ನು ಎಳೆದುತಂದು ಗೌರವಕ್ಕೆ ಧಕ್ಕೆ ಉಂಟುಮಾಡಲಾಗಿದೆ ಎಂದು ಅವರು ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಅವರು ವಾಟ್ಸಾಪ್ ಗುಂಪು ಮತ್ತು ದೂರವಾಣಿ ಸಂಖ್ಯೆಯನ್ನು ಪೊಲೀಸರಿಗೆ ನೀಡಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಿನಂತಿಸಿಕೊಂಡಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to comment on "ಸಾಮಾಜಿಕ ಜಾಲತಾಣ ದುರ್ಬಳಕೆ: ರಾಜೇಶ್ ನಾಯ್ಕ್ ದೂರು"