ಶರತ್ ಹತ್ಯೆ – ಇಬ್ಬರ ಬಂಧಿಸಿದ ಪೊಲೀಸರು

ದಾಳಿ ನಡೆದು ಒಂದು ತಿಂಗಳು ಹನ್ನೊಂದು ದಿನಗಳ ಬಳಿಕ ಆರ್. ಎಸ್. ಎಸ್. ಕಾರ್ಯಕರ್ತ ಶರತ್ ಮಡಿವಾಳ ನನ್ನು ಮಾರಣಾಂತಿಕವಾಗಿ ಗಾಯಗೊಳಿಸಿ ಅವರ ಸಾವಿಗೆ ಕಾರಣರಾದ ಪ್ರಕರಣದಲ್ಲಿ ಭಾಗಿಯಾದ ಆರೋಪದಲ್ಲಿ ಇಬ್ಬರನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ.

ಜಾಹೀರಾತು

ಅಬ್ದುಲ್ ಶಾಫಿ (36) ಸಜೀಪಮುನ್ನೂರು ಗ್ರಾಮದ ಆಲಾಡಿ ನಿವಾಸಿ ಓರ್ವ ಆರೋಪಿಯಾದರೆ, ಮತ್ತೋರ್ವ ಚಾಮರಾಜನಗರ ಪಿಎಫ್ಐ ಸಂಘಟನೆ ಅಧ್ಯಕ್ಷ ಖಲೀಲುಲ್ಲಾ (30) ಎಂದು ಮಂಗಳೂರಿನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಐಜಿಪಿ ಹರಿಶೇಖರನ್ ತಿಳಿಸಿದ್ದಾರೆ.

ಶರತ್ ಮಡಿವಾಳ ಅವರ ಕೊಲೆ ಪ್ರಕರಣದ ತನಿಖೆ ಸಲುವಾಗಿ ಐಜಿಪಿ ನಿರ್ದೇಶನದಂತೆ ಏಳು ಮಂದಿ ಅಧಿಕಾರಿಗಳ ಎಸಿಪಿ ವೆಲಂಟೈನ್ ಡಿಸೋಜ, ಡಿಸಿಐಬಿ ಇನ್ಸ್ ಪೆಕ್ಟರ್ ಸುನಿಲ್ ನಾಯಕ್, ಪುತ್ತೂರು ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್, ಬೆಳ್ತಂಗಡಿ ಇನ್ಸ್ ಪೆಕ್ಟರ್ ರವಿ ಮತ್ತು ಡಿಸಿಐಬಿ ಇನ್ಸ್ ಪೆಕ್ಟರ್ ಅಮಾನುಲ್ಲಾ ಅವರ ತಂಡವನ್ನು ರಚಿಲಾಗಿತ್ತು. ಎಂದು ಹೇಳಿದ ಹರಿಶೇಖರನ್, ಈ ತಂಡ ಪ್ರಕರಣದ ತನಿಖೆಯ ಭಾಗವಾಗಿ ಸುಮಾರು 30 ಜನರನ್ನು ವಿಚಾರಣೆಗೆ ತೆಗೆದುಕೊಂಡು ತೀವ್ರ ತನಿಖೆ ನಡೆಸಿದೆ. ತನಿಖಾ ತಂಡವು ಮಹಾರಾಷ್ಟ್ರ, ಕೇರಳ, ಬೆಂಗಳೂರು, ಶಿವಮೊಗ್ಗ, ಕಾರವಾರ ಮೊದಲಾದ ಕಡೆ ಆರೋಪಿಗಳ ಸುಳಿವಿನ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದು, ಈ ಪ್ರಕರಣದಲ್ಲಿ ಭಾಗಿಯಾದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.

ಜಾಹೀರಾತು

ಇನ್ನೂ ನಾಲ್ಕು ಅಥವಾ ಐವರು ಈ ಪ್ರಕರಣದಲ್ಲಿ ಇರುವ ಕುರಿತು ಅನುಮಾನಗಳಿವೆ. ಅವರನ್ನು ಶೀಘ್ರ ಪತ್ತೆಹಚ್ಚಲಾಗುವುದು. ಹತ್ಯೆ ನಡೆಸಿದವರಿಗೆ ವಾಹನ ಒದಗಿಸಿ, ಅವರು ತಪ್ಪಿಸಿಕೊಳ್ಳಲು ಸಹಕರಿಸಿದ್ದು ಯಾರು ಎಂಬ ಕುರಿತು ತನಿಖೆಯಿಂದ ಗೊತ್ತಾಗಲಿದೆ. ಸದ್ಯಕ್ಕೆ ಹತ್ಯೆಗೆ ಏನು ಕಾರಣ ಎಂಬ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ಅಬ್ದುಲ್ ಶಾಫಿಯನ್ನು ಬಂಟ್ವಾಳ ತಾಲೂಕಿನಲ್ಲಿ ಹಾಗೂ ಖಲೀಲುಲ್ಲ ನನ್ನು ಚಾಮರಾಜನಗರದಲ್ಲಿ ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ನ್ಯಾಯಾಲಯದಲ್ಲಿ ಹಾಜರುಪಡಿಸಿ, ಮುಂದಿನ ವಿಚಾರಣೆಗಾಗಿ ಪೊಲೀಸ್ ಕಷ್ಟಡಿಗೆ ಪಡೆಯಲಾಗುತ್ತದೆ. ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಇತರ ಆರೋಪಿಗಳ ಸುಳಿವು ದೊರೆತಿದ್ದು, ಅವರನ್ನು ಶೀಘ್ರ ಪತ್ತೆಹಚ್ಚಲಾಗುವುದು ಎಂದು ಹೇಳಿದ್ದಾರೆ.

ಜುಲೈ 4ರಂದು ರಾತ್ರಿ ಸುಮಾರ 9.30ಕ್ಕೆ ಬಿ.ಸಿ.ರೋಡಿನ ಉದಯ ಲಾಂಡ್ರಿ ಅಂಗಡಿಯಲ್ಲಿದ್ದ ಶರತ್ ಮಡಿವಾಳ  ಅವರನ್ನು ಅಂಗಡಿಯೊಳಗೆ ನುಗ್ಗಿ ಮಾರಕಾಯುಧಗಳಿಂದ ಕಡಿದು ಗಾಯಗೊಳಿಸಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದಾದ ಬಳಿಕ ಜುಲೈ 7ರಂದು ಆಸ್ಪತ್ರಯಲ್ಲಿ ಶರತ್ ಮೃತಪಟ್ಟಿದ್ದು, ಕಲಂ 302ರಂತೆ ಪ್ರಕರಣ ದಾಖಲಾಗಿತ್ತು.

ಜಾಹೀರಾತು

ಆರೋಪಿಗಳನ್ನು ಶೀಘ್ರ ಪತ್ತೆಹಚ್ಚಬೇಕು ಎಂದು ಆಗ್ರಹಿಸಿ ಹಿಂದುಪರ ಸಂಘಟನೆಗಳು ತೀವ್ರ ಪ್ರತಿಭಟನೆಯನ್ನು ನಡೆಸಿದ್ದವು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಶರತ್ ಹತ್ಯೆ – ಇಬ್ಬರ ಬಂಧಿಸಿದ ಪೊಲೀಸರು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*