ಕಲ್ಲಡ್ಕ ಶಾಲೆಗೆ ಅನುದಾನ ಸ್ಥಗಿತ ವಿಚಾರ ಸಚಿವರಿಗೆ ಶೋಭೆಯಲ್ಲ: ನಳಿನ್ ಕುಮಾರ್ ಕಟೀಲ್


ಕಲ್ಲಡ್ಕ ಪ್ರಭಾಕರ ಭಟ್ ಅವರೊಂದಿಗೆ ರೈಗಳು ಪೈಪೋಟಿ ನೀಡುವುದಿದ್ದರೆ, ತಮ್ಮ ಶಿಕ್ಷಣ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಬೇಕೇ ಹೊರತು, ದೇವಸ್ಥಾನ ಕೊಡುವ ಅನುದಾನ ಸ್ಥಗಿತಗೊಳಿಸುವ ಸಣ್ಣತನದ ಕಾರ್ಯಕ್ಕೆ ಇಳಿಯಬಾರದು, ಇದು ಶೋಭೆ ತರುವ ವಿಚಾರವಲ್ಲ ಎಂದು ಹೇಳಿದರು.

ಬಿ.ಸಿ.ರೋಡಿನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂದರ್ಭ ಅವರಿಗೆ ತೊಂದರೆಯಾದರೆ, ಭಾರತೀಯ ಜನತಾ ಪಾರ್ಟಿ ಅವರಿಗೆ ಸಹಕಾರ ನೀಡುತ್ತದೆ. ಒಂದು ವೇಳೆ ದೇವಸ್ಥಾನದ ಅನುದಾನವನ್ನು ಮಕ್ಕಳಿಗೋಸ್ಕರ ನೀಡುವುದಿದ್ದರೆ ಸಂಪೂರ್ಣ ಬೆಂಬಲಿಸುತ್ತದೆ. ಕಲ್ಲಡ್ಕ ಪ್ರಭಾಕರ ಭಟ್ ಜೊತೆ ಹೋರಾಡುವುದಿದ್ದರೆ ವೈಚಾರಿಕವಾಗಿ ಮಾಡಿ. ಭಕ್ತರು ಹುಂಡಿಗೆ ಹಾಕಿದ ಹಣವನ್ನು ಶಾಲೆಗೆ ಒದಗಿಸುವುದನ್ನು ನಿಲ್ಲಿಸುವ ಮೂಲಕ ಸಣ್ಣತನ ತೋರಿಸಬೇಡಿ ಎಂದು ಸಚಿವರಿಗೆ ಸಲಹೆ ನೀಡಿದರು.

ಜಾಹೀರಾತು

ರಾಷ್ಟ್ರಮಟ್ಟದಲ್ಲಿ ಪ್ರಸಿದ್ದಿ:

ಕಲ್ಲಡ್ಕ,ಪುಣಚ ಶಾಲೆಗಳಲ್ಲಿ  ಯೋಗ, ಸಂಸ್ಕ್ರತ, ಸಂಸ್ಕಾರವನ್ನು ಕಲಿಸಿಕೊಡುವುದರ ಜೊತೆಗೆ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡುವ ಮೂಲಕ ರಾಷ್ಟ್ರಮಟ್ಟದಲ್ಲಿ ಪ್ರಸಿದ್ದಿಯನ್ನು ಪಡೆದಿದೆ. ದೇವಸ್ಥಾನದ ಹಣ ಪೋಲಾಗಬಾರೆದಂಬ ಉದ್ದೇಶದಿಂದ ದಿ.ಡಾ.ವಿ.ಎಸ್.ಆಚಾರ್ಯರು ಮುಜರಾಯಿ ಸಚಿವರಾಗಿದ್ದಾಗ ದೇವಸ್ಥಾನದ ಹುಂಡಿ ಹಣ ಶಿಕ್ಷಣ, ಆರೋಗ್ಯ, ಸಾಮಾಜಿಕ ಕಾರ್ಯಗಳಿಗೆ ವಿನಿಯೋಗವಾಗಬೇಕೆಂದು ಕಾನೂನು ರೂಪಿಸಲಾಗಿತ್ತು ಎಂದರು.

ಶಾಲೆ ನಡೆಸುವುದು ಕಷ್ಟದ ಕೆಲಸ, ಕನ್ನಡ ಶಾಲೆಗಳ ಪೈಕಿ, ಶ್ರೀರಾಮ ವಿದ್ಯಾಕೇಂದ್ರ ರಾಜ್ಯದಲ್ಲೇ ಗಮನ ಸೆಳೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಥಮಿಕ ವಿದ್ಯಾಭ್ಯಾಸವನ್ನು ಕನ್ನಡದಲ್ಲಿ ಸಂಪೂರ್ಣವಾಗಿ ಉಚಿತವಾಗಿ ನೀಡುತ್ತಾ ಗರಿಷ್ಠ ಸಂಖ್ಯೆಯ ಮಕ್ಕಳನ್ನು ಹೊಂದಿರುವ ಶಿಕ್ಷಣ ಸಂಸ್ಥೆಯ ಪೈಕಿ ಕಲ್ಲಡ್ಕ ಶಾಲೆ ಮೇಲ್ಪಂಕ್ತಿಯಲ್ಲಿ ನಿಲ್ಲುತ್ತದೆ. ರಾಜಕೀಯ ನಡೆಸುವ ಮೂಲಕ ಶಾಲೆ ಮಕ್ಕಳಿಗೆ ಒದಗಿಸುವ ಅನ್ನವನ್ನು ಕಸಿಯುವ ಕೆಲಸ ಮಾಡಲಾಗಿದೆ. ಇದು ಸಚಿವರಿಗೆ ಶೋಭೆ ತರುವ ವಿಚಾರವಲ್ಲ ಎಂದು ನಳಿನ್ ಹೇಳಿದರು.

ಜಾಹೀರಾತು

ಜನತಾ ಜನಾರ್ದನನ ಬಳಿ ಭಿಕ್ಷೆ:

ಇನ್ನು ಶಾಲೆಗೆ ಹಣ ಕೊಡಿ ಎಂದು ಧಾರ್ಮಿಕ ದತ್ತಿ ಇಲಾಖೆಯನ್ನು ಕೇಳಬೇಡಿ ಎಂದು ಡಾ. ಭಟ್ ಅವರಲ್ಲಿ ಮನವಿ ಮಾಡಿದ್ದೇವೆ. ಏನಿದ್ದರೂ ಜನತಾ ಜನಾರ್ಧನನ ಬಳಿ ಹೋಗಿ ಭಿಕ್ಷೆ ಕೇಳುತ್ತೇವೆ ಎಂದು ನಳಿನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದರು.

ಉರ್ದು ಶಾಲೆಗೂ ಅನುದಾನ:

ಜಾಹೀರಾತು

ಕಟೀಲು ದೇವಳದಿಂದಲೂ ನಾನಾ ಶಾಲೆಗಳಿಗೆ ಅನುದಾನ ಹೋಗುತ್ತದೆ. ಅದರಲ್ಲಿ ಉರ್ದು ಶಾಲೆಯೂ ಸೇರಿದೆ. ಎಂದಿಗೂ ದೇವಸ್ಥಾನದ ಹಣ ಬಡಮಕ್ಕಳ ವಿದ್ಯಾಭ್ಯಾಸಕ್ಕೆ ದೊರಕುವುದಾದರೆ ಅದಕ್ಕೆ ಕಲ್ಲು ಹಾಕುವ ಕೆಲಸವನ್ನು ನಾವು ಮಾಡಿಲ್ಲ ಎಂದು ನಳಿನ್ ಹೇಳಿದರು.

ಎಲ್ಲವೂ ಹೊರಬರಲಿ:

ಶರತ್ ಮಡಿವಾಳ ಹತ್ಯೆ ಹಿಂದಿನ ಶಕ್ತಿಗಳ ಪಾತ್ರಗಳ ಕುರಿತು ತನಿಖೆಯಾಗಲಿ. ನಿರಪರಾಗಳನ್ನು ಪೊಲೀಸರು ಬಂಧಿಸುವುದಿಲ್ಲ ಎಂಬ ವಿಶ್ವಾಸವಿದೆ. ಹತ್ಯೆ ಆರೋಪಿಗಳನ್ನು ಬಂಸಿದ ಜಿಲ್ಲಾ ಪೊಲೀಸರಿಗೆ ಅಭಿನಂದಿಸುತ್ತೇನೆ ಎಂದ ನಳಿನ್, ಹತ್ಯೆಗೆ ಸಂಬಂತ ಎಲ್ಲ ಮಾಹಿತಿಗಳೂ ಹೊರಬರಲಿ ಎಂದು ಆಶಿಸಿದರು.

ಜಾಹೀರಾತು

ಸರ್ವೀಸ್ ರಸ್ತೆ:

ಒಟ್ಟು ಮೂರು ಸರ್ವೀಸ್ ರಸ್ತೆಗಳ ಅಭಿವೃದ್ಧಿಗೆ 19 ಕೋಟಿ ರೂ ಅನುದಾನ ಮಂಜೂರುಗೊಂಡಿದೆ. ಅದರಲ್ಲಿ ಬಿ.ಸಿ.ರೋಡ್ ಸರ್ವೀಸ್ ರಸ್ತೆಯೂ ಒಳಗೊಂಡಿದೆ. ಕೆಲ ತಾಂತ್ರಿಕ ಕಾರಣಗಳಿಂದ ರಸ್ತೆ ದುರಸ್ತಿ ಕೆಲಸಕ್ಕೆ ಹಿನ್ನಡೆಯಾಗಿದೆ. ಮಳೆಗಾಲ ಮುಗಿದ ಕೂಡಲೇ ಕಾಮಗಾರಿ ನಡೆಯಲಿದೆ ಎಂದು ನಳಿನ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು, .ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಸುಲೋಚನಾ ಜಿ.ಕೆ. ಭಟ್, ದೇವದಾಸ ಶೆಟ್ಟಿಜಿ.ಆನಂದ, ದಿನೇಶ್ ಅಮ್ಟೂರು, ಮೋನಪ್ಪ ದೇವಸ್ಯ, ದಿನೇಶ್ ಭಂಡಾರಿ, ಚೆನ್ನಪ್ಪ ಕೋಟ್ಯಾನ್, ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕಲ್ಲಡ್ಕ ಶಾಲೆಗೆ ಅನುದಾನ ಸ್ಥಗಿತ ವಿಚಾರ ಸಚಿವರಿಗೆ ಶೋಭೆಯಲ್ಲ: ನಳಿನ್ ಕುಮಾರ್ ಕಟೀಲ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*