ಜಕ್ರಿಬೆಟ್ಟು ಗಣೇಶೋತ್ಸವ ವೈಭವದ ಶೋಭಾಯಾತ್ರೆ

pic: kishore peraje

ಜಕ್ರಿಬೆಟ್ಟು ದಾಸ ರೈ ಮೈದಾನದಲ್ಲಿ ಐದು ದಿನಗಳ ಕಾಲ ಸಚಿವ ಬಿ.ರಮಾನಾಥ ರೈ ಗೌರವಾಧ್ಯಕ್ಷತೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ವತಿಯಿಂದ ಆರಾಧಿಸಲ್ಪಟ್ಟ 14ನೇ ವರ್ಷದ ಶ್ರೀ ಗಣೇಶೋತ್ಸವ ಶೋಭಾಯಾತ್ರೆ ಮಂಗಳವಾರ ರಾತ್ರಿ ವೈಭವಯುತವಾಗಿ ನಡೆಯಿತು.

ಚಿತ್ರ: ಕಿಶೋರ್ ಪೆರಾಜೆ

ಸಂಜೆ ವಿಸರ್ಜನಾ ಪೂಜೆ ಬಳಿಕ ನಡೆದ ಶ್ರೀಗಣಪತಿಯ ಆಕರ್ಷಕ ಶೋಭಾಯಾತ್ರೆ ಸಂದರ್ಭ ಮಳೆ ಸುರಿದರೂ ಲೆಕ್ಕಿಸದೆ ಸಾವಿರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡರು. ಇದಕ್ಕೂ ಮೊದಲು ವೇದಿಕೆಯಲ್ಲಿ ನಾಸಿಕ್ ಬ್ಯಾಂಡ್, ಹುಲಿವೇಷ, ಶಿಲ್ಪ ಗೊಂಬೆಗಳ ವಿಶೇಷ ನೃತ್ಯ ಪ್ರದರ್ಶನಗಳು ಮನಸೆಳೆದವು.
ಬಳಿಕ ಆರಾಧನ ಸ್ಥಳದಿಂದ ಹೊರಟ ಶ್ರೀ ಗಣೇಶನ ಶೋಭಾಯಾತ್ರೆ ಜಕ್ರಿಬೆಟ್ಟು ಜಂಕ್ಷನ್ ಗೆ ತೆರಳಿ ವಾಪಾಸ್ ಬೈಪಾಸ್ ರಸ್ತೆಯ ರಾಜಾಮಾರ್ಗದಲ್ಲಿ ಸಂಚರಿಸಿ ತುಂಬೆ ಜಂಕ್ಷನ್, ಅಜೆಕಲ, ಭಂಡಾರಿಬೆಟ್ಟುವಿನ ನೆರೆವಿಮೋಚನಾ ರಸ್ತೆಯ ಮೂಲಕ ಬಂಟ್ವಾಳ ಪೇಟೆ, ತ್ಯಾಗರಾಜ ರಸ್ತೆಯಾಗಿ ಶ್ರೀ ವೆಂಕಟರಮಣ ದೇವಸ್ಥಾನದ ಬಳಿ ನೇತ್ರಾವತಿ ನದಿಯಲ್ಲಿ ಜಲಸ್ತಂಭನಗೊಳಿಸಲಾಯಿತು.

ಜಾಹೀರಾತು

ಚಿತ್ರ: ಕಾರ್ತಿಕ್ ಸ್ಟುಡಿಯೋ, ಬಿ.ಸಿ.ರೋಡ್

ಶೋಭಾಯಾತ್ರೆಯಲ್ಲಿ ಆಕರ್ಷಕ ಸುಡುಮದ್ದು ಪ್ರದರ್ಶನ, ಟ್ಯಾಬ್ಲೊಗಳು, ಸ್ತಬ್ದಚಿತ್ರಗಳು, ಹುಲಿವೇಷ, ಗೊಂಬೆಕುಣಿತಗಳು ವಿಜೃಂಭಿಸಿದವು.
ಐದು ದಿನಗಳ ಕಾಲ ನಡೆದ ಶ್ರೀ ಗಣೇಶೋತ್ಸವದಲ್ಲಿ ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ಮೇಳೈದವು.
ವಿವಿಧ ಮಠಾಧೀಶರ ಉಪಸ್ಥಿತಿಯಲ್ಲಿ ಧಾರ್ಮಿಕ ನೇತಾರರ, ಗಣ್ಯರ, ಶಾಸಕರು, ಇನ್ನಿತರ ಜನಪ್ರತಿನಿಧಿಗಳ ಪಾಲ್ಗೊಳ್ಳುವಿಕೆಯಲ್ಲಿ ಧಾರ್ಮಿಕ ಸಭೆಗಳು ನಡೆದವು.

ಚಿತ್ರ: ಕಿಶೋರ್ ಪೆರಾಜೆ

ಐದು ದಿನಗಳ ಕಾಲ ನಿರಂತರ ಸಾರ್ವಜನಿಕ ಅನ್ನಸಂತರ್ಪಪಣೆ ಚಹಾ, ಉಪಾಹಾರ ವ್ಯವಸ್ಥೆ ಯನ್ನು ಕಲ್ಲಿಸಲಾಗಿತ್ತು.
ಸಮಿತಿಯ ಗೌರವಾಧ್ಯಕ್ಷ ಸಚಿವ ರಮಾನಾಥ ರೈ ಮಾರ್ಗದರ್ಶನದಲ್ಲಿ ಸಮಿತಿ ಅಧ್ಯಕ್ಷ ಜಿಲ್ಲಾ ಪಂಚಾಯತ್ ಸದಸ್ಯ ಪದ್ಮಶೇಖರ ಜೈನ್, ಪದಾಧಿಕಾರಿಗಳಾದ ಚಂದ್ರಪ್ರಕಾಶ ಶೆಟ್ಟಿ, ಮಾಯಿಲಪ್ಪ ಸಾಲ್ಯಾನ್, ಸದಾಶಿವ ಬಂಗೇರ, ಪಿಯೂಸ್ ಎಲ್. ರೊಡ್ರಿಗಸ್, ರಾಜೀವ ಶೆಟ್ಟಿ ಎಡ್ತೂರು, ಜನಾರ್ದನ ಚಂಡ್ತಿಮಾರ್, ಪ್ರವೀಣ ಕಿಣಿ, ಬೇಬಿಕುಂದರ್, ದಿನೇಶ್ ಶೆಣೈ ಕಲ್ಲಡ್ಕ, ಬಿ.ಪ್ರವೀಣ್, ಜಗನ್ನಾಥ ತುಂಬೆ, ವೆಂಕಪ್ಪ ಪೂಜಾರಿ ಬಂಟ್ವಾಳ, ಮಾಧವ ಮಾವೆ, ಚಂದ್ರಹಾಸ ಕರ್ಕೇರ ಸಹಿತ ಜಿಪಂ, ತಾಪಂ, ಪುರಸಭೆ ಸದಸ್ಯರು ಪಾಲ್ಗೊಂಡಿದ್ದರು. ಸುದರ್ಶನ ಬಲ್ಲಾಳ್ ನಾವೂರ ಅವರು ಪೌರೋಹಿತ್ಯದ ವಿಧಿ ವಿಧಾನ ನೆರವೇರಿಸಿದರು.

ಚಿತ್ರ: ಕಿಶೋರ್ ಪೆರಾಜೆ

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಜಕ್ರಿಬೆಟ್ಟು ಗಣೇಶೋತ್ಸವ ವೈಭವದ ಶೋಭಾಯಾತ್ರೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*