ಆಂಬುಲೆನ್ಸ್ ಉಚಿತ ಸೇವೆ ವಿಟ್ಲದಲ್ಲಿ ಲೋಕಾರ್ಪಣೆ

ವಿಟ್ಲದಡಿ ಗ್ರೂಪ್ವತಿಯಿಂದ ಉಚಿತ ಸೇವೆಯ ಆಂಬ್ಯುಲೆನ್ಸ್ ವಾಹನವನ್ನು ವಿಟ್ಲದಲ್ಲಿ ಲೋಕಾರ್ಪಣೆಗೊಳಿಸಲಾಯಿತು.

ಜಾಹೀರಾತು

ಎಸ್ಡಿಪಿಐ ಜಿಲ್ಲಾಧ್ಯಕ್ಷ ಹನೀಫ್ಖಾನ್ ಕೊಡಾಜೆ ಅವರು ಆಂಬ್ಯುಲೆನ್ಸ್ ಸೇವೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿ ನಿಸ್ವಾರ್ಥ ಸೇವೆಗಳು ಸಮಾಜದಲ್ಲಿ ಕಡಿಮೆಯಾಗುತ್ತಿರುವ ಕಾಲಘಟ್ಟದಲ್ಲಿ ಡಿ ಗ್ರೂಪ್ ಸಮಾಜ ಸೇವೆಗಾಗಿ ಲಕ್ಷಾಂತರ ರೂ. ವೆಚ್ಚದಲ್ಲಿ ಆಂಬ್ಯುಲೆನ್ಸ್ ಸೇವೆಯನ್ನು ಸಮಾಜಕ್ಕೆ ಅರ್ಪಣೆ ಮಾಡಿದ ಕಾರ್ಯ ಶ್ಲಾಘನೀಯವಾಗಿದೆ. ಸಮುದಾಯಕ್ಕಾಗಿ ಯಾರು ಸವಲತ್ತುಗಳನ್ನು ಮಾಡಿಕೊಡಬೇಕಾಗಿತ್ತೋ ಅವರು ನಿರ್ಲಕ್ಷ್ಯ ಮಾಡಿ ಮಾಡಿಕೊಡದೆ ಇದ್ದಾಗ, ನಮ್ಮ ಯುವಕರೇ ಸ್ವತಹ ಉತ್ಸುಕತೆಯಿಂದ ಮಾಡಿದ ಇಂತಹ ಉಚಿತ ಆಂಬ್ಯುಲೆನ್ಸ್ ಸೇವೆಯು ಎಲ್ಲಾ ಊರಿನವರಿಗೂ ಮಾದರಿಯಾಗಿದೆ ಎಂದು ಹೇಳಿದರು.

ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪ್ರಶಾಂತ್ ಮಾತನಾಡಿ ಬೆಳೆಯುತ್ತಿರುವ ವಿಟ್ಲ ಪರಿಸರಕ್ಕೆ ಆಂಬ್ಯುಲೆನ್ಸ್ ಸೇವೆ ಅತ್ಯಾವಶ್ಯಕವಾಗಿ ಬೇಕು. ಒತ್ತಡದ ಸಮಯದಲ್ಲಿ ಬೇರೆ ಊರಿನಿಂದ ಆಂಬ್ಯುಲೆನ್ಸ್ ಕರೆಸುವ ಅನಿವಾರ್ಯತೆ ಎದುರಾಗುತ್ತಿದೆ. ಆಂಬ್ಯುಲೆನ್ಸ್ ಸೇವೆಯಿಂದ ಬಡವರು ಹೆಚ್ಚಿನ ಪ್ರಯೋಜನ ಪಡೆಯಲಿದ್ದಾರೆ ಎಂದು ತಿಳಿಸಿದರು.

ಜಾಹೀರಾತು

ವಿಟ್ಲ ಕೇಂದ್ರ ಜುಮಾ ಮಸೀದಿ ಖತೀಬು ಅಬ್ದುಸ್ಸಲಾಂ ಲತೀಫಿ ದುವಾಃ ಆಶೀರ್ವಚನ ನೀಡಿದರು.

ಎಸ್ಡಿಪಿಐ ಜಿಲ್ಲಾ ಸಮಿತಿ ಸದಸ್ಯ ಖಲಂದರ್ ಪರ್ತಿಪ್ಪಾಡಿ ,..ಜಿಲ್ಲಾ ಯುವ ಕಾಂಗ್ರೆಸ್ ಲುಕ್ಮಾನ್ ಬಂಟ್ವಾಳ, ಯುಟಿ ತೌಸೀಫ್ ಪುತ್ತೂರು, ಇಬ್ರಾಹಿಂ ಏರ್ ಸೌಂಡ್ಸ್, ಇಬ್ರಾಹಿಂ ಹಾಜಿ ಪೊನ್ನೋಟ್ಟು, ಹೊರೈಝನ್ ಪಬ್ಲಿಕ್ ಸ್ಕೂಲ್ ಅಧ್ಯಕ್ಷ ಮಹಮ್ಮದ್ ಇಕ್ಬಾಲ್ ಹಾನೆಸ್ಟ್, ಡಿ ಗ್ರೂಪ್ ಅಧ್ಯಕ್ಷ ವಿ.ಕೆ.ಎಂ.ಹಂಝ, ವಿ.ಕೆ.ಎಂ.ಅಬೂಸ್ವಾಲಿ, ಮಂಗಳೂರು ಬ್ಲಡ್ ಡೋನರ್ಸ್ ಅಧ್ಯಕ್ಷ ಸಿದ್ದೀಖ್ ಮಂಜೇಶ್ವರ, ಡಿ ಗ್ರೂಪ್ ಶಾಹಿದ್ ಮೇಗಿನಪೇಟೆ, ಇಸಾಕ್ ಪೊನ್ನೋಟ್ಟು ಮೊದಲಾದವರು ಉಪಸ್ಥಿತರಿದ್ದರು.

ಬೆಂಗಳೂರು ಹೈಕೋರ್ಟ್ ನ್ಯಾಯವಾದಿ ಅನ್ಸಾರ್ ವಿಟ್ಲ ಸ್ವಾಗತಿಸಿದರು. ನೌಫಲ್ ಕುಡ್ತಮುಗೇರು ನಿರೂಪಿಸಿದರು. ಹಂಝ ಮೇಗಿನಪೇಟೆ ಹಾಗೂ ವಿ.ಎಚ್ ರಿಯಾಝ್ ಸಹಕರಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಆಂಬುಲೆನ್ಸ್ ಉಚಿತ ಸೇವೆ ವಿಟ್ಲದಲ್ಲಿ ಲೋಕಾರ್ಪಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*