ಕಡೇಶ್ವಾಲ್ಯ ದೇವಸ್ಥಾನದಲ್ಲಿ ಕಳವು

ಬಂಟ್ವಾಳ ತಾಲೂಕಿನ ಕಡೇಶಿವಾಲಯ ಚಿಂತಾಮಣಿ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ಭಾನುವಾರ ತಡರಾತ್ರಿ  ಸುಮಾರು 5,13,000 ರೂ ಮೌಲ್ಯದ ಸೊತ್ತುಗಳನ್ನು ಕಳವು ಮಾಡಲಾಗಿದೆ  ಎಂದು ಎಸ್.ಐ. ಉಮೇಶ್ ಬಂಟ್ವಾಳನ್ಯೂಸ್ ಗೆ ತಿಳಿಸಿದ್ದಾರೆ.

ಜಾಹೀರಾತು

ಬಂಟ್ವಾಳ ತಾಲೂಕಿನಲ್ಲಿ ಪ್ರಮುಖ ಕಾರಣಿಕದ ದೇವಸ್ಥಾನ ಇದಾಗಿದ್ದು, ಇಲ್ಲಿ ಸಿಸಿ ಟಿವಿ ಕ್ಯಾಮರಾವನ್ನೂ ಅಳವಡಿಸಲಾಗಿತ್ತು. ಆದರೆ ಕಳ್ಳರು ಕ್ಯಾಮರಾದಲ್ಲಿ ತಮ್ಮ ಗುರುತುಗಳು ಹೊರಜಗತ್ತಿಗೆ ಬಾರದಂತೆ ಅದರಲ್ಲಿದ್ದ  ಫೂಟೇಜ್ ಗಳನ್ನು ಹೊತ್ತೊಯ್ದಿದ್ದಾರೆ.

ಗರ್ಭಗುಡಿಯಲ್ಲಿದ್ದ ಲಕ್ಷ್ಮೀನರಸಿಂಹ ದೇವರ ಮೂರ್ತಿ ಚಿನ್ನದ ಪ್ರಭಾವಳಿ, ಹುಂಡಿಯಲ್ಲಿದ್ದ ಹಣವನ್ನು ಹಾಗೂ ದೇವರಿಗೆ ಹಾಕಿದ ಆಭರಣಗಳನ್ನು ಕಳ್ಳರು ಕದ್ದೊಯ್ದಿದ್ದಾರೆ.

ಜಾಹೀರಾತು

ಹೇಗೆ ನುಗ್ಗಿದರು?

ದೇವಸ್ಥಾನದ ಮುಂಬಾಗಿಲು ಮುರಿದು ಒಳಹೊಕ್ಕ ಕಳ್ಳರು, ಮುಖ್ಯ ದೇವರ ಗರ್ಭಗುಡಿಯ ಬಾಗಿಲು ಮುರಿದು ಒಳಗೆ ಹೋಗಿದ್ದಾರೆ. ಅಲ್ಲಿಂದ ಗರ್ಭಗುಡಿಯಲ್ಲಿದ್ದ ದೇವರ ಮೂರ್ತಿಯ ಪ್ರಭಾವಳಿಯನ್ನು ಮತ್ತು ಹುಂಡಿಯನ್ನ ತಡಕಾಡಿದ್ದಾರೆ. ಬಳಿಕ ದೇವಸ್ಥಾನದ ಸಿಸಿ ಕ್ಯಾಮರಾವನ್ನು ಹಾಳುಗೆಡವಿ ಅದರ ಫೂಟೇಜ್ ಗಳನ್ನು ಹೊತ್ತೊಯ್ದಿದ್ದಾರೆ.

ದೇವಸ್ಥಾನದ ಅರ್ಚಕರು ಬೆಳಗ್ಗೆ ಪೂಜೆ ಕಾರ್ಯಕ್ಕೆ ತೆರಳಿದ ಸಂದರ್ಭ ಘಟನೆ ಗಮನಕ್ಕೆ ಬಂದಿದೆ. ಬಳಿಕ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಎಸ್.ಐ. ಉಮೇಶ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದರು. ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರನ್ನು ಕರೆಸಲಾಗಿದ್ದು, ಪರಿಶೀಲನೆ ನಡೆಸಲಾಯಿತು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕಡೇಶ್ವಾಲ್ಯ ದೇವಸ್ಥಾನದಲ್ಲಿ ಕಳವು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*