ಬೈಕ್ ಸವಾರನ ಪ್ರಾಣ ಉಳಿಸಿದ ಲಾರಿ ಚಾಲಕ ಸಾವು

ಬೈಕ್ ಸವಾರನ ಪ್ರಾಣ ಉಳಿಸಲು ಹೋಗಿ ಲಾರಿ ಚಾಲಕ ಮೃತಪಟ್ಟ ದಾರುಣ ಘಟನೆ ರಾಷ್ಟ್ರೀಯ ಹೆದ್ದಾರಿ ಕಲ್ಲಡ್ಕ ಸಮೀಪ ದಾಸಕೋಡಿ ಎಂಬಲ್ಲಿ ಮಂಗಳವಾರ ನಡೆದಿದೆ.


ಶೃಂಗೇರಿಕೋಟ ನಿವಾಸಿ ಸುರೇಶ್ (45) ಸಾವನ್ನಪ್ಪಿದವರು. ಲಾರಿ ಕ್ಲೀನರ್ ಹೆಬ್ರಿಯ ಗುರುದತ್ ಗಾಯಗೊಂಡಿದ್ದಾರೆ.
ಘಟನೆ ವಿವರ:
ಮಾಣಿಯಿಂದ ಮೇಲ್ಕಾರ್ ಕಡೆಗೆ ಲಾರಿ ತೆರಳುತ್ತಿದ್ದ ಸಂದರ್ಭ ಘಟನೆ ನಡೆದಿದೆ. ನೀರಪಾದೆ ಕಡೆಗೆ ತೆರಳುತ್ತಿದ್ದ ಆಕ್ಟೀವ ಅಡ್ಡಬಂದ ಪರಿಣಾಮ, ಅದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಲಾರಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಯಿತು. ಈ ಸಂದರ್ಭ ಗಂಭೀರ ಸ್ವರೂಪದ ಗಾಯಗಳುಂಟಾದ ಕಾರಣ ಚಾಲಕ ಸ್ಥಳದಲ್ಲೇ ಮೃತಪಟ್ಟರು.
ಮಾನವೀಯತೆ ಮೆರೆದ ಎಸ್.ಐ.

ಜಾಹೀರಾತು


ಉಪ್ಪಿನಂಗಡಿ ಎಸ್‌ಐ ನಂದಕುಮಾರ್ ಪ್ರಕರಣವೊಂದಕ್ಕೆ ಸಂಬಂಧಿಸಿ ಬಂಟ್ವಾಳಕ್ಕೆ ಆಗಮಿಸಿ ವಾಪಾಸು ಉಪ್ಪಿನಂಗಡಿಗೆ ತೆರಳುತ್ತಿದ್ದಾಗ ದಾಸಕೋಡಿ ಬಳಿ ಅಪಘಾತಕ್ಕೊಳಗಾದ ಲಾರಿ ಚಾಲಕ ಮತ್ತು ಕ್ಲೀನರ್ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದಿರುವುದು ಕಂಡುಬಂತು. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಯಾವುದೇ ವಾಹನಗಳು ಮುಂದೆ ಬರದ ಹಿನ್ನೆಲೆಯಲ್ಲಿ ಎಸ್. ಐ. ನಂದಕುಮಾರ್ ಅವರೇ ತಮ್ಮ ಪೊಲೀಸ್ ವಾಹನದಲ್ಲಿ ಗಾಯಾಳುಗಳನ್ನು ಬಿ.ಸಿ.ರೋಡಿಗೆ ಕರೆದುಕೊಂಡು ಆಸ್ಪತ್ರಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಎಸ್ .ಐ. ನಂದಕುಮಾರ್ ತಮ್ಮ ಕರ್ತವ್ಯದ ಒತ್ತಡದ ನಡುವೆಯೂ ಗಾಯಾಳುಗಳನ್ನು ತಮ್ಮ ವಾಹನದಲ್ಲೆ ಕರೆದುಕೊಂಡು ಆಸ್ಪತ್ರೆಗೆ ದಾಖಲಿಸಿರುವುದು ಶ್ಲಾಘನೆಗೆ ಒಳಗಾಗಿದೆ. ಅಪಘಾತಕ್ಕೆ ಸಂಬಂಧಿಸಿ ಬಂಟ್ವಾಳ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬೈಕ್ ಸವಾರನ ಪ್ರಾಣ ಉಳಿಸಿದ ಲಾರಿ ಚಾಲಕ ಸಾವು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*