ಕವಿ ಗೋಪಾಲಕೃಷ್ಣ ಅಡಿಗರನ್ನು ಸರಕಾರ ನೆನಪಿಸುವ ಕಾರ್ಯ ಅಗತ್ಯ: ಡಾ. ನರಹಳ್ಳಿ

ಈ ಶತಮಾನದ ಶ್ರೇಷ್ಠ ಕವಿಗಳಲ್ಲೊಬ್ಬರಾದ ಮೊಗೇರಿ ಗೋಪಾಲಕೃಷ್ಣ ಅಡಿಗರನ್ನು ಸರಕಾರ ನೆನಪಿಸುವ ಕೆಲಸ ಮಾಡಬೇಕಾಗಿದೆ. ಅಡಿಗರ ಜನ್ಮಶತಮಾನೋತ್ಸವವನ್ನು ನಾಡು ವಿಜೃಂಭಣೆಯಿಂದ ಆಚರಿಸಬೇಕು. ಡಿಸೆಂಬರ್ ನಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ವತಿಯಿಂದ ರಾಷ್ಟ್ರೀಯ ವಿಚಾರಸಂಕಿರಣವನ್ನು ಅಡಿಗರ ಕುರಿತು ನಡೆಸುವ ಯೋಜನೆ ಇದೆ ಎಂದು ಕನ್ನಡ ಭಾಷಾ ಸಲಹಾ ಮಂಡಳಿ ಸಂಚಾಲಕ ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ಹೇಳಿದರು.

ಜಾಹೀರಾತು

ಬಂಟ್ವಾಳದ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಭಾನುವಾರ ಬಂಟ್ವಾಳ ಜೋಡುಮಾರ್ಗದ ಮೊಗೇರಿ ಗೋಪಾಲಕೃಷ್ಣ ಅಡಿಗ ಶತಮಾನೋತ್ಸವ ಸಮಿತಿ ವತಿಯಿಂದ ಕವಿ ಗೋಪಾಲಕೃಷ್ಣ ಅಡಿಗರ ಜನ್ಮಶತಮಾನೋತ್ಸವ ಕಾರ್ಯಕ್ರಮ ಹಾಗೂ ವಿಚಾರಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜಸೇವೆ ಅರ್ಥ ಕಳೆದುಕೊಳ್ಳುತ್ತಿರುವ ಈ ಹೊತ್ತಿನಲ್ಲಿ ಇಂಥದ್ದೊಂದು ವಿಚಾರಸಂಕಿರಣವನ್ನು ಊರ ಸಾಹಿತ್ಯಾಭಿಮಾನಿಗಳು ಹಮ್ಮಿಕೊಂಡಿರುವುದು ಸಂತೋಷದ ಸಂಗತಿ ಎಂದ ಅವರು, ಪ್ರಶ್ನಿಸುವ ಮನೋಭಾವವನ್ನು ಕಲಿಸಿದ ಅಡಿಗರ ಸಾಹಿತ್ಯ ಇಂದು ಪ್ರಸ್ತುತ ಎಂದರು. ಅಡಿಗರ ಕಾವ್ಯಗಳಲ್ಲಿ ಆದರ್ಶ, ವಾಸ್ತವಗಳ ಮುಖಾಮುಖಿ ಇದೆ. ಅವರನ್ನು ಶೋಧಿಸುವ ಕಾವ್ಯ. ಇಂದು ಕವಿಗಳ ನೆನಪು, ವಿಚಾರಸಂಕಿರಣಗಳು ಏಕೆ ಪ್ರಸ್ತತವೆಂದರೆ ಧ್ಯಾನಶೀಲ ಮನಸ್ಸಿನ ಸ್ಥಿತಿಯನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಸಾಹಿತ್ಯದ ಪ್ರಸ್ತುತತೆ ಸಾಮಾಜಿಕ ಆಕ್ರಮಣಗಳಿಂದ ತಪ್ಪಿಸಿಕೊಳ್ಳುವ ಅಡಗುದಾಣಗಳು ಇದ್ದಂತೆ. ನಮ್ಮನ್ನು ನಾವು ಕಾಪಾಡಿಕೊಳ್ಳಲು ಸಾಹಿತ್ಯ ಬೇಕು, ನಮ್ಮ ಕಾಲದ ಸವಾಲು ಇದು ಎಂದು ಡಾ. ನರಹಳ್ಳಿ ಹೇಳಿದರು.

ಹಿರಿಯ ಸಾಹಿತಿ, ಶತಮಾನೋತ್ಸವ ಸಮಿತಿ ಅಧ್ಯಕ್ಷ ಡಾ. ಏರ್ಯ ಲಕ್ಷ್ಮೀನಾರಾಯಣ ಆಳ್ವ ಮಾತನಾಡಿ, ವಿಚಾರಸಂಕಿರಣದ ಉದ್ದೇಶವನ್ನು ವಿವರಿಸಿದರು.

ಜಾಹೀರಾತು

ಪ್ರಧಾನ ಅತಿಥಿಯಾಗಿ ವಿಮರ್ಶಕ ಡಾ.ಎಚ್.ಎಸ್.ರಾಘವೇಂದ್ರ ರಾವ್ ಭಾಗವಹಿಸಿ ಮಾತನಾಡಿ, ಅಡಿಗರ ಸಾಹಿತ್ಯದ ಕುರಿತು ಬೆಳಕು ಚೆಲ್ಲಿದರು. ಅಡಿಗರ ಗದ್ಯ ಸಾಹಿತ್ಯ ಕುರಿತು ವಿಶ್ರಾಂತ ಪ್ರಾಧ್ಯಾಪಕ ಡಾ. ಆರ್. ನರಸಿಂಹಮೂರ್ತಿ ಉಪನ್ಯಾಸ ನೀಡುವರು. ಬಳಿಕ ಅಡಿಗರ ಕಾವ್ಯಾನುಸಂಧಾನ ಕುರಿತು ಚಿಂತಕ ಲಕ್ಷ್ಮೀಶ ತೋಳ್ಪಾಡಿ ಉಪನ್ಯಾಸ ನೀಡಿದರು. ಎಚ್.ಎಸ್. ಚಂದ್ರಶೇಖರ ಕೆದ್ಲಾಯ ಬ್ರಹ್ಮಾವರ ಅವರು ಅಡಿಗರ ಕಾವ್ಯ ಗಾಯನ ಪ್ರಸ್ತುತ ಪಡಿಸಿದರು.

ಸಮಿತಿ ಉಪಾಧ್ಯಕ್ಷರಾದ ವಿಶ್ವನಾಥ ಬಂಟ್ವಾಳ, ಕಸಾಪ ತಾಲೂಕು ಘಟಕ ಅಧ್ಯಕ್ಷ ಕೆ. ಮೋಹನ ರಾವ್, ಸಮಿತಿ ಕೋಶಾಧಿಕಾರಿ ಬಿ.ತಮ್ಮಯ್ಯ, ಮಹಾಬಲೇಶ್ವರ ಹೆಬ್ಬಾರ ಮೊದಲಾದವರು ಉಪಸ್ಥಿತರಿದ್ದರು. ಉಪಾಧ್ಯಕ್ಷ ಕೆ.ಮೋಹನ ರಾವ್ ವಂದಿಸಿದರು.ಕಾರ್ಯದರ್ಶಿ ಡಾ. ಅಜಕ್ಕಳ ಗಿರೀಶ ಭಟ್ಟ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕವಿ ಗೋಪಾಲಕೃಷ್ಣ ಅಡಿಗರನ್ನು ಸರಕಾರ ನೆನಪಿಸುವ ಕಾರ್ಯ ಅಗತ್ಯ: ಡಾ. ನರಹಳ್ಳಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*