ತೆಂಗಿನ ಗೆರಟೆ ಬಿಸಾಡುವ ಮುನ್ನ…

  • ಡಾ.ಎ.ಜಿ.ರವಿಶಂಕರ್

www.bantwalnews.com

ಜಾಹೀರಾತು

ಕಾಯಿ ತುರಿದ ನಂತರ ಗೆರಟೆಯನ್ನು ಬಿಸಾಡುತ್ತೇವೆ ಅಥವಾ ಒಲೆಗೆ ಹಾಕುತ್ತೇವೆ. ಆದರೆ ನಿತ್ಯ ಜೀವನದಲ್ಲಿ ಹಲವಾರು ಸಂದರ್ಭಗಳಲ್ಲಿ ಗೆರಟೆಯು ಸದುಪಯೋಗವಾಗುತ್ತದೆ.

  1. ಗೆರಟೆಯು ಘನವಾದ ವಸ್ತುಗಳು ಸುಲಭವಾಗಿ ಬೇಯಲು ಸಹಕರಿಸುತ್ತದೆ .ಮಾಂಸ,ಮುಂಡಿ ,ಕೇನೆ ಇತ್ಯಾದಿಗಳನ್ನು ಬೇಯಿಸುವಾಗೆ ಇವುಗಳ ಜೊತೆ 2 ರಿಂದ 3 ತುಂಡು ಗೆರಟೆ ಸೇರಿಸಿದರೆ ಅವುಗಳು ಚೆನ್ನಾಗಿ ಬೆಂದು ಸುಲಭವಾಗಿ ಶರೀರದಲ್ಲಿ ಜೀರ್ಣವಾಗಲು ಸಹಕರಿಸುತ್ತದೆ.
  2. ಗೆರಟೆ ಸಾರು – ಗೆರಟೆಯನ್ನು ಹಾಕಿ ಸಾರು ಮಾಡಿ ಉಪಯೋಗಿಸುವುದರಿಂದ ಜಠರದ ಅಗ್ನಿಬಲ ಮತ್ತು ಜೀರ್ಣಶಕ್ತಿ ಅಧಿಕವಾಗುತ್ತದೆ.
  3. ಗೆರಟೆಯನ್ನು ಪುಡಿಮಾಡಿ ನೀರಿಗೆ ಹಾಕಿ ಕಷಾಯಮಾಡಿ ಬಾಯಿ ಮುಕ್ಕಳಿಸುವುದರಿಂದ ಹಲ್ಲು ನೋವು ಹಾಗು ನಾಲಿಗೆಯಲ್ಲಿನ ಅಗ್ರ ಕಡಿಮೆಯಾಗುತ್ತದೆ.
  4. ಗೆರಟೆಯ ಕಷಾಯದಲ್ಲಿ ಬಾಯಿ ಮುಕ್ಕಲಿಸುವುದರಿಂದ ಅಥವಾ ಗೆರಟೆಯ ಮಸಿಯನ್ನು ಜೇನುತುಪ್ಪದಲ್ಲಿ ಕಲಸಿ ಹಚ್ಚುವುದರಿಂದ ವಸಡಿನ ರಕ್ತಸ್ರಾವ ಕಡಿಮೆಯಾಗುತ್ತದೆ.
  5. ಗೆರಟೆಯನ್ನು ಉರಿಸಿ ಮಸಿಮಾಡಿ ತೆಂಗಿನ ಎಣ್ಣೆಯಲ್ಲಿ ಕಲಸಿ ಹಚ್ಚುವುದರಿಂದ ತುರಿಕೆ ಇರುವ ಕಜ್ಜಿ (Eczema) ಸೋರಿಯಸಿಸ್ ಇತ್ಯಾದಿ ಚರ್ಮ ರೋಗಗಳು ಕಡಿಮೆಯಾಗುತ್ತದೆ.
  6. ಗೆರಟೆಯ ಮಸಿಯನ್ನು ತೆಂಗಿನ ಎಣ್ಣೆಯಲ್ಲಿ ಕಲಸಿ ಬಿಸಿಮಾಡಿ ಕುರದ ಮೇಲೆ ಹಚ್ಚಿದರೆ ಕುರ ಬೇಗನೆ ಸೊರುತ್ತದೆ.
  7. ಗೆರಟೆಯ ಮಸಿಯನ್ನು ತೆಂಗಿನ ಎಣ್ಣೆಯಲ್ಲಿ ಕಲಸಿ ಹುಣ್ಣಿನ ಮೇಲೆ ಹಚ್ಚುವುದರಿಂದ ಹುಣ್ಣು ಶುದ್ಧವಾಗಿ ಬೇಗನೆ ವಾಸಿಯಾಗುತ್ತದೆ.
  8. ಗೆರಟೆಯ ಮಸಿಯನ್ನು ತೆಂಗಿನ ಎಣ್ಣೆ ಅಥವಾ ಸಾಸಿವೆ ಎಣ್ಣೆಯಲ್ಲಿ ಕಲಸಿ ಹಚ್ಚುವುದರಿಂದ ಚರ್ಮದ ಮೇಲಿನ ಸಿಬ್ಬವು ಕಡಿಮೆಯಾಗುತ್ತದೆ.
  9. ಗೆರಟೆಯನ್ನು ಶ್ರೀಗಂಧದಂತೆ ನೀರಿನಲ್ಲಿ ತೇದು ಮುಖಕ್ಕೆ ಹಚ್ಚುವುದರಿಂದ ಮೊಡವೆಗಳು ವಾಸಿಯಾಗುತ್ತವೆ.
  10. ಗೆರಟೆಯನ್ನು ನೀರಿಗೆ ಹಾಕಿ ಕುದಿಸಿ ತಲೆಗೆ ಸ್ನಾನ ಮಾಡುವುದರಿಂದ ತಲೆ ಹೊಟ್ಟು ನಿವಾರಣೆಯಾಗುತ್ತದೆ.

 

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Dr. Ravishankar A G
ಆಯುರ್ವೇದ ವೈದ್ಯಕೀಯ ಪದ್ಧತಿಯಲ್ಲಿ ಎಂ.ಎಸ್. (ಸ್ನಾತಕೋತ್ತರ) ಪದವೀಧರರಾಗಿರುವ ಡಾ.ರವಿಶಂಕರ ಎ.ಜಿ, ಮೂಡುಬಿದಿರೆ ಆಳ್ವಾಸ್ ಆಯುರ್ವೇದ ಮಹಾವಿದ್ಯಾಲಯ ಸ್ನಾತಕೋತ್ತರ ವಿಭಾಗ ಪ್ರಾಧ್ಯಾಪಕರು. ವಿಟ್ಲದಲ್ಲಿ ಚಿಕಿತ್ಸಾಲಯವನ್ನೂ ಹೊಂದಿದ್ದಾರೆ. ಮೂಲವ್ಯಾಧಿ, ಭಗಂಧರ, ಸೊಂಟನೋವು, ವಾತರೋಗ, ಶಿರಶೂಲ ಇತ್ಯಾದಿಗಳಲ್ಲಿ ಕ್ಷಾರಕರ್ಮ, ಅಗ್ನಿಕರ್ಮ, ರಕ್ತಮೋಕ್ಷಣ ಮೊದಲಾದ ವಿಶೇಷ ಚಿಕಿತ್ಸೆ ನೀಡುವುದರಲ್ಲಿ ಪರಿಣತರು.

Be the first to comment on "ತೆಂಗಿನ ಗೆರಟೆ ಬಿಸಾಡುವ ಮುನ್ನ…"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*