ಮಕ್ಕಳ ದಿನಾಚರಣೆ: ದ.ಕ. ಜಿಲ್ಲೆಯ 4 ಮಕ್ಕಳಿಗೆ ಪ್ರಶಸ್ತಿ

www.bantwalnews.com

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದಂತಹ ದಕ್ಷಿಣ ಕನ್ನಡ ಜಿಲ್ಲೆಯ 4 ಮಂದಿ ಮಕ್ಕಳಿಗೆ  ಈ ಸಾಲಿನಲ್ಲಿ ರಾಷ್ಟ್ರ್ರ  ಹಾಗೂ ರಾಜ್ಯಮಟ್ಟದ ಪ್ರಶಸ್ತಿ ಲಭಿಸಿದೆ.
ರಾಷ್ಟ್ರ ಪ್ರಶಸ್ತಿಗೆ  ಆಯ್ಕೆಯಾದ ವಿದ್ಯಾರ್ಥಿ: ಬಂಟ್ವಾಳ ತಾಲೂಕಿನ ಕೆದಿಲ ಮುರ್ಗಾಜೆಯ ಸ್ವಸ್ತಿಕ್ ಪದ್ಮ (ವಿಜ್ಞಾನದಲ್ಲಿ ಸಂಶೋಧನೆ) ಎಂಬ ವಿದ್ಯಾರ್ಥಿಯು ವಿಜ್ಞಾನ ಕ್ಷೇತ್ರದಲ್ಲಿ (ವೈಜ್ಞಾನಿಕ ಸಂಶೋಧನೆ)ಯಲ್ಲಿರುವ  ಅಸಾಧಾರಣ ಪ್ರತಿಭೆಯನ್ನು ಗುರುತಿಸಿ 2017ನೇ ಸಾಲಿನ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿದ್ದು, ನವೆಂಬರ್ 14 ರಂದು ದೆಹಲಿಯಲ್ಲಿ ರಾಷ್ಟ್ರಮಟ್ಟದಲ್ಲಿ ನಡೆಯುವ ಮಕ್ಕಳ ದಿನಾಚರಣೆಯಂದು ರಾಷ್ಟ್ರಪತಿಗಳಿಂದ  ರೂ.10,000/- ನಗದು ಹಾಗೂ ರಜತ ಪದಕದೊಂದಿಗೆ ಸನ್ಮಾನಿಸಲ್ಪಡುತ್ತಿದ್ದಾನೆ. ಈತ ಅನೇಕ ರಾಷ್ಟ್ರ, ರಾಜ್ಯ, ಜಿಲ್ಲಾ ಮಟ್ಟದ ಪ್ರಶಸ್ತಿಗಳನ್ನು ಪಡೆದಿದ್ದು, ಅಂತರಾಷ್ಟ್ರೀಯ ಮಟ್ಟದ ವಿಜ್ಞಾನ ಸ್ಪರ್ಧೆಗಳಲ್ಲಿ ಭಾಗವಹಿಸಿ ತನ್ನ ಪ್ರತಿಭೆಯನ್ನು ಪ್ರದರ್ಶಿಸಿರುತ್ತಾನೆ.
ರಾಜ್ಯ ಮಟ್ಟದಲ್ಲಿ ಸನ್ಮಾನಿಸಲ್ಪಡುತ್ತಿರುವ ವಿದ್ಯಾರ್ಥಿ: ಸುರತ್ಕಲ್ ಸುಭಾಷಿತ ನಗರದ ಎಂ. ಅದ್ವಿಕಾ ಶೆಟ್ಟಿ (ಸಾಂಸ್ಕøತಿಕ ಕ್ಷೇತ್ರ) ಎಂಬ ವಿದ್ಯಾರ್ಥಿನಿಯ ಸಾಂಸ್ಕøತಿಕ ಕ್ಷೇತ್ರದಲ್ಲಿರುವ  ಅಸಾಧಾರಣ ಪ್ರತಿಭೆಯನ್ನು ಗುರುತಿಸಿ 2017 ನೇ ಸಾಲಿನ ರಾಷ್ಟ್ರ ಪ್ರಶಸ್ತಿಗೆ ಶಿಫಾರಸ್ಸು ಮಾಡಿದ್ದು, ನವೆಂಬರ್ 14 ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಮಕ್ಕಳ ದಿನಾಚರಣೆಯಂದು  ಸನ್ಮಾನಿಸಲ್ಪಡುತ್ತಿದ್ದಾಳೆ. ಈಕೆ ಅನೇಕ ರಾಷ್ಟ್ರ ರಾಜ್ಯ, ಜಿಲ್ಲಾ ಮಟ್ಟದ ಪ್ರಶಸ್ತಿಗಳನ್ನು ಪಡೆದಿದ್ದು, ಅಂತರಾಷ್ಟ್ರೀಯ ಮಟ್ಟದ ನೃತ್ಯ  ಸ್ಪರ್ಧೆಗಳಲ್ಲಿ ಭಾಗವಹಿಸಿ ತನ್ನ ಪ್ರತಿಭೆಯನ್ನು ಪ್ರದರ್ಶಿಸಿರುತ್ತಾಳೆ.
ಶೌರ್ಯ ಪ್ರಶಸ್ತಿಗೆ ರಾಜ್ಯ ಮಟ್ಟದಲ್ಲಿ  ಆಯ್ಕೆಯಾದ 2 ವಿದ್ಯಾರ್ಥಿಗಳು: ಸಜೀಪ ಮೂಡಾ ಕುಡೂರು ಮನೆಯ ವೈಶಾಖ್,(ಶೌರ್ಯ ಪ್ರಶಸ್ತಿ), ಈತನು ಅಪಾಯಕಾರಿ ಹೆಬ್ಬಾವಿನ  ಬಾಯಿಗೆ ಸಿಲುಕಿಕೊಂಡಿದ್ದು, ಬುದ್ಧಿ ಚಾತುರ್ಯದಿಂದ ಹಾವಿನ ಬಾಯಿಯಿಂದ ತನ್ನನ್ನು ಹಾಗೂ ತನ್ನ ತಂಗಿಯನ್ನು ರಕ್ಷಿಸಿದ್ದಾನೆ.
ಪುತ್ತೂರು ತಾ. ಕೌಕ್ರಾಡಿ ಗ್ರಾಮದ ನಿತಿನ್ ಕೆ.ಆರ್. (ಶೌರ್ಯ ಪ್ರಶಸ್ತಿ), ಈತನು ವಿಷದ ಹಾವಿನಿಂದ ಕಡಿತಕ್ಕೊಳಗಾದ ತನ್ನ ತಂಗಿಯನ್ನು ತನ್ನ ಬುದ್ಧಿ ಚಾತುರ್ಯದಿಂದ ಶಾಲೆಯಲ್ಲಿ ಕಲಿತ ಪ್ರಥಮ ಚಿಕಿತ್ಸೆ ವಿಧಾನದ ಮೂಲಕ ಬಾಯಿಯಲ್ಲಿ ವಿಷವನ್ನು ಹೀರಿ ತನ್ನ ತಂಗಿಯ ಪ್ರಾಣವನ್ನು ರಕ್ಷಿಸಿದ್ದಾನೆ.
ಈ ಇಬ್ಬರ ಶೌರ್ಯವನ್ನು ಪರಿಗಣಿಸಿ 2017-18 ನೇ ಸಾಲಿನ ರಾಜ್ಯ ಮಟ್ಟದ ಶೌರ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.  ನವೆಂಬರ್ 14 ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಮಕ್ಕಳ ದಿನಾಚರಣೆಯಂದು ಸನ್ಮಾನಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಮಕ್ಕಳ ದಿನಾಚರಣೆ: ದ.ಕ. ಜಿಲ್ಲೆಯ 4 ಮಕ್ಕಳಿಗೆ ಪ್ರಶಸ್ತಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*