ದಾರಿ ಕೇಳುವ ನೆಪದಲ್ಲಿ ಚಿನ್ನದ ಸರ ಕಸಿದು ಪರಾರಿ

www.bantwalnews.com

ರಾಯಿ ಸಮೀಪದ ಕೈತ್ರೋಡಿ ಗ್ರಾಮೀಣ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ಮಹಿಳೆಯಲ್ಲಿ ದಾರಿ ಕೇಳುವ ನೆಪದಲ್ಲಿ ಅಪರಿಚಿತ ಬೈಕ್ ಸವಾರರಿಬ್ಬರು ಮಹಿಳೆ ಕತ್ತಿನಿಂದ ಚಿನ್ನದ ಸರ ಎಗರಿಸಿ ಪರಾರಿಯಾದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.

ಜಾಹೀರಾತು

ಇಲ್ಲಿನ ಕೊಯಿಲ ಗ್ರಾಮದ ಕೈತ್ರೋಡಿ ಕ್ವಾರ್ಟರ್ಸ್ ನಿವಾಸಿ ದಿವಂಗತ ಜಯ ಶೆಟ್ಟಿ ಎಂಬವರ ಪತ್ನಿ ನೇತ್ರಾವತಿ ಶೆಟ್ಟಿ ಅವರು ಮಂಗಳವಾರ ಮಧ್ಯಾಹ್ನ ಔಷಧಿ ತರಲೆಂದು ಸಿದ್ಧಕಟ್ಟೆಗೆ ತೆರಳಿ ರಾಯಿ ಪೇಟೆಗೆ ಬಸ್ಸಿನಲ್ಲಿ ವಾಪಾಸು ಬಂದಿದ್ದಾರೆ. ಇದೇ ವೇಳೆ ಸ್ಥಳೀಯ ನಿವಾಸಿ ಲೀಲಾ ಅಣ್ಣಪ್ಪ ಗೌಡ ಅವರೊಂದಿಗೆ ಮಧ್ಯಾಹ್ನ ಸುಮಾರು 1 ಗಂಟೆಗೆ ರಾಯಿ ಪೇಟೆಯಿಂದ ಕೈತ್ರೋಡಿ ಕ್ವಾರ್ಟರ್ಸ್ ಮನೆಗೆ ಡಾಂಬರು ರಸ್ತೆಯಲ್ಲಿ ನಡೆದುಕೊಂಡು ವಾಪಾಸು ಹೋಗುತ್ತಿದ್ದ ವೇಳೆ ಕೃತ್ಯ ನಡೆದಿದೆ.

ಬಿಳಿ ಬಣ್ಣದ ಜುಪಿಟರ್ ದ್ವಿಚಕ್ರ ವಾಹನದಲ್ಲಿ ಬಂದಿದ್ದ ಇಬ್ಬರ ಪೈಕಿ ಒಬ್ಬಾತನು ಮೊಬೈಲ್‌ನಲ್ಲಿ ಮಾತನಾಡುತ್ತಾ ಇವರನ್ನು ಹಿಂಬಾಲಿಸಿಕೊಂಡು ಬಂದು ರಮೇಶ ಮೇಸ್ತ್ರಿ ಮನೆಗೆ ಹೋಗುವ ದಾರಿ ಯಾವುದು ಎಂದು ವಿಚಾರಿಸಿದ್ದಾನೆ. ನೇತ್ರಾವತಿ ಶೆಟ್ಟಿ ಅವರು ತನಗೆ ಗೊತ್ತಿಲ್ಲ ಎಂದು ಹೇಳುತ್ತಿದ್ದಂತೆಯೇ ಅವರ ಕತ್ತಿನಿಂದ ಸುಮಾರು ರೂ 1ಲಕ್ಷ ಮೌಲ್ಯದ ನಾಲ್ಕು ಪವನ್ ತೂಕದ ಚಿನ್ನದ ಸರ ಕಿತ್ತು ಅವರನ್ನು ಪಕ್ಕಕ್ಕೆ ದೂಡಿ ಹಾಕಿ ಹಿಂದೆ ಓಡಿ ಹೋಗಿ ಅಲ್ಲೇ ಕಾದು ನಿಂತಿದ್ದ ದ್ವಿಚಕ್ರ ವಾಹನದಲ್ಲಿ ಸಿದ್ಧಕಟ್ಟೆ ಕಡೆಗೆ ಪರಾರಿಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ದಾರಿ ಕೇಳುವ ನೆಪದಲ್ಲಿ ಚಿನ್ನದ ಸರ ಕಸಿದು ಪರಾರಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*