ಪುತ್ತೂರು ತಾಲೂಕು ಸಾಹಿತ್ಯ ಸಮ್ಮೇಳದ ಅಧ್ಯಕ್ಷರಾಗಿ ನಾ.ಕಾರಂತ ಪೆರಾಜೆ

www.bantwalnews.com

ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕಡಬದ ಪದವಿ ಪೂರ್ವ ಕಾಲೇಜಿನ ವಠಾರದಲ್ಲಿ ಡಿ.16 ರಂದು ನಡೆಯಲಿರುವ 17 ನೇ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ  ಸಮ್ಮೇಳನದ ಸರ್ವಾಧ್ಯಕ್ಷರಾಗಿ ಅಂಕಣಕಾರ, ಯಕ್ಷಗಾನ ಕಲಾವಿದ, ಪತ್ರಕರ್ತ ನಾ. ಕಾರಂತ ಪೆರಾಜೆ ಆಯ್ಕೆಯಾಗಿದ್ದಾರೆ. ಯಕ್ಷಗಾನ ಕಲಾವಿದರಾಗಿ, ಪತ್ರಕರ್ತರಾಗಿ ಪರಿಚಿತವಾಗಿರುವ ನಾ.ಕಾರಂತ ಪೆರಾಜೆ ಅವರು ಕೃಷಿ ಪತ್ರಕರ್ತರಾಗಿ ರಾಜ್ಯಾದ್ಯಂತ ಗುರುತಿಸಿಕೊಂಡಿದ್ದಾರೆ. ಗ್ರಾಮೀಣ ಪತ್ರಿಕೋದ್ಯಮದಲ್ಲಿ ಪ್ರಶಸ್ತಿಯೂ ಲಭಿಸಿದೆ. ಇದೀಗ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.

ಜಾಹೀರಾತು

 

ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕಡಬದ ಪದವಿ ಪೂರ್ವ ಕಾಲೇಜಿನ ವಠಾರದಲ್ಲಿ ಡಿ.16ರಂದು ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನವು ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ. ನಾ. ಕಾರಂತ ಪೆರಾಜೆ ಅವರು ಸುಬ್ರಹ್ಮಣ್ಯ ಕಾರಂತ ಮತ್ತು ಲಕ್ಷ್ಮೀ ಕಾರಂತ್ ಅವರ ಪುತ್ರರಾಗಿ ಸುಳ್ಯ ತಾಲೂಕು ಪೆರಾಜೆಯಲ್ಲಿ 1963 ರಲ್ಲಿ ಜನಿಸಿದರು. 1991ರ ಬಳಿಕ ಪುತ್ತೂರಿನಲ್ಲಿ ವಾಸ ಮಾಡುವುದರೊಂದಿಗೆಕೃಷಿ ಮಾಸಿಕ ಅಡಿಕೆ ಪತ್ರಿಕೆಯಲ್ಲಿ ಕಚೇರಿ ವ್ಯವಸ್ಥಾಪಕರಾಗಿ ಸೇವೆಗೆ ಸೇರ್ಪಡೆಗೊಂಡು ಈಗ ಸಹಾಯಕ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ರಾಜ್ಯದ ನಾನಾ ಪತ್ರಿಕೆಗಳಲ್ಲಿ ವ್ಯಕ್ತಿ ಚಿತ್ರ, ವಿಮರ್ಶೆ, ಅವಲೋಕನ, ಸಾಮಾಜಿಕ ನುಡಿಚಿತ್ರ, ಸಮಸಾಮಯಿಕ ಬರಹಗಳ ಮೂಲಕ ಹವ್ಯಾಸಿ ಪತ್ರಕರ್ತರಾಗಿ ದುಡಿಯುತ್ತಿದ್ದಾರೆ. ಯಕ್ಷಗಾನ ಕ್ಷೇತ್ರದಲ್ಲಿ ಸುಮಾರು 26 ವರ್ಷಗಳಿಂದ ವೇಷಧಾರಿ, ತಾಳಮದ್ದಳೆ ಅರ್ಥಧಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಅವರು ಎಡನೀರು, ಮಲ್ಲ, ಕೂಡ್ಲು ಮೇಳಗಳಲ್ಲಿ ಹವ್ಯಾಸಿ ಕಲಾವಿದರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಜಾಹೀರಾತು

ವಿವಿಧ ಪತ್ರಿಕೆಗಳಲ್ಲಿ ಕೃಷಿಗ್ರಾಮೀಣ ವಿಚಾರದ ನೆಲದ ನಾಡಿ ಎನ್ನುವ ಪಾಕ್ಷಿಕ ಅಂಕಣ, ಕೃಷಿ ಕುರಿತ ಮಾಂಬಳ ಎನ್ನುವ ಪಾಕ್ಷಿಕ ಅಂಕಣ, ಯಕ್ಷಗಾನ ಕುರಿತಾದ ದಧಿ ಗಿಣತೋ.. ಎನ್ನುವ ಸಾಪ್ತಾಹಿಕ ಅಂಕಣಗಳ ಮೂಲಕ ನಾಡಿಗೆ ಪರಿಚಿತರಾಗಿದ್ದಾರೆ.

ತಳಿ ತಪಸ್ವಿ (ಭತ್ತದ ತಳಿ ಸಂಗ್ರಾಹಕ ದೇವರಾವ್ ಕುರಿತು), ಮಾಂಬಳ (ಅಂಕಣ ಬರಹ), ಮನ ಮಿಣುಕು (ನಿತ್ಯ ಬದುಕಿನ ಕಣ್ಣೋಟದಲ್ಲಿ ದಾಖಲಾದ ವಿಚಾರಗಳು), ಮಣ್ಣ ಮಿಡಿತ (ಕೃಷಿ ಸಾಹಿತ್ಯ),  ಮಣ್ಣ ಮಾಸು (ಕೃಷಿ ಸಾಹಿತ್ಯ), ಹಸಿರು ಮಾತು (ಕೃಷಿ ಬರಹಗಳ ಸಂಕಲನ), ಕಾಡುಮಾವು (ಕೃಷಿ ಬರಹಗಳ ಸಂಕಲನ),  ಎಡ್ವರ್ಡ್ ರೆಬೆಲ್ಲೋ (ತಳಿ ಸಂಗ್ರಾಹಕ), ನೆಲದನಾಡಿಭಾಗ 1, ನೆಲದ ನಾಡಿಭಾಗ 2 (ಅಂಕಣ ಸಂಕಲನ), ಅವಿಲು (ಕಿರು ಬರಹಗಳ ಸಂಗ್ರಹಸಾಧಕರ ಪರಿಚಯಗಳು), ಮೂಲಿಕಾ ತಜ್ಞ ವೆಂಕಟರಾಜ ದೈತೋಟ (ವ್ಯಕ್ತಿ ಪರಿಚಯ), ಜೀವಜಲ (ಅಚ್ಚಿನಲ್ಲಿದೆ) ಒಟ್ಟು 13 ಕೃತಿಗಳು ಇವರಿಂದ ಪ್ರಕಟಗೊಂಡಿವೆ.

ಶೇಣಿ ದರ್ಶನ, ಶೇಣಿ ಚಿಂತನ, ಹಾಸ್ಯಗಾರನ ಅಂತರಂಗ, ಯಕ್ಷ ಕೋಗಿಲೆ, ಅಂತಿಕ, ಸಾಮಗ ಪಡಿದನಿ, ದಗಲೆ, ಬಣ್ಣದ ಬದುಕಿನ ಸ್ವಗತ, ಅಡ್ಡಿಗೆ, ಸುಮನಸ ಮೊದಲಾದ 10 ಯಕ್ಷಗಾನಕ್ಕೆ ಸಂಬಂಧಿಸಿದ ಕೃತಿಗಳು ಬಿಡುಗಡೆಗೊಂಡಿವೆ. ಮಾತ್ರವಲ್ಲದೆ ಪದಯಾನ, ಅಡ್ಕವಚೋಹಾಸ, ಸಾರ್ಥಕ, ಜಾಗರದ ಜೋಷಿ ಸಂಪಾದಿತ ಕೃತಿಗಳು.

ಜಾಹೀರಾತು

ಪ್ರವಾಸ, ಬಾನುಲಿ ಕಾರ್ಯಕ್ರಮ. ಭಾಷಣ, ಉಪನ್ಯಾಸ. ಕೃಷಿಕರ ಸಂದರ್ಶನ ಇವು ಇತರ ಹವ್ಯಾಸಗಳು. ಅವರು ಬರೆದ ಅಕ್ಷರ ಯೋಗಿಯ ನೋಡಲ್ಲಿ (ಹರೇಕಳ ಹಾಜಬ್ಬರು ಶಾಲೆ ಕಟ್ಟಿದ ಸಾಹಸ ಗಾಥೆ) ಬರೆಹವು ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯ ಹಾಗೂ ದಾವಣಗೆರೆ ವಿಶ್ವವಿದ್ಯಾಲಯಗಳ ವಾಣಿಜ್ಯ ವಿಭಾಗದ ೪ನೇ ಸೆಮಿಸ್ಟರ್ ಕನ್ನಡ ಪಠ್ಯದಲ್ಲಿ ಸೇರ್ಪಡೆಗೊಂಡಿದೆ. ಊಟದ ಬಟ್ಟಲಿನಲ್ಲಿ ವಿಷ ಎನ್ನುವ ಶೀರ್ಷಿಕೆಯಲ್ಲಿ ರಾಸಾಯನಿಕಗಳ ಘೋರತೆ ಕುರಿತು ಅರಿವನ್ನು ಮೂಡಿಸಲು ಶಾಲೆ, ಕಾಲೇಜು, ಕೃಷಿ ಕಾರ್ಯಕ್ರಮಗಳಲ್ಲಿ ಪವರ್ ಪಾಯಿಂಟ್ ಮೂಲಕ ಉಪನ್ಯಾಸ. ಈಗಾಗಲೇ ಐವತ್ತಕ್ಕೂ ಶಾಲೆಕಾಲೇಜುಗಳಲ್ಲಿ ಉಪನ್ಯಾಸ ನೀಡಿದ್ದಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರಾಯೋಜಿತ ರೇಡಿಯೋ ಪಾಂಚಜನ್ಯದಲ್ಲಿ ಕೃಷಿ ಮತ್ತು ಯಕ್ಷಗಾನ ಕುರಿತು ಕಾರ್ಯಕ್ರಮ ನಿರೂಪಣೆಯೊಂದಿಗೆ ಕೃಷಿ, ಪತ್ರಿಕೋದ್ಯಮ, ಯಕ್ಷಗಾನ, ಸಾಹಿತ್ಯ ಕ್ಷೇತ್ರದಲ್ಲಿ ದುಡಿಯುತ್ತಿದ್ದಾರೆ.

 

ನಾ.ಕಾರಂತ ಪೆರಾಜೆ ಅವರಿಗೆ ಸಂದ ಗೌರವಗಳು :

ಜಾಹೀರಾತು

 * ಕರ್ನಾಟಕ ಸರಕಾರದಪರಿಸರ ಪತ್ರಿಕೋದ್ಯಮ ಪ್ರಶಸ್ತಿ 2012ರಲ್ಲಿ

* ಗ್ರಾಮೀಣ ಪತ್ರಿಕೋದ್ಯಮ ವಿಭಾಗದಲ್ಲಿ ..ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

* ಉದಯವಾಣಿಯಲ್ಲಿ ಪ್ರಕಟವಾದ ಎರಡು ಬರೆಹಗಳಿಗೆಚರಕ ಪ್ರಶಸ್ತಿ ಮತ್ತು ಲ್ಯಾಡ್ಲಿ ಮೀಡಿಯಾ ಪ್ರಶಸ್ತಿ

ಜಾಹೀರಾತು

* ಕೃಷಿಪತ್ರಿಕೋದ್ಯಮ ಪ್ರಶಸ್ತಿಗಳು, (.ಗೋ.ಪ್ರಶಸ್ತಿ, ಚರಕ ಪ್ರಶಸ್ತಿ. ಮುರುಘಾಶ್ರೀ ಪ್ರಶಸ್ತಿಗಳು)

* ರಾಜ್ಯ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ.

* ..ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಗೌರವ2016 (ಉಜಿರೆ)

ಜಾಹೀರಾತು

* ಕೊಡೆಂಕಿರಿ ಪ್ರತಿಷ್ಠಾನದಸರಸ್ವತಿ ಪುರಸ್ಕಾರ (2015)

* ಪುತ್ತೂರು ಕೂಟಮಹಾಜಗತ್ತುಇದರ ರಜತೋತ್ಸವದಲ್ಲಿ ಸಂಮಾನ

* ಉಪ್ಪಿನಂಗಡಿ ರಾಮನಗರದ ಶ್ರೀ ಶಾರದೋತ್ಸವ ಸಮಿತಿ ವತಿಯಿಂದ ಸಂಮಾನ

ಜಾಹೀರಾತು

* ಸುಳ್ಯ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆಯಂದು ಸಂಮಾನ

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಪುತ್ತೂರು ತಾಲೂಕು ಸಾಹಿತ್ಯ ಸಮ್ಮೇಳದ ಅಧ್ಯಕ್ಷರಾಗಿ ನಾ.ಕಾರಂತ ಪೆರಾಜೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*