25ರಂದು ಹರಿದ್ವಾರದಲ್ಲಿ ಸಾಧನಾ ಕುಟೀರ ಉದ್ಘಾಟನೆ

www.bantwalnews.com

ಜಾಹೀರಾತು

ನವೆಂಬರ್ 25ರಂದು ಹರಿದ್ವಾರದಲ್ಲಿ ಬೆಳಗ್ಗೆ 11ಕ್ಕೆ ಶ್ರೀರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಸಾಧನಾ ಕುಟೀರ ಉದ್ಘಾಟನೆ ನಡೆಯಲಿದೆ.

ಈ ವಿಚಾರವನ್ನು ಕ್ಷೇತ್ರದ ಸಂಚಾಲಕ ಕೃಷ್ಣಪ್ಪ ಪೂಜಾರಿ ಕಲ್ಲಡ್ಕ ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ತಿಳಿಸಿದರು.
ಈ ಸಂದರ್ಭ ಹರಿಹರ ಕೈಲಾಸ ಜ್ಞಾನಪೀಠದ ಸ್ವಾಮೀ ಶ್ರೀ ಪ್ರೇಮಾನಂದಕೀ ಮಹಾರಾಜ್, ಹರಿನಾಥ ಹರ್‌ನಾಥ ಮಂದಿರದ ಜುನಾ ಆಖಾಡ ಪರಮಾಧ್ಯಕ್ಷ ಶ್ರೀ ದೇವಾನಂದ ಸರಸ್ವತೀ ಮಹಾರಾಜ್, ಹರಿದ್ವಾರದ ಬಾಬಾ ಹರಿಹರಧಾಮದ ಸ್ವಾಮೀ ಶ್ರೀ ಸೋಮೇಶ್ವರನಂದಜೀ ಮಹಾರಾಜ್ ಉಪಸ್ಥಿತರಿದ್ದು, ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್, ಸಂಸದ ನಳಿನ್ ಕುಮಾರ್ ಕಟೀಲ್, ಉತ್ತಾಖಂಡ್ ಸರಕಾರದ ಸಚಿವ ಮದನ್ ಕೌಶಿಕ್, ಲೋಕಸಭಾ ಸದಸ್ಯ ಡಾ.ರಮೇಶ್, ಹರಿದ್ವಾರ ಮೇಯರ್ ಮನೋಜ್ ಗರ್ಗ್ , ಭಟ್ಕಳ ಶಾಸಕ ಮಂಕಾಳ ವೈದ್ಯ, ದಿವ್ಯಪ್ರೇಮ ಸೇವಾ ಮಿಷನ್ ಅಧ್ಯಕ್ಷ ಆಶಿಷ್ ಗೌತಮ್ ಉಪಸ್ಥಿತರಿರುವರು ಎಂದು ಹೇಳಿದರು.

ಬಿಲ್ಲಾಡಿ, ಭಟ್ಕಳ, ಕೆರಿಕ್ಕಲ್, ಹೊನ್ನಾವರ, ಹರಿದ್ವಾರಗಳ ಶಾಖೆಗಳನ್ನು ಹೊಂದಿರುವ ಕನ್ಯಾಡಿ ಜಗದ್ಗುರು ಪೀಠಾಧೀಶ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಅವರ ಗುರು ಶ್ರೀ ಆತ್ಮಾನಂದ ಸರಸ್ವತಿ ಮಾರ್ಗದರ್ಶನದಂತೆ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಉಚಿತ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ, ಭಾರತೀಯ ಪರಂಪರೆಗಳನ್ನು ಎಳವೆಯಲ್ಲೇ ಒದಗಿಸುವ ಮಹತ್ವದ ಕಾರ್ಯಕ್ಕೆ ಕೈಹಾಕಲಾಗಿದೆ ಎಂದರು.

ಜಾಹೀರಾತು

ಜನವರಿ ಕೊನೆಯಲ್ಲಿ ಸೀತಾರಾಮ ಕಲ್ಯಾಣೋತ್ಸವ:
ಬಿ.ಸಿ.ರೋಡಿನಲ್ಲಿ ಜನವರಿ ಕೊನೆಯ ಭಾಗದಲ್ಲಿ ಸೀತಾರಾಮ ಕಲ್ಯಾಣೋತ್ಸವ ಕಾರ್ಯಕ್ರಮವನ್ನು ತಾಲೂಕು ಸೇವಾ ಸಮಿತಿ ವತಿಯಿಂದ ನಡೆಸಲಾಗುವುದು ಎಂದು ಇದೇ ಸಂದರ್ಭ ತಾಲೂಕು ಸೇವಾ ಸಮಿತಿ ಅಧ್ಯಕ್ಷ ಸಂಜೀವ ಪೂಜಾರಿ ಹೇಳಿದರು.ಈ ಸಂದರ್ಭ ಉಪಾಧ್ಯಕ್ಷ ಬೇಬಿ ಕುಂದರ್, ಪ್ರಮುಖರಾದ ಗೋಪಾಲ ಸುವರ್ಣ, ಬಿ.ವಿಶ್ವನಾಥ ಪೂಜಾರಿ, ಸಂತೋಷ್ ಕುಮಾರ್ ಉಪಸ್ಥಿತರಿದ್ದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "25ರಂದು ಹರಿದ್ವಾರದಲ್ಲಿ ಸಾಧನಾ ಕುಟೀರ ಉದ್ಘಾಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*