ಮಂಗಳೂರಿನ ಸಂಗೀತಗುರುವನ್ನು ದುಬೈನಿಂದಲೇ ಕವಿತಾ ಕೃಷ್ಣಮೂರ್ತಿ ಯಾಕೆ ಅಭಿನಂದಿಸಿದರು?

  • ಪ.ರಾಮಚಂದ್ರ

www.bantwalnews.com

ದುಬೈಯ ಎಸ್ ಕೆ ಎಸ್ ಇವೆಂಟ್ಸ್ ಇವರು ಆಯೋಜಿಸುವ ಆರರಿಂದ ಹದಿನೇಳು ವಯಸ್ಸಿನ ಸಂಯುಕ್ತ ಅರಬ್ ಸಂಸ್ಥಾನದ ( ಯು.  ) ನಿವಾಸಿ ಮಕ್ಕಳು ಹಿಂದಿ ಭಾಷೆಯ ಚಲನಚಿತ್ರ ಹಾಡುಗಳನ್ನು ಹಾಡುವ ರಾಷ್ಟ್ರೀಯ ಮಟ್ಟದ ಸ್ಪರ್ಧೆ  “ವಾಯ್ಸ್  ಆಫ್  ಯು    – ಕಿಡ್ಸ್  ಕೆಟಗರಿ ” . 
 
 
ಯು.    ಏಳು ಪ್ರಾಂತ್ಯದ ನಿವಾಸಿ ಭಾರತೀಯ ಮಕ್ಕಳ ಜೊತೆಗೆ  ಹಿಂದಿ  ಭಾಷೆಯನ್ನು  ಅರಿಯದ ವಿದೇಶದ ಮಕ್ಕಳು ಕೂಡ  ಪ್ರತಿಷ್ಠಿತ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆಮೂರು  ಹಂತಗಳಲ್ಲಿ ನಡೆಯುವ  ಸ್ಪರ್ಧೆಯ  ಅಂತಿಮ ಸುತ್ತಿನಲ್ಲಿ  ಭಾರತದ ಹೆಸರಾಂತ  ಗಾಯಕರು ತೀರ್ಪುಗಾರರಾಗಿರುತ್ತಾರೆ.
 
 “ವಾಯ್ಸ್  ಆಫ್  ಯು    – ಕಿಡ್ಸ್  ಕೆಟಗರಿ– 2017 ಸ್ಪರ್ಧೆಯ ಅಂತಿಮ ಸುತ್ತು  ದುಬೈ ಮಹಾನಗರದ   1600 ಆಸನದ  ಸುಪ್ರಸಿದ್ಧಶೇಖ್ ರಶೀದ್‘ ಆಡಿಟೋರಿಯಂನಲ್ಲಿ ನಡೆಯಿತು.
 
ಸುಮಾರು 200 ಅಧಿಕ ಸ್ಪರ್ಧಾಳುಗಳು ಪಾಲ್ಗೊಂಡ  ಸ್ಪರ್ಧೆಯ  ಅಂತಿಮ ಸುತ್ತಿಗೆ ಆಯ್ಕೆಯಾದ 20 ಸ್ಪರ್ದಾಳುಗಳಿಗೆ ಆಡಿಟೋರಿಯಂನ ಸಭಾ ಕಾರ್ಯಕ್ರಮಕ್ಕೆ  ಆಗಮಿಸಿದ್ದ ಸಭಿಕರ ಮುಂದೆ ತಲಾ  ಮೂರುವರೆ ನಿಮಿಷ ಹಾಡುವ ಅವಕಾಶ  ಲಭಿಸಿತು .
 
ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾದ 20 ಸ್ಪರ್ಧಾಳುಗಳಲ್ಲಿ ಹಿಂದಿ  ಭಾಷೆಯನ್ನು ಅರಿಯದ ಹಿಂದಿ  ಚಲನಚಿತ್ರ ಗಾಯನ ಪ್ರೇಮಿ ತಜಕಿಸ್ಥಾನ್ದೇಶದ ಕನ್ಯೆ ಕೂಡ ಒಬ್ಬಳು
 
ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾದ ಏಕೈಕ ಕನ್ನಡ ಕುವರನೊಬ್ಬ ಹತ್ತು ವರ್ಷದ ಪೋರ. ಕಾರ್ಯಕ್ರಮದ ಕ್ರಮಾಂಕದಲ್ಲಿ ಹನ್ನೊಂದನೆ ಸ್ಪರ್ದಾಳುವಾಗಿ ತನಗೆ ಲಭಿಸಿದ ಅತ್ಯಲ್ಪ ಕಾಲಾವಧಿಯಲ್ಲಿ ಯಮನ್ ರಾಗದ ಮಿಶ್ರ ಛಾಪು ತಾಳದ ‘ಆಜ್ ಇಬಾದತ್’ ಹಿಂದಿ ಹಾಡನ್ನು ಸಭಿಕರ ಮತ್ತು ತೀರ್ಪುಗಾರರ ಮುಂದೆ ಸುಶ್ರಾವ್ಯವಾಗಿ ಹಾಡಿದ.
 
ವಾಯ್ಸ್  ಆಫ್  ಯು    – ಕಿಡ್ಸ್  ಕೆಟಗರಿ– 2017  ಸ್ಪರ್ಧೆಯ ಅಂತಿಮ ಸುತ್ತಿನ ತೀರ್ಪುಗಾರರಾಗಿ ಬಂದಿದ್ದ ಪ್ರಸಿದ್ಧ ಹಿಂದಿ ಗಾಯಕಿ ದಕ್ಷಿಣ ಭಾರತದ ಗಾನ ಕೋಗಿಲೆ ಕವಿತಾ ಕೃಷ್ಣಮೂರ್ತಿ ಕನ್ನಡ ಕುವರ ‘ಅಮೋಘವರ್ಷ  ಹಿಂದಿ ಹಾಡು ‘ಆಜ್ ಇಬಾದತ್‘ ಆಲಿಸಿದ  ನಂತರ  ತಮ್ಮ ಅಭಿಪ್ರಾಯವನ್ನು ತಕ್ಷಣ ತಿಳಿಸಿದ್ದು ಹೀಗೆ.
 
ಅಮೋಘವರ್ಷನ ವಯಸ್ಸನ್ನು ಅವನಿಂದಲೇ ಕೇಳಿ ತಿಳಿದ  ಕವಿತಾ ಕೃಷ್ಣಮೂರ್ತಿ ಮುಂದಿನ ಪ್ರಶ್ನೆ ನಿನಗೆ ಸಂಗೀತ ಕಲಿಸಿದ ಗುರುಗಳು ಯಾರು?  ‘ನನ್ನ ಚಿಕ್ಕಮ್ಮ  ದಿವ್ಯಶಂಕರಿ ನನ್ನ ಸಂಗೀತ ಗುರು ‘ಎಂದ ಅಮೋಘವರ್ಷ.
 
 ‘ನೀನು ಅದ್ಭುತ ಗಾಯಕ ,ಇದು ತುಂಬಾ ಕಠಿಣ ಹಾಡು 10  ಎಳವೆಯಲ್ಲಿ ಇದರ ತಾರ ಸ್ಥಾಯಿ ಹಾಗೂ ಮಂದಾರ ಸ್ಥಾಯಿಗಳಲ್ಲಿನ ನಿನ್ನಸ್ವರ ಸಂಚಾರ ತುಂಬಾ ಸುಂದರವಾಗಿತ್ತುನೀನು  ಕ್ರಮಬದ್ಧವಾಗಿ ರಾಗಬದ್ಧವಾಗಿ ಶ್ರುತಿಯಲ್ಲಿ ಬಿಲ್ಲಿನಿಂದ ಹೊರಟ ಬಾಣದಂತೆ ಅದ್ಭುತವಾಗಿ ಹಾಡಿರುವೆಇಷ್ಟು ಸಣ್ಣ ವಯಸ್ಸಿನಲ್ಲಿ ನಿನ್ನನ್ನು ಪಳಗಿಸಿರುವ ನಿನ್ನ ಸಂಗೀತ  ಗುರುಗಳಿಗೆ  ನನ್ನ ಅಭಿನಂದನೆಗಳು ‘ಎಂದು ಕವಿತಾ ಕೃಷ್ಣಮೂರ್ತಿ ತಿಳಿಸಿದರು.
 
 ಅತ್ಯಂತ ಸಣ್ಣತಪ್ಪುಗಳನ್ನು ಕೂಲಂಕಷವಾಗಿ ಕಂಡುಹಿಡಿದು ತಿದ್ದಿ ವಿಮರ್ಶಿಸಿ ತಿಳಿಹೇಳುವ ಬೆರಳೆಣಿಕೆಯ ತೀರ್ಪುಗಾರರಲ್ಲಿ ಒಬ್ಬರಾದ  ಪ್ರಸಿದ್ಧ ಹಿಂದಿ ಗಾಯಕಿ  ದಕ್ಷಿಣ ಭಾರತದ ಗಾನ ಕೋಗಿಲೆ ಕವಿತಾ ಕೃಷ್ಣಮೂರ್ತಿಯವರ ಕುತೂಹಲ ಮೂಡಿಸಿದ  ದಿವ್ಯಶಂಕರಿ ಅವರ ಕಿರುಪರಿಚಯ.
 
ತನ್ನ ಏಳನೇ ವಯಸ್ಸಿನಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಅಭ್ಯಾಸ ಪ್ರಾರಂಭಿಸಿದ  ದಿವ್ಯಶಂಕರಿಬಡೆಕ್ಕಿಲ ಚಂದ್ರಶೇಖರ ಭಟ್  ಮತ್ತು ಪದ್ಮಾವತಿ ದಂಪತಿಗಳ ಸುಪುತ್ರಿಆಕಾಶವಾಣಿ ಮಂಗಳೂರು ವಿಭಾಗದಲ್ಲಿ ಯುವವಾಣಿ ಕಲಾವಿದೆಯಾಗಿದ್ದ ಇವರು ಬೆಂಗಳೂರುಉಡುಪಿಕಟೀಲು ,ಮಂಗಳೂರು ಸೇರಿದಂತೆ ಹಲವಾರು ಪಟ್ಟಣಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಮಂಗಳೂರಿನ ಸಂಗೀತಗುರುವನ್ನು ದುಬೈನಿಂದಲೇ ಕವಿತಾ ಕೃಷ್ಣಮೂರ್ತಿ ಯಾಕೆ ಅಭಿನಂದಿಸಿದರು?"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*