ಜಾಹೀರಾತು
ಬಂಟ್ವಾಳ ತಾಲೂಕಿನ ಮಣಿಹಳ್ಳ ಪಕ್ಕ ಬಡಗುಂಡಿ ಎಂಬಲ್ಲಿ ನಡೆದ ಅಪಘಾತದಲ್ಲಿ ಒಂದು ವರ್ಷದ ಮಗು ಜಾನ್ ಪ್ಯಾಟ್ರಿಕ್ ಮೃತಪಟ್ಟಿದ್ದು, ಸ್ಥಳೀಯ ನಿವಾಸಿಗಳಾದ ಜರ್ಮನ್, ರೋಷನ್, ಲವಿಟಾ, ಸಿಸಿಲಿಯಾ ಬರೆಟ್ಟೋ, ಓಮ್ನಿ ಚಾಲಕ ರೋಬಿನ್ ಮತ್ತು ಜಾನ್ ಅಕ್ಕ ರಿಯಾ ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಗಾಯಾಳುಗಳು ಇದ್ದ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಗುರುವಾರ ರಾತ್ರಿ ಭೇಟಿ ನೀಡಿದರು.
ಜಾಹೀರಾತು
ಇದೇ ವೇಳೆ ಫಾ.ಮುಲ್ಲರ್ ಆಸ್ಪತ್ರೆಯ ನಿರ್ದೇಶಕ ರೋಶನ್ ಕ್ರಾಸ್ತಾ ಅವರೊಂದಿಗೆ ಅವರು ಚರ್ಚೆ ನಡೆಸಿದರು. ಈ ಸಂದರ್ಭ ಬಂಟ್ವಾಳ ಕೆಥೋಲಿಕ್ ಸಭಾ ಅಧ್ಯಕ್ಷ ಸ್ಟೇನಿ ಲೋಬೊ, ಪ್ರಮುಖರಾದ ಏಪ್ರಿಯಂ ಸಿಕ್ವೇರ, ರಿಚರ್ಡ್ ಲೋಬೊ, ಮಾಯಿಲಪ್ಪ ಸಾಲಿಯಾನ್, ಸತೀಶ್ ಮೇಲ್ಕಾರ್, ಡೆನ್ಘಿಲ್ ನೊರೋನ್ಹ ಮೊದಲಾದವರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಡಗುಂಡಿ ಅಪಘಾತ: ಗಾಯಾಳುಗಳಿಗೆ ಸಾಂತ್ವನ ಹೇಳಿದ ರೈ"