ನಿರಂತರ ಆಸಕ್ತಿ ಸಾಧನೆಗೆ ಹಾದಿ: ವಿವಿ ಉಪಕುಲಪತಿ ಪ್ರೊ. ಭೈರಪ್ಪ

www.bantwalnews.com

  • ಬಂಟ್ವಾಳ ಎಸ್.ವಿ.ಎಸ್.ಕಾಲೇಜುಗಳ ಸುವರ್ಣ ಮಹೋತ್ಸವ ಕಾರ್ಯಕ್ರಮ

ಜಾಹೀರಾತು

ಯುವ ಜನಾಂಗವು ತಮ್ಮ ಬದುಕಿನಲ್ಲಿ ಶಿಸ್ತುಬದ್ಧವಾದ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು. ನಿರಂತರವಾದ ಆಸಕ್ತಿಯು ಅವನ ಸಾಧನೆಗೆ ಹಾದಿಯಾಗುತ್ತದೆ. ವಿದ್ಯಾರ್ಥಿಯಾದವನು ಉತ್ತಮ ವ್ಯಕ್ತಿತ್ವ ನಿರ್ಮಾಣ ಮಾಡಿಕೊಂಡು ಸಾಧನೆಯ ಮೆಟ್ಟಲೇರಬೇಕು ಎಂದು ಮಂಗಳೂರು ವಿಶ್ವವಿದ್ಯಾನಿಲಯ ಉಪ ಕುಲಪತಿಗಳಾದ ಪ್ರೊ.ಕೆ.ಭೈರಪ್ಪ ಹೇಳಿದರು.

ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮಿ ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳ ಸುವರ್ಣ ಮಹೋತ್ಸವದ ಸಂದರ್ಭದಲ್ಲಿ ಕಾಲೇಜು ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು.

ರಾಜ್ಯ ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಗೋಪಾಲಕೃಷ್ಣ ಪೈ ಮಾತನಾಡಿ ವ್ಯಾಸ, ವಾಲ್ಮೀಕಿಯಂತಹ ಪ್ರತಿಭಾನ್ವಿತರಿಂದ ಮಹಾಭಾರತ, ರಾಮಾಯಣದಂತಹ ಮಹಾಕಾವ್ಯಗಳ ಸೃಷ್ಟಿಯಾಯಿತು. ಪ್ರಕೃತಿಯಲ್ಲಿ ಕಂಡಂತಹ ಇಂತಹ ಒಂದು ಘಟನೆಯು ಈ ಕವಿಗಳ ಪ್ರತಿಭೆಯ ಪ್ರಕಟಕ್ಕೆ ಸಾಕ್ಷ್ಷಿಯಾಯಿತು. ವಿದ್ಯಾರ್ಥಿಗಳಾದವರಲ್ಲೂ ಇಂತಹ ಸುಪ್ತವಾದ ಪ್ರತಿಭೆಗಳಿರುತ್ತವೆ. ಈ ಪ್ರತಿಭೆಯು ಪ್ರಕಟಕ್ಕೆ ಇಂತಹ ವಿದ್ಯಾಮಂದಿರಗಳು ಕಾರಣವಾಗುತ್ತವೆ ಎಂದರು.

ಜಾಹೀರಾತು

ಶ್ರೀ ವೆಂಕಟರಮಣ ಸ್ವಾಮಿ ಕಾಜುಗಳ ಸಂಚಾಲಕರಾದ ಕೂಡಿಗೆ ಪ್ರಕಾಶ್ ಶೆಣೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವಿವಿಧ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು. ಸುಧೀರ್ಘ ವರ್ಷಗಳ ಸೇವೆಯಿಂದ ನಿವೃತ್ತರಾದ ಕಛೇರಿ ಸಹಾಯಕರಾದ ಸುರೇಶ್ ಕೆ ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ| ಪಾಂಡುರಂಗ ನಾಯಕ್ ಮತ್ತು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶಶಿಕಲಾ ಕೆ. ಇವರು ಕಾಲೇಜಿನ ವಾರ್ಷಿಕ ವರದಿಯನ್ನು ಮಂಡಿಸಿದರು. ಕಾಲೇಜಿನ ಉಪಪ್ರಾಂಶುಪಾಲರಾದ ಪ್ರೊ. ತುಕಾರಾಂ ಪೂಜಾರಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಪದವಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲಕಿ ಪ್ರೊ. ಪ್ರೇಮಲತಾ ಪೈ ಮತ್ತು ಐಕ್ಯೂಎಸಿ ಸಂಯೋಜಕರಾದ ಡಾ| ಟಿ.ಕೆ ರವೀಂದ್ರನ್ ಮುಖ್ಯ ಅತಿಥಿಗಳ ಪರಿಚಯವನ್ನು ಮಾಡಿದರು. ಉಪನ್ಯಾಸಕರಾದ ಶಶಿಕಲಾ ಎಂ.ಪಿ, ಡಾ| ಮಂಜುನಾಥ ಉಡುಪ, ಕವಿತಾ ಇವರು ಬಹುಮಾನ ವಿತರಣಾ ಕಾರ್ಯಕ್ರಮ ನಿರ್ವಹಿಸಿದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ನಾರಾಯಣ ಭಂಡಾರಿ ವಂದಿಸಿದರು.

ಜಾಹೀರಾತು

ಪೂಜಾಶ್ರೀ ಕಾರ್ಯಕ್ರಮ ನಿರ್ವಹಿಸಿದರು. ಸಭಾ ಕಾರ್ಯಕ್ರಮದ ನಂತರ ಬೆಂಗಳೂರಿನ ರಿಚರ್ಡ್ ಲೂಯಿಸ್ ಮತ್ತು ತಂಡದವರಿಂದ ನಗೆ ಹಬ್ಬ ನಡೆಯಿತು. ನಂತರ ಕಾಲೇಜಿನ ವಿದ್ಯಾರ್ಥಿಗಳಿಂದ ಕರುಣಾನಿಧಿ ನಾಟಕ ಮತ್ತು ಇತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ನಿರಂತರ ಆಸಕ್ತಿ ಸಾಧನೆಗೆ ಹಾದಿ: ವಿವಿ ಉಪಕುಲಪತಿ ಪ್ರೊ. ಭೈರಪ್ಪ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*