ಜಾಹೀರಾತು
ಮಂಗಳವಾರ ಬೆಳಗ್ಗೆ ತುಂಬೆ ಸಮೀಪ ರಾಮಲ್ ಕಟ್ಟೆ ಎಂಬಲ್ಲಿ ನಡೆದ ಅಪಘಾತದಲ್ಲಿ ಲಾರಿಯೊಂದು ಬೈಕ್ ಗೆ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿದ್ದಾರೆ. ಕೃಷ್ಣಾಪುರ ನಿವಾಸಿ ಗಝಲ್ ಸಾವನ್ನಪ್ಪಿದರೆ, ಜಾವೇದ್ ಗಾಯಗೊಂಡರು. ಬಿ.ಸಿ.ರೋಡಿಗೆ ಇವರಿಬ್ಬರೂ ಬೈಕಿನಲ್ಲಿ ತೆರಳುತ್ತಿದ್ದ ಸಂದರ್ಭ ಲಾರಿ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಠಾಣಾ ಪೊಲೀಸ್ ಎಸ್.ಐ. ಯಲ್ಲಪ್ಪ ನೇತೃತ್ವದಲ್ಲಿ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಲಾಯಿತು. ಗಾಯಾಳು ತುಂಬೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಲಾರಿ ಡಿಕ್ಕಿ, ಬೈಕ್ ಸವಾರ ಮೃತ್ಯುವಶ"