ನಂದಾವರ ಕ್ಷೇತ್ರ ಜ್ಞಾನಮಂದಿರ ಶಿಲಾನ್ಯಾಸ

ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಕ್ಷೇತ್ರದಲ್ಲಿ ೭೦ ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನೂತನ ಜ್ಞಾನ ಮಂದಿರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಶಿಲಾನ್ಯಾಸ ನೆರವೇರಿಸಿದರು. ಜ್ಞಾನ ಮಂದಿರ ನಿರ್ಮಾಣಕ್ಕೆ ದೈವಾನುಗ್ರಹ ಪ್ರಾಪ್ತಿಗಾಗಿ ನಡೆದ ವಿಶೇಷ ಚಂಡಿಕಾ ಹೋಮ, ಭೂಮಿ ಪೂಜೆಯಲ್ಲಿ ಅವರು ಪಾಲ್ಗೊಂಡರು.

ಜಾಹೀರಾತು

ಬಳಿಕ ಮಾತನಾಡಿ ನಮ್ಮ ಮನಸ್ಸಿನಲ್ಲಿ ದೈವತ್ವ ಮತ್ತು ರಾಕ್ಷಸತ್ವ ತುಂಬಿರುತ್ತದೆ. ನಾವು ಅದಲ್ಲಿ ಯಾವುದಕ್ಕೆ ಮಹತ್ವ ನೀಡಬೇಕು ಎಂದು ತಿಳಿದು ನಿಯಂತ್ರಿಸಬೇಕು ಎಂದರು.

ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಸಿ.ಭಂಡಾರಿ ಮಾತನಾಡಿ ಜ್ಞಾನ ಮಂದಿರ ನಿರ್ಮಾಣಕ್ಕೆ ಈಗಾಗಲೇ ೭೨.೪೦ ಲಕ್ಷ ರೂ. ಮಂಜೂರಾತಿ ಟೆಂಡರ್ ಆಗಿದ್ದು, ಮೊದಲ ಮಹಡಿ ನಿರ್ಮಾಣಕ್ಕೆ ಇನ್ನೂ ಒಂದು ಕೋಟಿ ರೂ. ವೆಚ್ಚದ ಯೋಜನೆ ಪ್ರಸ್ತಾವನೆಯಲ್ಲಿದೆ. ಇಂಜಿನಿಯರ್ ಸಂತೋಷ್ ಕುಮಾರ್ ಕೊಟ್ಟಿಂಜ ನಿರ್ಮಾಣ ಕಾಮಗಾರಿ ನಿರ್ವಹಿಸುವರು. ಮುಂದಕ್ಕೆ ಇದೇ ಕಟ್ಟಡ ತಳದಲ್ಲಿ ಕ್ಷೇತ್ರದಲ್ಲಿ ಅಪರ ಕ್ರಿಯೆಗಳನ್ನು ನಿರ್ವಹಿಸಲಾಗುತ್ತದೆ. ಜನರಿಗೆ ಸ್ನಾನ ಮಾಡುವುದಕ್ಕೆ ಸ್ವಚ್ಚತೆಯನ್ನು ಕಾಪಾಡಿಕೊಳ್ಳುವುದಕ್ಕೆ ನದಿ ಪ್ರದೇಶದ ನೈರ್ಮಲ್ಯಕ್ಕೆ ಇದರಿಂದ ಪ್ರಯೋಜನ ಆಗಲಿದೆ ಎಂದರು.

ಲೊಕೋಪಯೋಗಿ ಇಲಾಖೆ ವಿಶ್ರಾಂತ ಇಂಜಿನಿಯರ್ ಸೀತಾರಾಮ ಆಚಾರ್ ಯೋಜನೆಯ ವಿಸ್ಕೃತ ರೂಪುರೇಖೆ ರಚಿಸಿದ್ದು ಮಂಜೂರಾತಿಗೆ ಸಹಕರಿಸಿದ್ದರು
ಪ್ರವಾಸೋದ್ಯಮ ಇಲಾಖೆಯ ಮೂಲಕ ಕ್ಷೇತ್ರದಿಂದ ಪಾಣೆಮಂಗಳೂರು ನಗರಕ್ಕೆ ಸಂಪರ್ಕಿಸುವ ಹೊಸ ರಸ್ತೆ ಸೇತುವೆ ನಿರ್ಮಾಣಕ್ಕೆ ೬ ಕೋಟಿ ರೂ. ವೆಚ್ಚದ ಯೋಜನೆ ಸರಕಾರದ ಮಟ್ಟದಲ್ಲಿ ಮಂಜೂರಾತಿ ಹಂತದಲ್ಲಿದೆ. ಎಂದರು. ಶೀಘ್ರದಲ್ಲಿ ಈ ಎಲ್ಲ ಕೆಲಸಗಳನ್ನು ಮಾಡಲು ದೇವರು ಶಕ್ತಿಯನ್ನು ನೀಡಲಿ. ಎದುರಾಗಬಹುದಾದ ಸಮಸ್ಯೆಗಳನ್ನು ನಿವಾರಿಸಿ ಎಲ್ಲರ ಪಾಲ್ಗೊಳ್ಳುವಿಕೆಯಲ್ಲಿ ಕೆಲಸ ಕಾರ್ಯಗಳು ಭರದಿಂದ ನಡೆಯಲಿ ಎಂದು ಹಾರೈಸಿದರು.
ಕಾರ್ಯಕ್ರದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ನಿಕಟಪೂರ್ವ ಸದಸ್ಯ ಡಿ.ಎಂ. ಕುಲಾಲ್, ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಕೆ.ಪ್ರಭಾಕರ ಶೆಟ್ಟಿ, ಎಸ್.ಗಂಗಾಧರ ಭಟ್ ಕೊಳಕೆ, ಎಸ್.ಎಂ. ಗೋಪಾಲಕೃಷ್ಣ ಆಚಾರ್ಯ, ಮೋಹನದಾಸ ಪೂಜಾರಿ, ಅಣ್ಣು ನಾಯ್ಕ, ರಮಾ ಎಸ್.ಭಂಡಾರಿ, ಪ್ರಧಾನ ಅರ್ಚಕ ವೇ|ಮೂ| ಮಹೇಶ್ ಭಟ್, ಮೆನೇಜರ್ ರಾಮಕೃಷ್ಣ ಭಂಡಾರಿ ಉಪಸ್ಥಿತರಿದ್ದರು. ವೇ|ಮೂ| ಶಿವರಾಮ ಮಯ್ಯ ತನ್ನಚ್ಚಿಲು ಮತ್ತು ಬಳಗದವರು ವಿಶೇಷ ಚಂಡಿಕಾ ಹೋಮ ಪೌರೋಹಿತ್ಯ ನಿರ್ವಹಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ನಂದಾವರ ಕ್ಷೇತ್ರ ಜ್ಞಾನಮಂದಿರ ಶಿಲಾನ್ಯಾಸ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*