ಸಜೀಪಕ್ಕೆ ಮಾದರಿ ರಾಜ ಮಾರ್ಗ ನಿರ್ಮಾಣ: ಸಚಿವ ಖಾದರ್

ಮುಂದಿನ ಅವಧಿಯಲ್ಲಿ ಸಜೀಪ ಸಮಗ್ರ ಅಭಿವೃದ್ಧಿ ನಡೆಸಲಾಗುವುದು, ಸುಸಜ್ಜಿತ ಮಾದರಿ ರಾಜಮಾರ್ಗ ನಿರ್ಮಿಸಲಾಗುವುದು ಎಂದು ಸಚಿವ ಯು.ಟಿ.ಖಾದರ್ ಹೇಳಿದರು.

ಜಾಹೀರಾತು

ಸಜೀಪನಡು ವಲಯ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಯು. ಟಿ ಖಾದರ್ ಯುವಾಂದೋಲನ ಪ್ರಯುಕ್ತ ಭಾನುವಾರ ನಡೆದ ಯುವ ಸಮ್ಮಿಲನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಜನರ ಆಶೀರ್ವಾದ ಇದ್ದಲ್ಲಿ ಮುಂದಿನ ಬಾರಿಯೂ ಶಾಸಕನಾಗಿ ಆಯ್ಕೆಗೊಳ್ಳಲಿದ್ದೇನೆ. ಯುವ ಜನರೀಗ ದಾರಿ ತಪ್ಪುತ್ತಿದ್ದು, ಹಿರಿಯರ ಮಾರ್ಗದರ್ಶನದ ಕೊರತೆಯಿದೆ. ಗ್ರಾಮ ಮಟ್ಟದಲ್ಲಿ ನಡೆಸಲಾದ ಯುವ ಸಮ್ಮಿಲನ ಯುವಕರಿಗೆ ನೈತಿಕ ನಾಯಕತ್ವ ತುಂಬಬೇಕೆಂದು ಸಲಹೆ ನೀಡಿದ ಸಚಿವರು ಸಂಘಟಕರನ್ನು ಶ್ಲಾಘಿಸಿದರು.

ತಾಲೂಕು ಪಂಚಾಯತ್ ಸದಸ್ಯಹೈದರ್ ಕೈರಂಗಳ, ಮುಡಿಪು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಜಲೀಲ್ ಮೋಂಟುಗೋಳಿ ಯುವ ನಾಯಕತ್ವ ಮಾರ್ಗದರ್ಶನ ಶಿಬಿರ ನಡೆಸಿಕೊಟ್ಟರು.  ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ  ನಿರ್ದೇಶಕ ಹಾಜಿ ಎಸ್. ಅಬ್ಬಾಸ್ ಸಜೀಪ,  ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ್ ಕರ್ಕೇರ, ಮುಡಿಪು ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾದ ಅರುಣ್ ಡಿ’ಸೋಜ,  ಇರಾ ಗ್ರಾಮಪಂಚಾಯತ್ ಅಧ್ಯಕ್ಷ ರಝಾಕ್ ಕುಕ್ಕಾಜೆ, ಮುಡಿಪು ಬ್ಲಾಕ್ ಕಾಂಗ್ರೆಸ್ ಕಚೇರಿ ಕಾರ್ಯದರ್ಶಿ ಸತ್ತಾರ್ ಕೈರಂಗಳ, ಸಜೀಪನಡು ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷ ಸೋಮನಾಥ್ ಭಂಡಾರಿ, ಸಜೀಪನಡು ಗ್ರಾಮ ಪಂಚಾಯತ್ ಸದಸ್ಯ ರಫೀಕ್ ಗೋಳಿಪಡ್ಪು,  ಮುಡಿಪು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಬೋಲಮೆ, ಮಂಗಳೂರು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಕಾರ್ಯದರ್ಶಿ ಆಸಿಫ್ ಸಜೀಪ, ಸಜೀಪನಡು ವಲಯ ಯುವ ಕಾಂಗ್ರೆಸ್ ಅಧ್ಯಕ್ಷ ಜಸೀಂ ಸಜೀಪ, ವಲಯ ಕಿಸಾನ್ ಘಟಕದ ಅಧ್ಯಕ್ಷ ಹನೀಫ್ ಗೋಳಿಪಡ್ಪು, ವಲಯ ಕಾಂಗ್ರೆಸ್ ಕೋಶಾಧಿಕಾರಿ ಮೂಸಬ್ಬ ಬೈಲು ಗುತ್ತು, ಯುವ ಕಾಂಗ್ರೆಸ್ ಬೂತ್ ಸಮೀತಿಯ ಅಧ್ಯಕ್ಷರಾದ ಅಬ್ದುಲ್ ರಹಿಮಾನ್ ನಿಸಾರ್, ಇಕ್ಬಾಲ್ ಎಸ್. ಎಂ, ಫತ್ತಾಹ್ ಕಂಚಿನಡ್ಕಪದವು, ವಲಯ ಉಪಾಧ್ಯಕ್ಷರಾದ ಜನಾರ್ಧನ್ ದೇರಾಜೆ, ಗಿರೀಶ್ ಪೂಜಾರಿ ಪೆರ್ವ, ಕಿಶೋರ್ ದೇರಾಜೆ ಉಪಸ್ಥಿತರಿದ್ದರು. ಸಜೀಪನಡು ವಲಯ ಕಾಂಗ್ರೆಸ್ ಅಧ್ಯಕ್ಷ ಎಸ್. ಅಬೂಬಕ್ಕರ್ ಸಜೀಪ ಸ್ವಾಗತಿಸಿ, ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸಜೀಪಕ್ಕೆ ಮಾದರಿ ರಾಜ ಮಾರ್ಗ ನಿರ್ಮಾಣ: ಸಚಿವ ಖಾದರ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*