ಗಮಕ ಕಲೆ ಸನಾತನ ಲಲಿತಕಲೆ: ಮುಳಿಯ ಶಂಕರ ಭಟ್

www.bantwalnews.com – ಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ಕಾವ್ಯ ಮತ್ತು  ಸಂಗೀತಗಳಲ್ಲಿ  ಪದಭಾವ ಮತ್ತು ರಾಗಭಾವ ರೂಪದಲ್ಲಿ ಗಮಕ ಕಲೆಯು  ನಿಹಿತವಾಗಿರುವುದರಿಂದ ಈ ಕಲೆ ಸನಾತನ ಲಲಿತಕಲೆ ಎಂದು ಬಂಟ್ವಾಳ ತಾಲೂಕು ಗಮಕ ಸಮ್ಮೇಳನದ ಸರ್ವಾಧ್ಯಕ್ಷ ಎಳೆಯರ ಗೆಳೆಯ ಮುಳಿಯ ಶಂಕರ ಭಟ್ ಹೇಳಿದರು.

ಗಮಕ ಕಲಾ ಪರಿಷತ್ತು ಬಂಟ್ವಾಳ ತಾಲೂಕು ಘಟಕ ಹಾಗೂ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಮಂಚಿ ಆಶ್ರಯದಲ್ಲಿ ಜೀಣೋದ್ಧಾರಗೊಳ್ಳುತ್ತಿರುವ ಮಂಚಿ ಶ್ರೀ ಗೋಪಾಲಕೃಷ್ಣ ದೇವಾಸ್ಥಾನದ ವಠಾರದಲ್ಲಿ ಭಾನುವಾರ ನಡೆದ ತಾಲೂಕಿನ ಮೊದಲ ಗಮಕ ಸಮ್ಮೇಳನ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಯಾವುದೇ ಒಂದು ಭಾಷಾ ಸಾಹಿತ್ಯದ ಗದ್ಯ ಪದ್ಯ ರಚನೆಗಳನ್ನು ವಾಚಿಸುವ ಕ್ರಮವನ್ನು ನಿರ್ದೇಶಿಸುವ ಶಾಸ್ತ್ರವೇ ಗಮಕ ಕಲೆ. ಗಾಯನ ಮತ್ತು ಕಾವ್ಯಗಳೆರಡರ ಬಂಧವನ್ನು ಪ್ರತಿಪಾದಿಸುವ ವಿಶಿಷ್ಠ ಕಲೆ ಇದಾಗಿದೆ, ಗಮಕ ಕಲೆ ಏಕಕಾಲದಲ್ಲಿ ಸಾಹಿತ್ಯ ಮತ್ತು ಸಂಗೀತದ ಸೌರಭ ಮತ್ತು ಸೌಂದರ್‍ಯವನ್ನು  ಪ್ರತಿಫಲಿಸುತ್ತದೆ ಎಂದರು.

ಭಾಷಾ ಭೋದಕರು ರಸವತ್ತಾಗಿ ಹಾಡುವುದು ಶಿಕ್ಷಕ ವೃತ್ತಿಗೆ  ತಕ್ಕುದಲ್ಲ ಎಂದು ಭಾವಿಸಿದಂತಿದೆ, ಚಂಪೂಕಾವ್ಯಗಳಿಗೆ ವ್ಯಾಖ್ಯಾನ ಅಗತ್ಯ. ಷಟ್ಪದಿ ಕಾವ್ಯಗಳಿಗೆ ಅಗತ್ಯವಿಲ್ಲ ಎಂಬ ಅಭಿಪ್ರಾಯವಿದೆ. ಕ್ಲಿಷ್ಟ ಪದಗಳು, ಸಂಭಾಷಣೆಗಳು ಒದಗಿದಾಗ ಗಮಕಿಯು ಎಷ್ಟೇ ಅರ್ಥವತ್ತಾಗಿ ಹಾಡಿದ್ದಲ್ಲಿ ಶೋತೃಗಳಿಗೆ ಅರ್ಥವಾಗುವುದು ಕಷ್ಟವಾಗುತ್ತದೆ ಎಂದರು.

ಜಾಹೀರಾತು

ಶಾಲಾ ಕಾಲೇಜುಗಳಲ್ಲಿ ಗಮಕ ಕಲಿಕೆ:

ಗಮಕ ಕಲೆಗೆ ಸರಕಾರದ ಪ್ರೋತ್ಸಾಹದ ಅಗತ್ಯವಿದ್ದು,  ಶಾಲಾ ಕಾಲೇಜುಗಳಲ್ಲಿ ಗಮಕ ಕಲಿಸುವ ಕಾರ್ಯ ಆಗಬೇಕು ಎಂದು ಕಾರ್ಯಕ್ರಮ ಉದ್ಘಾಟಿಸಿದ ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ಹೇಳಿದರು.

ಸರಕಾರ ಕನ್ನಡ ಸಾಹಿತ್ಯ ಪರಿಷತ್ತಿಗೆ ಆರ್ಥಿಕ ಸಹಕಾರ ನೀಡುತ್ತಿದೆ, ಪುರಾಣ ಸಾಹಿತ್ಯದ ಮೌಲ್ಯಗಳನ್ನು ತಿಳಿಸುವ ಹಾಗೂ ಧಾರ್ಮಿಕ ಜಾಗೃತಿಯಲ್ಲಿ ಉತ್ತಮ ಮಾಧ್ಯಮವಾಗಿರುವ ಗಮಕ ಕಲೆಯನ್ನು ಪ್ರೋತ್ಸಾಹಿಸುವ ಅಗತ್ಯವಿದೆ ಆದ್ದರಿಂದ ಗಮಕ ಸಮ್ಮೇಳನಕ್ಕೂ  ಸರಕಾರ ಆರ್ಥಿಕ ಸಹಾಯವನ್ನು ನೀಡಬೇಕೆಂದು ಆಗ್ರಹಿಸಿದರು.

ಜಾಹೀರಾತು

ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಗಮಕ ಕಲಾ ಪರಿಷತ್ತಿನ ಜಿಲ್ಲಾಧ್ಯಕ್ಷ ಪ್ರೊ. ಮಧೂರು ಮೋಹನ ಕಲ್ಲೂರಾಯ ಮಾತನಾಡಿ ಗಮಕ ಕಲೆಗೆ ಹಿಂದೆ ರಾಜಾಶ್ರಯವಿತ್ತು. ಕಾವ್ಯವಾಚನ, ಪುರಾಣ ವಾಚನಗಳು, ನಿರಂತರವಾಗಿ ನಡೆಯುತ್ತಿತ್ತು. ಪುರಾಣ ಕಾವ್ಯಗಳ ವಾಚನಾಸಕ್ತಿ ಕಡಿಮೆಯಾಗುತ್ತಿದ್ದು ಶಾಲಾ ಪಠ್ಯ ಪುಸಕ್ತಗಳಲ್ಲಿ ಗಮಕ ಕಲೆಯ ಪರಿಚಯವಿರಬೇಕು. ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಸೂಕ್ತ ತರಬೇತಿಯ ಅಗತ್ಯವಿದೆ,  ಪರಂಪರಾಗತವಾಗಿ ಬಂದಿರುವ ಕಲೆ ಯನ್ನು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ ಯಾಗಿದೆ ಎಂದರು.

ಗಮಕಿ ಗಣಪತಿ ಪದ್ಯಾಣ, ಸಮ್ಮೇಳನದ ಸರ್ವಾಧ್ಯಕ್ಷ ಎಳೆಯರ ಗೆಳೆಯ ಮುಳಿಯ ಶಂಕರಭಟ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮೋಹನ್ ರಾವ್, ತಾಲೂಕು ಕನ್ನಡ ಭವನ ನಿರ್ಮಾಣ ಸಮಿತಿ ಸಂಚಾಲಕ ಕೊಳಕೆ ಗಂಗಾಧರ ಭಟ್ ಉಪಸ್ಥಿತರಿದ್ದರು. ತಾಲೂಕು ಗಮಕ ಪರಿಷತ್ತಿನ ಅಧ್ಯಕ್ಷ  ಕೈಯ್ಯೂರು ನಾರಾಯಣ ಭಟ್ ಸ್ವಾಗತಿಸಿದರು, ಕಸಾಪ ನಿಕಟಪೂರ್ವ ಅಧ್ಯಕ್ಷ ಜಯಾನಂದ ಪೆರಾಜೆ ವಂದಿಸಿದರು, ನಿವೃತ್ತ ಉಪಾನ್ಯಾಸಕ ಕೆ.ಎನ್ ಮಹಾಲಿಂಗ ಭಟ್ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಗಮಕ ಕಲೆ ಸನಾತನ ಲಲಿತಕಲೆ: ಮುಳಿಯ ಶಂಕರ ಭಟ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*