ಬಿಎಸ್ ಎಫ್ ಸೇರುವವರಿಗೆ ರೋಲ್ ಮಾಡೆಲ್ ಪುತ್ತೂರಿನ ಸ್ಫೂರ್ತಿ

ಅಧಿಕಾರಿಯಾಗಿ ನೇಮಕಗೊಂಡ ದಕ್ಷಿಣ ಭಾರತದ ಏಕೈಕ ಮಹಿಳೆ

ಜಾಹೀರಾತು

ಇದೇ ಮೊದಲ ಬಾರಿಗೆ ಭಾರತೀಯ ಗಡಿಭದ್ರತಾ ಪಡೆ(ಬಿಎಸ್‌ಎಫ್)ಗೆ ಆಯ್ಕೆಯಾಗಿದ್ದ ದಕ್ಷಿಣ ಭಾರತ ಏಕೈಕ ಮಹಿಳೆ, ಕನ್ನಡಿಗ, ದ.ಕ.ಜಿಲ್ಲೆಯ ಪುತ್ತೂರಿನ ಸ್ಫೂರ್ತಿ ಭಟ್ ಈಗ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ.

ಒಂದು ವರ್ಷದ ತರಬೇತಿಯನ್ನು ಮುಕ್ತಾಯಗೊಳಿಸಿದ ಬಳಿಕ ಸ್ಫೂರ್ತಿ ಭಟ್ ಅವರನ್ನು ಪಂಜಾಬಿನ ಗುರುದಾಸ್‌ಪುರ್ ಜಿಲ್ಲೆಗೆ ಬಿಎಸ್‌ಎಫ್‌ನ ಅಸಿಸ್ಟೆಂಟ್ ಕಮಾಂಡೆಂಟ್ ಆಗಿ ನೇಮಕಗೊಳಿಸಲಾಗಿದೆ. ಭಾರತೀಯ ಗಡಿ ಭದ್ರತಾ ಸೈನ್ಯದಲ್ಲಿ ಈಕೆ ಪಾಕ್ ಗಡಿಯ ಸರಹದ್ದಿನಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ. ಈ ಮೂಲಕ ದಕ್ಷಿಣ ಭಾರತದಲ್ಲೇ ಬಿಎಸ್‌ಎಫ್‌ಗೆ ಸೇರ್ಪಡೆಯಾದ ಮೊದಲ ಮಹಿಳೆ ಎನಿಸಿದ್ದಾರೆ. ಬಿಎಸ್‌ಎಫ್‌ನಲ್ಲಿ 2013ರ ಬ್ಯಾಚ್‌ನಲ್ಲಿ ರಾಜಸ್ಥಾನದ ಮಹಿಳೆಯೊಬ್ಬರು ಆಯ್ಕೆಯಾಗಿ ಅಸಿಸ್ಟೆಂಟ್ ಕಮಾಂಡೆಂಟ್ ಆಗಿ ಪಂಜಾಬ್ ಪ್ರಾಂತ್ಯದಲ್ಲಿ ನೇಮಕಗೊಂಡಿದ್ದರು. ಸ್ಫೂರ್ತಿ ಭಟ್ ಬಿಎಸ್‌ಎಫ್‌ನಲ್ಲಿ ನೇಮಕಗೊಂಡ ಎರಡನೇ ಮಹಿಳೆಯಾಗಿದ್ದು, ಈಕೆ 2015 ನೇ ಬ್ಯಾಚ್ ಆಗಿದ್ದಾರೆ.

ಡೆಹರಾಡೂನ್, ಜಮ್ಮು ಹಾಗೂ ಮಧ್ಯಪ್ರದೇಶದಲ್ಲಿ ಒಂದು ವರ್ಷದ ಕಠಿಣ ತರಬೇತಿಯನ್ನು ಪೂರ್ಣಗೊಳಿಸಿದ್ದರು. ಏಪ್ರಿಲ್ ಪ್ರಥಮ ವಾರದಲ್ಲಿ ಸ್ಫೂರ್ತಿ ಭಟ್ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.

ಜಾಹೀರಾತು

ಸ್ಫೂರ್ತಿ ಭಟ್ ಅವರು ಮೂಲತಃ ಪುತ್ತೂರಿನ ಉಪ್ಪಿನಂಗಡಿ ಬಳಿಯ ನಿವಾಸಿ. ತಂದೆ ಕೆ.ಬಾಲಸುಬ್ರಹ್ಮಣ್ಯ ಭಟ್ ಅವರು ಕೇಂದ್ರ ಸರ್ಕಾರದ ನಿವೃತ್ತ ಅಧಿಕಾರಿ. ತರಬೇತಿ ಅವಧಿಯಲ್ಲಿ ಸ್ಫೂರ್ತಿ ಭಟ್ ವಿವಾಹವಾಗಿದ್ದು, ಈಕೆಯ ಪತಿ ಶ್ಯಾಮಕೃಷ್ಣ ಪಿ.ಎಸ್. ಇವರು ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್‌ಪಿಎಫ್)ಯಲ್ಲಿ ಅಸಿಸ್ಟೆಂಟ್ ಕಮಾಂಡೆಂಟ್ ಆಗಿದ್ದಾರೆ. ಪ್ರಸ್ತುತ ಹರ್ಯಾಣದ ಗುರುಗಾವ್‌ನ ಸಿಆರ್‌ಪಿಎಫ್ ಅಕಾಡೆಮಿಯಲ್ಲಿ ತರಬೇತಿಯಲ್ಲಿದ್ದಾರೆ.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಿಎಸ್ ಎಫ್ ಸೇರುವವರಿಗೆ ರೋಲ್ ಮಾಡೆಲ್ ಪುತ್ತೂರಿನ ಸ್ಫೂರ್ತಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*