ಗೋಸ್ವರ್ಗ ಯೋಜನೆ: ಮಾಣಿಯಲ್ಲಿ ಮಾಹಿತಿ ಕಾರ್ಯಾಗಾರ


ಪೆರಾಜೆ ಶ್ರೀರಾಮಚಂದ್ರಾಪುರ ಮಠದ ಜನಭವನದಲ್ಲಿ ಗೋಸ್ವರ್ಗ ಯೋಜನೆ ಬಗ್ಗೆ ಮಾಹಿತಿ ಕಾರ್ಯಾಗಾರ, ಸಂವಾದ ನಡೆಯಿತು.

ಮಾಣಿ ಮಠದ ಸೇವಾ ಸಮಿತಿ ಅಧ್ಯಕ್ಷ ಹಾಗೂ ಗೋಸ್ವರ್ಗ ಲೋಕಾರ್ಪಣೆ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಹಾರಕರೆ ನಾರಾಯಣ ಭಟ್ ಮಾತನಾಡಿ ಗೋಸ್ವರ್ಗವು ಗೋವುಗಳ ಸಂರಕ್ಷಣೆ ಯೋಜನೆಯಾಗಿದ್ದು, ಸಾವಿರಕ್ಕೂ ಅಽಕ ಗೋವುಗಳ ಆಶ್ರಯತಾಣವಾಗಲಿದೆ. ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಭಾನ್ಕುಳಿ ಮಠದಲ್ಲಿ ಸಹಸ್ರ ಗೋವುಗಳ ಸಹಜ, ಸ್ವಚ್ಛಂದ ಬದುಕಿಗಾಗಿ ಈ ಅಪೂರ್ವ ಯೋಜನೆಯನ್ನು ಹಮ್ಮಿಕೊಂಡಿದ್ದಾರೆ. ಈ ಯೋಜನೆಯು ಮೇ ೨೭ರಂದು ಲೋಕಾರ್ಪಣೆಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೀ ಮತ್ತು ಕೇಂದ್ರದ ಸಚಿವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಮಹಾಮಂಡಲ ಅಧ್ಯಕ್ಷೆ ಈಶ್ವರಿ ಶ್ಯಾಮ್ ಭಟ್ ಬೇರ್ಕಡವು ಅಧ್ಯಕ್ಷತೆ ವಹಿಸಿ, ಮಾತನಾಡಿ, ಈ ಯೋಜನೆಯನ್ನು ಯಶಸ್ವಿಗೊಳಿಸುವುದಕ್ಕಾಗಿ ಸಾವಿರದ ಸುರಭಿ ಅಭಿಯಾನ ಆರಂಭಿಸಲಾಗಿದೆ. ಸಾವಿರಾರು ಸುರಭಿ ಸೇವಿಕೆಯರು ಈ ಮಹಾ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ. ರಾಜ್ಯದಾದ್ಯಂತ ಗೋಪ್ರೇಮಿಗಳು ಈ ಯೋಜನೆಗೆ ಸ್ಪಂದಿಸುತ್ತಿದ್ದಾರೆ ಎಂದು ತಿಳಿಸಿದರು.

ಜಾಹೀರಾತು

ಮಹಾಮಂಡಲ ಪ್ರಧಾನ ಕಾರ್ಯದರ್ಶಿ ಹರಿಪ್ರಸಾದ್ ಪೆರಿಯಾಪ್ಪು ಅವರು ಮಾತನಾಡಿ, ಗೋಸಂರಕ್ಷಣೆಯ ಇಂತಹ ಪರಿಪೂರ್ಣ ಯೋಜನೆ ದೇಶದಲ್ಲಿಲ್ಲ. ದೇಸೀ ತಳಿಗಳನ್ನು ಸಂರಕ್ಷಿಸುವ ಶ್ರೀಗಳ ಈ ಯೋಜನೆಗೆ ಸುಮಾರು ೧೦ ಕೋಟಿ ರೂ.ಗಳ ಸಂಪನ್ಮೂಲದ ಆವಶ್ಯಕತೆಯಿದೆ. ಇದಕ್ಕೆ ಹಲವಾರು ದಾನಿಗಳು ಮುಂದೆ ಬಂದಿದ್ದು, ಈ ಯೋಜನೆಯ ಮಾಹಿತಿ ಪಡೆದುಕೊಂಡ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಜೀ ಅವರು ಸಂತಸ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.

ಮಹಾಮಂಡಲ ಮುಷ್ಟಿ ಭಿಕ್ಷೆ ಪ್ರಧಾನ ಮಲ್ಲಿಕಾ ಜಿ.ಕೆ.ಭಟ್, ಗೋಸ್ವರ್ಗ ಸಮಿತಿಯ ಸದಸ್ಯರಾದ ಪದ್ಮನಾಭ ಕೊಂಕೋಡಿ, ಪಡೀಲು ಮಹಾಬಲೇಶ್ವರ ಭಟ್, ಮುಳ್ಳೇರಿಯ ಹವ್ಯಕ ಮಂಡಲ ಅಧ್ಯಕ್ಷ ಪ್ರೊ.ಟಿ. ಶ್ರೀಕೃಷ್ಣ ಭಟ್, ಉಪ್ಪಿನಂಗಡಿ ಹವ್ಯಕ ಮಂಡಲ ಅಧ್ಯಕ್ಷ ಅಶೋಕ್ ಕೆದ್ಲ, ಮಂಗಳೂರು ಮಂಡಲ ಕಾರ್ಯದರ್ಶಿ ಪೆದಮಲೆ ನಾಗರಾಜ ಭಟ್ ಉಪಸ್ಥಿತರಿದ್ದರು. ದೇವಿಕಾ ಶಾಸ್ತ್ರಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಗೋಸ್ವರ್ಗ ಯೋಜನೆ: ಮಾಣಿಯಲ್ಲಿ ಮಾಹಿತಿ ಕಾರ್ಯಾಗಾರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*