ಯಡಿಯೂರಪ್ಪ ಔಟ್, ಕುಮಾರಸ್ವಾಮಿ ಇನ್

www.bantwalnews.com – ಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ರಾಜ್ಯದ ಜನತೆಗೆ ಭರವಸೆ ಕೊಡ್ತೇನೆ. ಇನ್ನೈದು ವರ್ಷ ಅಥವಾ ಅದರ ಮಧ್ಯ ಮತ್ತೊಮ್ಮೆ ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಬಹುದು, ಬಿಜೆಪಿಗೆ 150 ಸ್ಥಾನ ಗಳಿಸುವಂತೆ ಪ್ರಯತ್ನಿಸುತ್ತೇನೆ. ಅಧಿವೇಶನ ಮುಗಿದ ಬಳಿಕ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತೇನೆ. ರಾಜ್ಯದ ಜನತೆಗೆ ನಮನ ಸಲ್ಲಿಸುತ್ತೇನೆ. ರಾಜ್ಯದ ಶಾಸಕರಿಗೆ ಆತ್ಮಸಾಕ್ಷಿ ಮತ ಹಾಕಲು ನಾನು ಕೋರಿದ್ದೂ ನಿಜ. ಅಧಿಕಾರದಲ್ಲಿರಲಿ, ವಿರೋಧ ಪಕ್ಷದಲ್ಲಿರಲಿ, ಕುಮಾರಸ್ವಾಮಿಯವರೇ ಹೋರಾಟ ಮಾಡ್ತೇನೆ. ಜನರಿಗಾಗ ಪ್ರಾಣ ಕೊಡ್ತೇನೆ.ವಿಶ್ವಾಸಮತದ ಪ್ರಸ್ತಾಪ ಮುಂದುವರಿಸಿದ್ದೇನೆ. ಮುಖ್ಯಮಂತ್ರಿ ಸ್ಥಾನಕಕ್ಕೆ ರಾಜೀನಾಮೆ ಸಲ್ಲಿಸ್ತೇನೆ.

ಇದು ಶನಿವಾರ ಸಂಜೆ 4 ಗಂಟೆಯಾದ ಬಳಿಕ ಮೇ.17ರಂದು ಬೆಳಗ್ಗೆ 9 ಗಂಟೆಗೆ ಪ್ರಮಾಣವಚನ ಸ್ವೀಕರಿಸಿದ ಬಿ.ಎಸ್.ಯಡಿಯೂರಪ್ಪ ಶನಿವಾರ ವಿಧಾನಸಭೆಯಲ್ಲಿ ಮಾತನಾಡಿದ ರೀತಿ. ಹಾಗೆ ಹೇಳಿದ ಮಾತು ಮುಗಿಸಿದ ಯಡಿಯೂರಪ್ಪ ಎಲ್ಲರಿಗೂ ನಮಸ್ಕಾರ ಹೇಳುತ್ತಾ ರಾಜಭವನಕ್ಕೆ ತೆರಳಿದರೆ, ಇತ್ತ ಭಾವಿ ಮುಖ್ಯಮಂತ್ರಿ ಎಂದೇ ಬಿಂಬಿಸಲಾಗುತ್ತಿರುವ ಎಚ್.ಡಿ.ಕುಮಾರಸ್ವಾಮಿ ಅವರ ಮೊಗದಲ್ಲಿ ಮಂದಹಾಸ ಮೂಡಿತ್ತು. ಬದ್ಧವೈರಿಗಳಾದ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಅದರಲ್ಲೂ ಡಿ.ಕೆ.ಶಿವಕುಮಾರ್ ಮತ್ತು ಕುಮಾರಸ್ವಾಮಿ ವಿಧಾನಸೌಧದಲ್ಲಿ ವಿಜಯದ ಸಂಕೇತವಾದ ಎರಡು ಬೆರಳುಗಳನ್ನೆತ್ತಿ ಸಂಭ್ರಮಸಿದರೆ, ಉಳಿದ ಕಾಂಗ್ರೆಸ್ ಜೆಡಿಎಸ್ ಶಾಸಕರ ಮುಖದಲ್ಲಿನ ಆತಂಕ ದೂರವಾಗಿತ್ತು. ಬಿಜೆಪಿ ಸದಸ್ಯರು ಮೌನವಾಗಿಯೇ ಯಡಿಯೂರಪ್ಪನವರನ್ನು ಹಿಂಬಾಲಿಸಿದರು.

ಇದರೊಂದಿಗೆ 55 ಗಂಟೆಗಳ ಅಧಿಕಾರ ಅನುಭವಿಸಿದ ಯಡಿಯೂರಪ್ಪ ಹೊರಬಿದ್ದರೆ, ಕಾಂಗ್ರೆಸ್ ಬೆಂಬಲದೊಂದಿಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವ ಸಿದ್ಧತೆ ನಡೆಸುತ್ತಿದ್ದಾರೆ. 2004ರ ಬಳಿಕ ಮತ್ತೊಮ್ಮೆ ಕಾಂಗ್ರೆಸ್ – ಜೆಡಿಎಸ್ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ. ಆದರೆ ಈ ಬಾರಿ ಮುಖ್ಯಮಂತ್ರಿ ಜೆಡಿಎಸ್ ನ ಕುಮಾರಸ್ವಾಮಿ. (ಅಂದು ಧರ್ಮಸಿಂಗ್ ಸಿಎಂ ಆಗಿದ್ದರು)

ಜಾಹೀರಾತು

ಆದರೆ ಮುಂದಿನ ಸರಕಾರ ಅಸ್ತಿತ್ವಕ್ಕೆ ಬರುವವರೆಗೂ ಯಡಿಯೂರಪ್ಪ ಜೋಪಾಸನಾ ಮುಖ್ಯಮಂತ್ರಿಯಾಗಿರುತ್ತಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಯಡಿಯೂರಪ್ಪ ಔಟ್, ಕುಮಾರಸ್ವಾಮಿ ಇನ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*