ಗ್ರಾಪಂ ಉಪಚುನಾವಣೆ: ಒಂದು ಕಾಂಗ್ರೆಸ್ ಮತ್ತೊಂದು ಬಿಜೆಪಿ ಬೆಂಬಲಿತರಿಗೆ ಜಯ

www.bantwalnews.com – ಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ಬಂಟ್ವಾಳ ತಾಲೂಕಿನ ಅಮ್ಟಾಡಿ ಹಾಗೂ ಇರ್ವತ್ತೂರು ಗ್ರಾ.ಪಂಗಳಲ್ಲಿ ತೆರವಾಗಿದ್ದ ತಲಾ ಒಂದೊಂದು ಸ್ಥಾನಗಳಿಗೆ ಗುರುವಾರ ನಡೆದ ಉಪಚುನಾವಣೆಯ ಮತ ಎಣಿಕೆ ಭಾನುವಾರ ನಡೆದಿದ್ದು, ಇರ್ವತ್ತೂರು ಗ್ರಾಮದಲ್ಲಿ ಕಾಂಗ್ರೆಸ್ ಬೆಂಬಲಿತ ಸುಧೀಂದ್ರ ಶೆಟ್ಟಿ ಮತ್ತು ಅಮ್ಟಾಡಿ ಗ್ರಾಮದಲ್ಲಿ ಬಿಜೆಪಿ ಬೆಂಬಲಿತ ಸುರೇಂದ್ರ ಪೂಜಾರಿ ಚುನಾಯಿತರಾಗಿದ್ದಾರೆ.

ಎರಡೂ ಸ್ಥಾನಗಳ ಮತ ಎಣಿಕೆ ಜೂ. 17ರಂದು ಭಾನುವಾರ ಬಿ.ಸಿ.ರೋಡಿನ ಮಿನಿ ವಿಧಾನಸೌದದಲ್ಲಿ ನಡೆಯಿತು.ತಹಶೀಲ್ದಾರ್ ವೈ.ರವಿ ನಿರ್ದೇಶನದಲ್ಲಿ ಸಿಬ್ಬಂದಿ ಚುನಾವಣಾ ಮತ ಎಣಿಕೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು.

ಜಾಹೀರಾತು

ಅಮ್ಟಾಡಿ ಪಂಚಾಯಿತಿ ಸದಸ್ಯೆ ಚಂದ್ರಾವತಿ ಬಿ. ಭಂಡಾರಿ ಅವರ ನಿಧನದಿಂದ  ತೆರವಾಗಿದ್ದ ಒಂದು ಸ್ಥಾನಕ್ಕೆ ಬಂಟ್ವಾಳದ ಎಸ್‌ವಿಎಸ್ ಟೆಂಪಲ್ ಶಾಲೆಯಲ್ಲಿ ಉಪಚುನಾವಣೆ ನಡೆದಿತ್ತು. ಪಂಚಾಯಿತಿಯ ಸಿಪಿಐ ಬೆಂಬಲಿತ ಸದಸ್ಯೆಯಾಗಿದ್ದ ಚಂದ್ರಾವತಿಯವರು ಕಳೆದ ಕೆಲ ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟ ಹಿನ್ನಲೆಯಲ್ಲಿ ಈ ಸ್ಥಾನ ತೆರವಾಗಿತ್ತು. ಇಬ್ಬರು ಅಭ್ಯರ್ಥಿಗಳು ಕಣದಲ್ಲಿದ್ದು ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುರೇಂದ್ರ ಪೂಜಾರಿ 332 ಮತಗಳನ್ನು ಪಡೆದರು. ಹಾಗೂ ಸಿಪಿಐ ಬೆಂಬಲಿತ ಅಭ್ಯರ್ಥಿಯಾಗಿ ಮೃತ ಚಂದ್ರಾವತಿಯವರ ಪತಿ ಬಾಬು ಭಂಡಾರಿ 315 ಮತಗಳನ್ನು ಗಳಿಸಿದ್ದಾರೆ. ಈ ಮೂಲಕ ಬಿಜೆಪಿ ಬೆಂಬಲಿತ ಸುರೇಂದ್ರ ಪೂಜಾರಿ ವಿಜಯಿಯಾದರು.

ಇರ್ವತ್ತೂರು ಗ್ರಾಮ ಪಂಚಾಯತ್‌ನ ಮೂಡುಪಡುಕೋಡಿ 1ನೇ ಕ್ಷೇತ್ರದ ತೆರವಾದ ಒಂದು ಸ್ಥಾನಕ್ಕೆ ಗುರುವಾರ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಸುಧೀಂದ್ರ ಶೆಟ್ಟಿ 391 ಮತ ಗಳಿಸಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಜನಾರ್ದನ ಶೆಟ್ಟಿ 302 ಮತ ಪಡೆದಿದ್ದಾರೆ. ಹಿಂದಿನ ಸದಸ್ಯ ಸುಂದರ ಶೆಟ್ಟಿಯವರು ಪಂಚಾಯಿತಿಯ ಸಾಮಾನ್ಯ ಸಭೆಗೆ ನಿರಂತರವಾಗಿ ಗೈರು ಹಾಜರಾದ ಹಿನ್ನಲೆಯಲ್ಲಿ ಅವರ ಸದಸ್ಯತ್ವ ರದ್ದಾಗಿತ್ತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಗ್ರಾಪಂ ಉಪಚುನಾವಣೆ: ಒಂದು ಕಾಂಗ್ರೆಸ್ ಮತ್ತೊಂದು ಬಿಜೆಪಿ ಬೆಂಬಲಿತರಿಗೆ ಜಯ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*