ಜನರ ತೆರಿಗೆ ಹಣದ ಒಂದು ಪೈಸೆಯೂ ಪೋಲಾಗಲು ಬಿಡುವುದಿಲ್ಲ: ರಾಜೇಶ್ ನಾಯ್ಕ್

ಜನರ ತೆರಿಗೆ ಹಣವನ್ನು ಬಳಸಿ ಅಭಿವೃದ್ಧಿ ಕಾರ್ಯಗಳಿಗೆ ಬಳಸಲಾಗುತ್ತದೆ. ಕೆಲವೊಂದು ಬಾರಿ ಹಣ ಉಳಿದಿದೆ ಎಂದು ಹಿಂದೆ ಮುಂದೆ ನೋಡದೆ ಯೋಜನೆಗಳನ್ನು ರೂಪಿಸಲಾಗುತ್ತದೆ. ಆದರೆ ಹಾಗಾಗಲು ನನ್ನ ಅವಧಿಯಲ್ಲಿ ಬಿಡುವುದಿಲ್ಲ. ಜನರ ಹಣದ ಒಂದು ಪೈಸೆಯೂ ಪೋಲಾಗಲು ಬಿಡುವುದಿಲ್ಲ. ಶಾಂತಿ, ನೆಮ್ಮದಿಯ ಜೀವನದೊಂದಿಗೆ ಬಂಟ್ವಾಳವನ್ನು ಪ್ರಗತಿಪಥದಲ್ಲಿ ಮುನ್ನಡೆಸಲು ಮುಂದಡಿ ಇಟ್ಟಿದ್ದೇನೆ.

ಜಾಹೀರಾತು

ಹೀಗಂದವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ.

ಶನಿವಾರ ಸಂಜೆ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಪ್ರೆಸ್ ಕ್ಲಬ್ ಸಹಯೋಗದೊಂದಿಗೆ ಪ್ರೆಸ್ ಕ್ಲಬ್ ಕಚೇರಿಯಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಮತ್ತು ಸಂವಾದ ಕಾರ್ಯಕ್ರಮದಲ್ಲಿ ತನ್ನ ಅನಿಸಿಕೆ ವ್ಯಕ್ತಪಡಿಸಿದ ಶಾಸಕ ರಾಜೇಶ್ ನಾಯ್ಕ್, ಕ್ಷೇತ್ರದ ಪ್ರಮುಖ ಕೇಂದ್ರವಾದ ಬಂಟ್ವಾಳದ ಕುರಿತು ತಜ್ಞರನ್ನು ಒಟ್ಟುಗೂಡಿಸಿ ಚಿಂತಕರ ಸಮಿತಿಯನ್ನು ರಚಿಸಲಾಗುವುದು. ಅವರ ಸಲಹೆ ಸೂಚನೆಗಳನ್ನೂ ಯೋಜನೆಗಳನ್ನು ರೂಪಿಸುವಾಗ ಪಡೆಯಲಾಗುವುದು. ದೂರದೃಷ್ಟಿ ಇಲ್ಲದೆ ನಾವು ಯೋಜನೆ ರೂಪಿಸಿದರೆ, ಅದು ವಿಫಲವಾಗುತ್ತದೆ. ಜನರ ದುಡ್ಡು ಪೋಲಾಗುತ್ತದೆ. ದುಡ್ಡು ಬಂದಿದೆ ಎಂದು ಏನೇನೋ ಮಾಡಿ ಹಾಕುವುದಲ್ಲ, ಹಾಗಾಗಲು ಬಿಡುವುದಿಲ್ಲ ಎಂದು ಹೇಳಿದರು.

ಬಂಟ್ವಾಳಕ್ಕೆ ಹಿಂದೆಯೇ ರೂಪಿಸಲಾದ ಒಳಚರಂಡಿ ಯೋಜನೆ ಹಾಗೂ ಅದರ ಎರಡನೇ ಹಂತದ ಕಾರ್ಯದ ಕುರಿತು ಪ್ರಸ್ತಾಪಿಸಿದ ಶಾಸಕರು, ಯೋಜನೆಯನ್ನು ಕಡಿಮೆ ವೆಚ್ಚದಲ್ಲಿ ಹೆಚ್ಚು ಲಾಭ ತರುವಂತೆ ರೂಪಿಸಬೇಕು, ಹಣವನ್ನು ನಿಗದಿಪಡಿಸುವಾಗ ಅದರಿಂದ ಜನರಿಗೇನಾದರೂ ಪ್ರಯೋಜನವಾಗುತ್ತದೆಯೇ ಎಂಬುದನ್ನು ಗಮನದಲ್ಲಿರಿಸಿಕೊಳ್ಳಬೇಕು. ಆದರೆ ಇಲ್ಲಿ ಹಲವು ಕೆಲಸಗಳು ಜನರನ್ನು ತಲುಪಲೇ ಇಲ್ಲ ಎಂದರು.

ಜಾಹೀರಾತು

ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ, ತಾಪಂ ಜಾಗದಲ್ಲಿ ನಿರ್ಮಿಸಲು ಉದ್ದೇಶಿಸಿದ ಖಾಸಗಿ ಬಸ್ ನಿಲ್ದಾಣ ಸಹಿತ ಹಲವು ವಿಚಾರಗಳ ಕುರಿತು ಉತ್ತರಿಸಿದ ಶಾಸಕರು, ಮಿನಿ ವಿಧಾನಸೌಧ ಇರಬೇಕಾದಲ್ಲಿ ಬಸ್ ನಿಲ್ದಾಣ, ಬಸ್ ನಿಲ್ದಾಣ ಇರಬೇಕಾದಲ್ಲಿ ಮಿನಿ ವಿಧಾನಸೌಧ ನಿರ್ಮಾಣವಾಗಿದೆ. ಎಲ್ಲಿ ನಿರ್ಮಾಣಗೊಂಡರೆ ಜನರಿಗೆ ಹೆಚ್ಚು ಪ್ರಯೋಜನ ಎಂಬ ಕುರಿತು ವಿಶ್ಲೇಷಿಸದೆ ಯೋಜನೆಗಳನ್ನು ರೂಪಿಸಿದ ಫಲವಾಗಿ ಇಂದು ಉಪಯೋಗಶೂನ್ಯವಾಗುವಂತೆ ಭಾಸವಾಗುತ್ತದೆ. ಹೀಗಾಗಿ ಇರುವುದನ್ನು ಯಾವ ರೀತಿ ಸದ್ಪಳಕೆ ಮಾಡಿಕೊಳ್ಳುವುದು ಎಂಬುದನ್ನು ಇನ್ನು ಮೂರು ತಿಂಗಳಲ್ಲಿ ಅಧ್ಯಯನ ಮಾಡಿ ಮಾಹಿತಿ ನೀಡುತ್ತೇನೆ ಎಂದರು.

ಜನರಿಗೆ ಪ್ರತಿಯೊಂದೂ ಮಾಹಿತಿ:

ನಾನು ಮಾಡುವ ಪ್ರತಿಯೊಂದು ಕೆಲಸವನ್ನು ಪಾರದರ್ಶಕವಾಗಿಸುವೆ. ಪ್ರತಿಯೊಂದನ್ನೂ ಜನರಿಗೆ ತಲುಪಿಸುವ ಕಾರ್ಯ ನಡೆಸುವೆ ಎಂದ ಅವರು ಕ್ಷೇತ್ರದ ಕುರಿತು ವಿಧಾನಸಭೆ ಅಧಿವೇಶನದಲ್ಲಿ ಪ್ರಶ್ನೆಗಳನ್ನು ಎತ್ತಿರುವುದಾಗಿ ತಿಳಿಸಿದರು.

ಜಾಹೀರಾತು

ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೌನೇಶ ವಿಶ್ವಕರ್ಮ ಅಧ್ಯಕ್ಷತೆಯನ್ನು ವಹಿಸಿದ್ದರು. ಪ್ರೆಸ್ ಕ್ಲಬ್ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ಶಾಸಕರನ್ನು ಅಭಿನಂದಿಸಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ವೆಂಕಟೇಶ ಬಂಟ್ವಾಳ ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಪತ್ರಕರ್ತ ಹರೀಶ ಮಾಂಬಾಡಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಪತ್ರಕರ್ತ ರತ್ನದೇವ ಪುಂಜಾಲಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಜನರ ತೆರಿಗೆ ಹಣದ ಒಂದು ಪೈಸೆಯೂ ಪೋಲಾಗಲು ಬಿಡುವುದಿಲ್ಲ: ರಾಜೇಶ್ ನಾಯ್ಕ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*