ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿಗೆ ಹೆಸರು ಸೇರ್ಪಡೆ ಹಾಗೂ ರದ್ದತಿಗೆ ಯಾವುದೇ ತಾಂತ್ರಿಕ ಸಮಸ್ಯೆ ಇಲ್ಲ ಎಂದು ರಾಜ್ಯ ಆಹಾರ ಮತ್ತು ಗ್ರಾಹ ಕರ ವ್ಯವಹಾರ ಸಚಿವ ಜಮೀರ್ ಖಾನ್ ಸ್ಪಷ್ಟಪಡಿಸಿದ್ದಾರೆ.
ವಿಧಾನಸಭೆಯಲ್ಲಿ ಬಂಟ್ವಾಳ ಶಾಸಕ ಯು.ರಾಜೇಶ್ ನಾಯ್ಕ್ ಅವರು,ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸಚಿವರು, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಈ ಕಾರ್ಯ ವನ್ನು ಸ್ಥಗಿತಗೊಳಿಸಲಾಗಿತ್ತು. ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಮತ್ತುರದ್ದತಿ ಇತ್ಯಾದಿ ಮಾರ್ಪಾಡು ಸೇವೆಯನ್ನು ಈಗ ಪುನ:ಆರಂಭಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ತಾಲೂಕಲ್ಲಿ ಪಡಿತರ ಚೀಟಿ ಸೇರ್ಪಡೆ, ರದ್ಧತಿಗೆ ಸಮಸ್ಯೆ ಇಲ್ಲ"