ಶಿರಾಡಿ ಕೊನೆಗೂ ರೆಡಿ

ಸುಮಾರು ಆರು ತಿಂಗಳ ಗ್ಯಾಪ್ ನಂತರ ಪಶ್ಚಿಮ ಘಟ್ಟದ ವಿಹಂಗಮ ನೋಟಗಳನ್ನು ನೀಡುವ ಶಿರಾಡಿ ಘಾಟಿ ರಸ್ತೆ ಸಂಚಾರಕ್ಕೆ ಮುಕ್ತವಾಗಲಿದೆ. ಭಾನುವಾರ ಮಧ್ಯಾಹ್ನ  ನಂತರ ಪ್ರಯಾಣಿಕರು ಸರಾಗವಾಗಿ ಈ ರಸ್ತೆಯಲ್ಲಿ ಸಂಚರಿಸಬಹುದು.

ಜಾಹೀರಾತು

ಚಾರ್ಮಾಡಿ, ಸಂಪಾಜೆ ಘಾಟಿ ಮೂಲಕ ಬೆಂಗಳೂರು ತಲುಪುತ್ತಿದ್ದ ಪ್ರಯಾಣಿಕರು ಇನ್ನು ಈ ಘಾಟಿಯಲ್ಲಿ ಸಂಚರಿಸಲು ಸಾಧ್ಯ. ಮಂಗಳೂರನ್ನು ರಾಜಧಾನಿ ಬೆಂಗಳೂರಿನೊಂದಿಗೆ ಬೆಸೆಯುವ 350 ಕಿ.ಮೀ. ಉದ್ದದ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಮುಖ ಘಟ್ಟವಾದ ಶಿರಾಡಿ ಘಾಟಿ ರಸ್ತೆಯಿದು.

ಜಾಹೀರಾತು

12.38 ಕಿಲೋಮೀಟರ್ ಉದ್ದದ ರಸ್ತೆಗೆ ಕಾಂಕ್ರೀಟ್ ಕಾಮಗಾರಿ ನಡೆದಿತ್ತು. ಚಾರ್ಮಾಡಿ, ಸಂಪಾಜೆ ಘಾಟಿಯ ರಸ್ತೆ ಸಂಚಾರಕ್ಕೆ ಮುಕ್ತಿ ಸಿಗಲಿರುವ ಕಾರಣ ದ.ಕ. ಮಾತ್ರವಲ್ಲದೆ ಇಡೀ ರಾಜ್ಯದ ಯಾತ್ರಿಕರು, ಪ್ರವಾಸಿಗರು ಇದರ ಲಾಭ ಪಡೆಯಲಿದ್ದಾರೆ.

ದ.ಕ. ಜಿಲ್ಲೆಯ ಅಡ್ಡಹೊಳೆಯಿಂದ ಹಾಸನ ಜಿಲ್ಲೆಯ ಕೆಂಪುಹೊಳೆಯವರೆಗಿನ 12.38 ಕಿ.ಮೀ. ಉದ್ದದ ಕಾಂಕ್ರೀಟ್‌ ಕಾಮಗಾರಿ ಕಳೆದ ತಿಂಗಳೇ ಮುಕ್ತಾಯಗೊಂಡಿತ್ತು. ರಸ್ತೆ ಪಕ್ಕದ ಅಂಚುಗಳಿಗೆ ಕಾಂಕ್ರೀಟ್‌ ತಡೆಗೋಡೆ ನಿರ್ಮಿಸಿ ಅದರ ಮಧ್ಯೆ ಮಣ್ಣು ತುಂಬಿಸಿ ಗಟ್ಟಿಗೊಳಿಸುವ ಕೆಲಸ ನಡೆಯುತ್ತಿದೆ. ಶಿರಾಡಿ ಘಾಟಿಯ ದುರ್ಗಮ ಭಾಗದ ರಸ್ತೆ ಅಭಿವೃದ್ಧಿಯನ್ನು 2 ಹಂತಗಳಲ್ಲಿ ಮುಗಿಸಲಾಗಿದೆ. ಮೊದಲ ಹಂತದಲ್ಲಿ 70 ಕೋಟಿ ರೂ. ವೆಚ್ಚದಲ್ಲಿ ಕೆಂಪು ಹೊಳೆಯಿಂದ ಹೆಗ್ಗದ್ದೆಯವರೆಗೆ 13 ಕಿ.ಮೀ. ಕಾಂಕ್ರೀಟೀಕರಣ ಕಾಮಗಾರಿ 3 ವರ್ಷಗಳ ಹಿಂದೆ ನಡೆದಿದ್ದು, 2015ರ ಆಗಸ್ಟ್‌ ತಿಂಗಳಲ್ಲಿ ಸಂಚಾರಕ್ಕೆ ಮುಕ್ತಗೊಂಡಿತ್ತು. 2ನೇ ಹಂತದ ಕಾಮಗಾರಿ ಸುಮಾರು 74 ಕೋಟಿ ರೂ. ವೆಚ್ಚದಲ್ಲಿ 2018ರ ಜನವರಿಯಲ್ಲಿ ಆರಂಭಗೊಂಡಿತ್ತು.  ಇದಕ್ಕಾಗಿ ಜ.20ರಿಂದ ಶಿರಾಡಿ ಘಾಟಿ ರಸ್ತೆ ಸಂಚಾರ ಬಂದ್‌ ಮಾಡಲಾಗಿತ್ತು. ಪ್ರಸ್ತುತ ಅಡ್ಡಹೊಳೆಯಿಂದ ಹೆಗ್ಗದ್ದೆಯವರೆಗೆ ಒಟ್ಟು 26 ಕಿ.ಮೀ.ಘಾಟಿ ರಸ್ತೆ ಕಾಂಕ್ರೀಟೀಕರಣ ಮಾಡಿದಂತಾಗಿದೆ.

ಜಾಹೀರಾತು

ಇದೀಗ ಹಲವು ಯಾತ್ರಿಕರು ಘಾಟಿ ರಸ್ತೆ ಸಂಚಾರ ಆರಂಭವಾಗುವುದನ್ನೇ ಕಾಯುತ್ತಿದ್ದಾರೆ. ಆದರೆ ನೆನಪಿಡಿ, ಶಿರಾಡಿ ಘಾಟಿಯಷ್ಟೇ ಹೊಳಪಾಗಿದೆ. ಇನ್ನುಳಿದಂತೆ ಮಂಗಳೂರು – ಬಿ.ಸಿ.ರೋಡ್, ಬಿ.ಸಿ.ರೋಡ್ – ಉಪ್ಪಿನಂಗಡಿ, ಉಪ್ಪಿನಂಗಡಿ – ಗುಂಡ್ಯದವರೆಗೆ ರಸ್ತೆಯಲ್ಲಿ ಅದೇ ವೇಗದಲ್ಲಿ ಸಂಚರಿಸಿದರೆ, ಅಪಾಯ ಕಟ್ಟಿಟ್ಟ ಬುತ್ತಿ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಶಿರಾಡಿ ಕೊನೆಗೂ ರೆಡಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*