ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ಚರಕ ವಿಜ್ಷಾನ ಸಂಘದ ವತಿಯಿಂದ ರಕ್ತದ ಗುಂಪುಗಳ ವರ್ಗೀಕರಣವು ನಡೆಯಿತು.
ಶ್ರೀರಾಮ ಪದವಿಪೂರ್ವ ವಿಭಾಗದ ಭಾಸ್ಕರಾಚಾರ್ಯ ವಿಜ್ಞಾನ ಸಂಘದ ಸಹಕಾರದೊಂದಿಗೆ ನೆರವೇರಿತು. ಪದವಿ ಪೂರ್ವ ವಿಭಾಗದ ಭಾಸ್ಕರಾಚಾರ್ಯ ವಿಜ್ಞಾನ ಸಂಘದ ಮಾರ್ಗದರ್ಶಕರಾಗಿ ಜೀವಶಾಸ್ತ್ರ ಉಪನ್ಯಾಸಕರಾದ ಶೈಲಿನಿ ಮತ್ತು ಚೈತ್ರಾ ಇವರು ಸಹಕರಿಸಿದರು. ಈ ಮೂಲಕ ವಿದ್ಯಾರ್ಥಿಗಳಿಗೆ ತಮ್ಮ ರಕ್ತದ ಗುಂಪಿನ ಅರಿವನ್ನು ಮೂಡಿಸಲಾಯಿತು.
ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರುಗಳಾದ ರವಿರಾಜ್ ಕಣಂತೂರು, ಚರಕ ವಿಜ್ಞಾನ ಸಂಘದ ಮಾರ್ಗದರ್ಶಕರಾದ ಸಂತೋಷ್ ಶ್ರೀಮಾನ್ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಲ್ಲಡ್ಕ ಶ್ರೀರಾಮ ಶಾಲೆಯಲ್ಲಿ ರಕ್ತ ವರ್ಗೀಕರಣ ಶಿಬಿರ"