ಆಟಿ ತಿಂಗಳು ಅಶುಭವಲ್ಲ, ಮೂಢನಂಬಿಕೆ ಸಲ್ಲದು: ಗೋಪಾಲ್ ಅಂಚನ್

ಆಟಿ ತಿಂಗಳು ಅಶುಭವಲ್ಲ, ಅದೂ ಎಲ್ಲ ತಿಂಗಳಂತೆ ಪವಿತ್ರವಾದುದು. ಅಶುಭ ಎಂಬ ನೆಪದಲ್ಲಿ ಇಂದಿಗೂ ಒಳ್ಳೆಯ ಕೆಲಸಕ್ಕೆ ಹೋಗಲು ಹಿಂದೇಟು ಹಾಕುವುದು, ಶುಭ ಕಾರ್ಯಕ್ರಮಗಳನ್ನು ಮುಂದೂಡುವುದು ನ್ಯಾಯೋಚಿತವಲ್ಲ. ಆಟಿಯ ಹೆಸರಿನಲ್ಲಿ ಅನೇಕ ಮೂಢನಂಬಿಕೆಗಳನ್ನು ಹಿಂದಿನಿಂದಲೂ ಹೇರಿಕೊಂಡು ಬರಲಾಗಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಎ.ಗೋಪಾಲ ಅಂಚನ್ ಹೇಳಿದ್ದಾರೆ.

ಜಾಹೀರಾತು

ಕುಳವೂರು ಬಳ್ಳಾಜೆ ಶ್ರೀ ಸತ್ಯ ಸಾರಮನಿ ಸೇವಾ ಸಮಿತಿ ಮತ್ತು ಡಾ.ಅಂಬೇಡ್ಕರ್ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಬಳ್ಳಾಜೆ ಅಂಬೇಡ್ಕರ್ ಸಮಾಜ ಭವನದಲ್ಲಿ ನಡೆದ ಆಟಿಡೊಂಜಿ ಕೂಟ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು. ಆದರೆ ಆಟಿಯಲ್ಲಿರುವ ಉತ್ತಮ ಅಂಶಗಳನ್ನು ಮಾತ್ರ ನಾವು ಮೈಗೂಡಿಸಿಕೊಂಡು ಮುನ್ನಡೆಯಬೇಕಾಗಿದೆ. ಅಂದಿನ ಬಡತನ ಬದುಕು ಮತ್ತು ಪ್ರಾಕೃತಿಕ ಅಸಮತೋಲನದ ಹಿನ್ನಲೆಯಲ್ಲಿ ಶುಭ ಕಾರ್ಯಗಳನ್ನು  ನಮ್ಮ ಹಿರಿಯರು ಸಹಜವಾಗಿಯೇ ಮುಂದೂಡಿದ್ದರು ಎಂಬ ವಾಸ್ತವಿಕತೆಯನ್ನು ನಾವು ಅರಿಯಬೇಕಾಗಿದೆ. ಪ್ರಕೃತಿದತ್ತವಾಗಿ ಸೃಷ್ಠಿಯಾದ ಸಮಸ್ಯೆಗೆ ಪ್ರಕೃತಿಯಲ್ಲೇ ಪರಿಹಾರ ಕಂಡುಕೊಂಡ ತಿಂಗಳು ಆಟಿ ತಿಂಗಳು. ಅದರ ಹೆಸರಿನಲ್ಲಿ ನಡೆಯುವ ಇಂದಿನ ಆಚರಣೆಗಳು ನಮಗೆ ಪ್ರಕೃತಿಯೆಡೆ ಮುಖ ಮಾಡಿ ಬದುಕಲು ಪ್ರೇರಣೆ ನೀಡಬೇಕಾಗಿದೆ ಎಂದು ಅಂಚನ್ ಹೇಳಿದರು.

ಸಮಿತಿ ಅಧ್ಯಕ್ಷ ಗಂಗಾಧರ ಕೆ.ಅಧ್ಯಕ್ಷತೆ ವಹಿಸಿದ್ದರು. ಮಾನವ ಬಂಧುತ್ವ ವೇದಿಕೆ ಸದಸ್ಯ ಬಿ.ಗಣೇಶ್ ನಾಯಕ್, ದಲಿತ ಹಿತರಕ್ಷಣಾ ವೇದಿಕೆ ಸಂಚಾಲಕ ಸತೀಶ್ ಅರಳ, ಪ್ರಮುಖರಾದ ಕೊರಗ, ಈಶ್ವರ ಅಟ್ಟೆಪದವು, ಸತೀಶ್ ಬಳ್ಳಾಜೆ, ಶೇಖರ್ ನೇಲಲಚ್ಚಿಲು, ಅಭಿನಂದನ್ ಕೊಕ್ರಾಡಿ  ಅತಿಥಿಗಳಾಗಿ ಭಾಗವಹಿಸಿದರು. ಮಿಥುನ್ ರಾಜ್ ಸ್ವಾಗತಿಸಿದರು. ರವಿ ಅಟ್ಟೆಪದವು ವಂದಿಸಿದರು. ಅನಿಲ್ ಮತ್ತು ಹೊನ್ನಯ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಆಟಿ ತಿಂಗಳು ಅಶುಭವಲ್ಲ, ಮೂಢನಂಬಿಕೆ ಸಲ್ಲದು: ಗೋಪಾಲ್ ಅಂಚನ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*