ಸಾರ್ವಜನಿಕ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಟೌನ್, ಜೇಸೀ ಐ ಜೋಡುಮಾರ್ಗ ನೇತ್ರಾವತಿ ವತಿಯಿಂದ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆದ ಕಲ್ಲಡ್ಕ ವಲಯ ಮಟ್ಟದ ಚೆಸ್ ಟೂರ್ನಮೆಂಟ್ 2018-19 ರ ಉದ್ಘಾಟನಾ ಸಮಾರಂಭದಲ್ಲಿ ಸನ್ಮಾನ ಸಮಾರಂಭ ಜರಗಿತು.
ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢ ಶಾಲೆಯ ಕಾರ್ಯಾಧ್ಯಕ್ಷರಾದ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಸನ್ಮಾನ ನೆರವೇರಿಸಿ ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ಗೆಲ್ಲುವ ಮನೋಭಾವ ಮೂಡಿಸುವ ಸ್ಪರ್ಧೆ ಚದುರಂಗ. ರಾಷ್ಟ್ರೀಯ ಅಂತರಾಷ್ಟೀಯ ಮಟ್ಟದಲ್ಲಿ ಚದುರಂಗ ಸ್ಪರ್ಧೆಗೆ ಮನ್ನಣೆ ಇರುವ ಈ ಸಂದರ್ಭ ದಲ್ಲಿ ಗ್ರಾಮೀಣ ಪ್ರದೇಶದ ಭಿನ್ನ ಸಾಮರ್ಥ್ಯದ ಕು.ಯಶಸ್ವಿ ಮ್ಯಾಂಚೆಸ್ಟರ್ ನಲ್ಲಿ ನಡೆದ ಸ್ಪರ್ಧೆಯಲ್ಲಿ ಕಂಚಿನ ಪದಕ ವಿಜೇತೆಯನ್ನು ಅಭಿನಂದನಾ ಭಾಷಣ ಮಾಡಿದರು. ಈ ಪ್ರತಿಭೆಯನ್ನು ರೋಟರಿ ಕ್ಲಬ್ ಬಂಟ್ವಾಳ ಟೌನ್ ಹಾಗೂ ಜೇಸೀ ಐ ಜೋಡುಮಾರ್ಗ ನೇತ್ರಾವತಿ ಗುರುತಿಸಿ ಗೌರವಿಸುವ ಮೂಲಕ ಗ್ರಾಮೀಣ ಭಾಗದ ಸರ್ಕಾರಿ ಶಾಲೆಯ ಮಕ್ಕಳಿಗೆ ಸ್ಫೂರ್ತಿಯಾಗಲಿದೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಅಧ್ಯಕ್ಷ ರಾದ ಉಮೇಶ್ ನಿರ್ಮಲ್, ಜೇಸಿ ಐ ಜೋಡುಮಾರ್ಗ ನೇತ್ರಾವತಿ ಯ ಅಧ್ಯಕ್ಷರಾದ ಸವಿತಾ ನಿರ್ಮಲ್, ದ.ಕ ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಗೌರವ ಸಲಹೆಗಾರರಾದ ಗಂಗಾಧರ ರೈ ಮಾಣಿ, ಬಂಟ್ವಾಳ ತಾಲ್ಲೂಕು ಸಂಘದ ಅಧ್ಯಕ್ಷರಾದ ಜಗದೀಶ್ ಉಪಸ್ತಿತರಿದ್ದರು. ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ಕಮಲಾಕ್ಷ ಕಲ್ಲಡ್ಕ ಸ್ವಾಗತ ನೀಡಿದರು. ಶಿಕ್ಷಕರಾದ ಚಿನ್ನಪ್ಪ ಕೆ ಧನ್ಯವಾದ ಸಮರ್ಪಣೆ ಮಾಡಿದರು. ಇಂಟರಾಕ್ಟ್ ಕ್ಲಬ್ ಅಧ್ಯಕ್ಷೆ ಶ್ರೀ ವಿದ್ಯಾ ಯಶಸ್ವಿ ಯ ಪರಿಚಯಿಸಿದರು .ಇಂಟರಾಕ್ಟ್ ಕ್ಲಬ್ ಸಂಯೋಜಕರಾದ ಹರಿಪ್ರಸಾದ್ ಕುಲಾಲ್ ಕಾರ್ಯಕ್ರಮ ಸಂಯೋಜಿಸಿದ್ದರು.
ಹಳ್ಳಿಯಿಂದ ಇಂಗ್ಲೆಂಡ್ ಗೆ: ಚೆಸ್ ಪ್ರತಿಭೆಯ ‘ಯಶಸ್ವಿ’ ನಡೆ
ಜಾಹೀರಾತು
Be the first to comment on "ಚೆಸ್ ಪ್ರತಿಭೆ ಯಶಸ್ವಿ ಗೆ ಸನ್ಮಾನ ಸಮಾರಂಭ"