ಸಂಜೆಯಾದ ಬಳಿಕ ತೀವ್ರಗೊಂಡ ಮಳೆ, ಆವರಣ ಗೋಡೆ ಕುಸಿತ

ಕಳೆದ ನಾಲ್ಕು ದಿನಗಳಿಂದ ಸುರಿದ ಮಳೆ ಬುಧವಾರ ಸಂಜೆ ತೀವ್ರಗೊಂಡಿದ್ದು, ಬಿ.ಸಿ.ರೋಡಿನ ಗಾಣದಪಡ್ಪವಿನಲ್ಲಿರುವ ಬ್ರಹ್ಮಶ್ರೀ ನಾರಾಯಣಗುರುಮಂದಿರದ ಅವರಣಗೋಡೆ ಬುಧವಾರ ಕುಸಿಯಿತು. ಇದರಿಂದ ಸುಮಾರು 15 ಲಕ್ಷ ರೂ. ನಷ್ಟ ಸಂಭವಿಸಿದ್ದು, ಬಂಟ್ವಾಳ ಶಾಸಕ ಯು.ರಾಜೇಶ್ ನಾಯ್ಕ್ ಅವರು ಸಂಜೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳ ದಿಂದಲೇ ಸಣ್ಣ ನೀರಾವರಿ ಇಲಾಖಾ ಇಂಜಿನಿಯರ್ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಶಾಸಕರು,ಅವರಣಗೋಡೆಗೆ ತಕ್ಷಣ ಅಂದಾಜುಪಟ್ಟಿ ತಯಾರಿಸುವಂತೆ ಸೂಚಿಸಿದರು.

ಜಾಹೀರಾತು

ಇದಕ್ಕೆ ಸ್ಪಂದಿಸಿದ ಇಂಜಿನಿಯರ್ ಕೂಡಲೇ ಸ್ಥಳ ಪರಿಶೀಲನೆ ನಡೆಸಿ ಮುಂದಿನಕ್ರಮ ಕೈಗೊಳ್ಳುವ ಭರವಸೆಯನ್ನು ಶಾಸಕರಿಗೆ ನೀಡಿದ್ದಾರೆ.  ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ,ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ರವರು ಈ ಬಗ್ಗೆ ಶಾಸಕರಿಗೆ ಪೂರಕ ಮಾಹಿತಿ ನೀಡಿದರು.

ಈ ಸಂದರ್ಭ ಸಂಘದ ಪದಾಧಿಕಾರಿಗಳಾದ ಸಂಜೀವ ಪೂಜಾರಿ ಗಾಣದಪಡ್ಪು,ವಿಶ್ವನಾಥ ಬಿ.ಸಿ.ರೋಡ್, ತಾಪಂ ಸದಸ್ಯ ಗಣೇಶ್ ಸುವರ್ಣ,ಪ್ರಮೋದ್ ಕುಮಾರ್  ಅಜ್ಜಿಬೆಟ್ಟು,ನಾರಾಯಣ ಪೂಜಾರಿ ಮೊದಲಾದವರಿದ್ದರು.  2003 ರಲ್ಲಿ ಜನಾರ್ಧನ ಪೂಜಾರಿಯವರು ಸಂಸದರಾಗಿದ್ದ ಕಾಲದಲ್ಲಿ  ಸಂಸದರ ನಿಧಿಯಿಂದ ಸುಮಾರು 10ಲಕ್ಷ ರೂ.ವೆಚ್ಚದಲ್ಲಿ   ಅವರ ವಿಶೇಷ ಮುತುವರ್ಜಿಯಿಂದ  ಈ ಅವರಣಗೋಡೆ ನಿರ್ಮಿಸಲಾಗಿತ್ತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸಂಜೆಯಾದ ಬಳಿಕ ತೀವ್ರಗೊಂಡ ಮಳೆ, ಆವರಣ ಗೋಡೆ ಕುಸಿತ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*