ರಾತ್ರಿಯಿಡೀ ಝಗಮಗಿಸಿದ ಭ್ರಾಮರೀ ಯಕ್ಷವೈಭವ, ಸನ್ಮಾನ, ಗೌರವಾರ್ಪಣೆ

ಸಾಮಾಜಿಕ ಜಾಲತಾಣವನ್ನು ಬಳಸಿಕೊಂಡು ಕಲಾಸಕ್ತ ಮನಸುಗಳನ್ನು ಜತೆಯಾಗಿಸಿಕೊಂಡು ಯಕ್ಷಸೇವೆ ಆಯೋಜನೆ ಮಾಡುವುದು ಹಾಗೂ ಯಕ್ಷಗಾನದ ಎಲ್ಲಾ ಹಂತಗಳಲ್ಲೂ ಶ್ರಮಿಸಿದವರನ್ನು ಸಮ್ಮಾನಿಸುವ ಕಾರ್ಯ ಶ್ಲಾಘನೀಯ ಎಂದು ಹಿರಿಯ ಸಾಹಿತಿ, ವಿಶ್ರಾಂತ ಕುಲಪತಿ ಡಾ|ಬಿ.ಎ.ವಿವೇಕ ರೈ ಅಭಿಪ್ರಾಯಪಟ್ಟರು.

ಜಾಹೀರಾತು

ಮಂಗಳೂರು ಪುರಭವನದಲ್ಲಿ ಶನಿವಾರ ರಾತ್ರಿ ನಡೆದ, ವಾಟ್ಸಾಪ್ ಬಳಗವಾದ ‘ಭ್ರಾಮರೀ ಯಕ್ಷಮಿತ್ರರು-ಮಂಗಳೂರು’ ಇದರ ಮೂರನೇ ವರ್ಷದ ಯಕ್ಷವೈಭವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಾಹೀರಾತು

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು ಯಕ್ಷಗಾನದ ವಿಷಯಕ್ಕಾಗಿಯೇ ಮೀಸಲಿಟ್ಟ ವಾಟ್ಸಪ್ ಬಳಗವಾಗಿ ಆರಂಭಗೊಂಡು ನೋಂದಾಯಿಸಲ್ಪಟ್ಟ ಬಳಗವಾಗಿ ಭ್ರಾಮರೀ ಯಕ್ಷಮಿತ್ರರು ಗುರುತಿಸಿಕೊಂಡಿದೆ. ಯಕ್ಷಗಾನದಲ್ಲಿ ಸಾಧನೆ ಮಾಡಿದವರನ್ನು ಪ್ರಶಸ್ತಿ ನೀಡಿ ಗುರುತಿಸುವುದರ ಜತೆಗೆ ರಂಗದ ನೇಪಥ್ಯದಲ್ಲಿ ದುಡಿದು ಯಕ್ಷಗಾನದ ಉಳಿವಿಗೆ ಶ್ರಮಿಸಿರುವ ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸುವ ಸದುದ್ದೇಶ ಸರ್ವರಿಗೂ ಮಾದರಿ ಎಂದರು.

ಜಾಹೀರಾತು

ಖ್ಯಾತ ಹಿಮ್ಮೇಳ ಕಲಾವಿದ ಮೋಹನ ಶೆಟ್ಟಿಗಾರ್ ಮಿಜಾರು ಅವರಿಗೆ ‘ಭ್ರಾಮರಿ ಯಕ್ಷಮಣಿ’ ಪ್ರಶಸ್ತಿ, ಪಟ್ಲ ಸತೀಶ್ ಶೆಟ್ಟಿ ಅವರಿಗೆ ಗೌರವ ಸಮ್ಮಾನ ಹಾಗೂ ನೇಪಥ್ಯ ಕಲಾವಿದರಾದ ಬಿ.ಐತ್ತಪ್ಪ ಟೈಲರ್, ರಘು ಶೆಟ್ಟಿ ನಾಳ ಅವರನ್ನು ಸಮ್ಮಾನಿಸಲಾಯಿತು.

ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಬಾಸ್ಕರ್ ಕೆ, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್‌ನ ನಿರ್ದೇಶಕ ಟಿ.ಜಿ ರಾಜಾರಾಮ್ ಭಟ್, ಧಾರ್ಮಿಕ ಪರಿಷತ್‌ನ ಸದಸ್ಯ ಪದ್ಮನಾಭ ಕೋಟ್ಯಾನ್, ಬ್ರಿಟಿಷ್ ಬಯಲೋಜಿಕಲ್ಸ್‌ನ ವಲಯ ಪ್ರಬಂದಕರಾದ ಸಿ.ಎಸ್ ಭಂಡಾರಿ, ಮನಪಾ ಮುಖ್ಯ ಸಚೇತಕ ಎಂ.ಶಶಿಧರ ಹೆಗ್ಡೆ, ಉದ್ಯಮಿ ರಮೇಶ್ ಶೆಟ್ಟಿ ಕಾರ್ಕಳ, ಶಾರದಾ ಶಿಕ್ಷಣ ಸಮೂಹ ಸಂಸ್ಥೆಯ ಅಧ್ಯಕ್ಷ ಪ್ರೊ|ಎಂ.ಬಿ.ಪುರಾಣಿಕ್ ಮುಖ್ಯ ಅತಿಥಿಗಳಾಗಿದ್ದರು.

ಜಾಹೀರಾತು

ಭ್ರಾಮರೀ ಯಕ್ಷಮಿತ್ರರು ಬಳಗದ ಪ್ರಮುಖರಾದ ವಿನಯ್ ಕೃಷ್ಣ ಸ್ವಾಗತಿಸಿದರು. ಸದಸ್ಯರಾದ ಶಾಂತಾರಾಮ ಕುಡ್ವ, ಗುರುರಾಜ ಹೊಳ್ಳ ಬಾಯಾರು, ಸತೀಶ್ ಮಂಜೇಶ್ವರ, ಉಮೇಶ್ ಶೆಟ್ಟಿ ಸಮ್ಮಾನಿತರ ಪತ್ರವಾಚಿಸಿದರು.  ದಿನೇಶ್ ಇರಾ ಕಾರ್ಯಕ್ರಮ ನಿರೂಪಿಸಿದರು.

 

ಬಳಿಕ ತೆಂಕು ಹಾಗೂ ಬಡಗುತ್ತಿಟ್ಟಿನ ಹೆಸರಾಂತ ಕಲಾವಿದರ ಕೂಡುವಿಕೆಯಲ್ಲಿ ಸತ್ಯ ಹರಿಶ್ಚಂದ್ರ, ಶೂರ್ಪನಖಾ ವಿವಾಹ ಮತ್ತು ಮಕರಾಕ್ಷ ಕಾಳಗ ಯಕ್ಷಗಾನ ಪ್ರದರ್ಶನಗೊಂಡಿತು.

ಜಾಹೀರಾತು

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ರಾತ್ರಿಯಿಡೀ ಝಗಮಗಿಸಿದ ಭ್ರಾಮರೀ ಯಕ್ಷವೈಭವ, ಸನ್ಮಾನ, ಗೌರವಾರ್ಪಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*