ಅಕ್ಟೋಬರ್ 7ರ ಬದಲು 14ರಿಂದ 21ರವರೆಗೆ ಮಕ್ಕಳಿಗೆ ರಜೆ

ಅಕ್ಟೋಬರ್ 8ರಿಂದ ಮೊದಲ್ಗೊಂಡು 18ರವರೆಗೆ ದಸರಾ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನವರಾತ್ರಿ ಆಚರಣೆಗೆ ವಿಶೇಷ ಮಹತ್ವವಿದೆ. ಶಾಲಾ, ಕಾಲೇಜುಗಳಿಗೆ ಈ ಸಮಯದಲ್ಲಿ ರಜೆಯೂ ಇರುತ್ತದೆ. ಆದರೆ ಈ ಬಾರಿ ದಸರಾ ರಜೆಗೆ ಕತ್ತರಿ ಬೀಳಲಿದೆ.

ಜಾಹೀರಾತು

ಕಳೆದ ತಿಂಗಳು ಮಳೆಯ ಹಿನ್ನೆಲೆಯಲ್ಲಿ ಹಲವು ಬಾರಿ ರಜೆ ಘೋಷಿಸಿದ ಹಿನ್ನೆಲೆಯಲ್ಲಿ  ಮುಂದಿನ ರಜಾ ದಿನಗಳಲ್ಲಿ ತರಗತಿ ನಡೆಸುವಂತೆ ಮಾರ್ಪಾಡುಗೊಳಿಸಲಾಗಿದೆ.

2018-19ನೇ ಸಾಲಿನ ಶೈಕ್ಷಣಿಕ ಅವಧಿಯ ಮಧ್ಯಂತರ ರಜೆಯನ್ನು ಅಕ್ಟೋಬರ್ 7ರಿಂದ 21ರವರೆಗೆ ನೀಡಲಾಗಿತ್ತು. ಆದರೆ ಈಗ ಅಕ್ಟೋಬರ್ 14ರಿಂದ 21ರವರೆಗೆ ಮಧ್ಯಂತರ ರಜೆಯಾಗಿ ಮಾರ್ಪಾಡು ಮಾಡಲಾಗಿದೆ.

ಕಲಿಕೆಗೆ ನಷ್ಟವಾಗದಂತೆ ಶಾಲಾ ಹಂತದಲ್ಲಿ ಶನಿವಾರ ಪೂರ್ಣ ದಿನವನ್ನಾಗಿ ಮತ್ತು ಶಾಲಾ ದಿನದಲ್ಲಿ ನಿಗದಿಯಾಗಿರುವ ಸ್ಥಳೀಯ ರಜೆಯನ್ನು ಕಡಿಮೆ ಮಾಡಿಕೊಂಡು ಸರಿದೂಗಿಸಿಕೊಳ್ಳುವ ಕುರಿತು ಪ್ರತಿ ಶಾಲಾ ಹಂತದಲ್ಲಿ ಯೋಜನೆಯನ್ನು ರೂಪಿಸಬಹುದು.

ಜಾಹೀರಾತು

ಮಧ್ಯಾವಧಿ ಪರೀಕ್ಷೆಗಳನ್ನು ಅಕ್ಟೋಬರ್ 7ರಿಂದ 14ರ ನಡುವಿನ ಮರು ಹೊಂದಾಣಿಕೆಯ ಕರ್ತವ್ಯದ ದಿನಗಳನ್ನು (ಒಟ್ಟು 5 ದಿನಗಳು) ಒಳಗೊಂಡಂತೆ ವೇಳಾಪಟ್ಟಿಯನ್ನು ಶಾಲಾ ಹಂತದಲ್ಲಿ ಯೋಜನೆ ತಯಾರಿಸಿ ಕ್ರಮ ಕೈಗೊಳ್ಳಬೇಕು. ಸೆಪ್ಟಂಬರ್ ಪೂರ್ಣ ತಿಂಗಳಲ್ಲಿ ತರಗತಿ/ ಪಾಠ ಬೋಧನೆಗೆ ಬಳಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಅಕ್ಟೋಬರ್ 7ರ ಬದಲು 14ರಿಂದ 21ರವರೆಗೆ ಮಕ್ಕಳಿಗೆ ರಜೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*