ಗಣೇಶೋತ್ಸವಕ್ಕೆ ನಿರ್ಬಂಧ ಹಿಂಪಡೆಯಲು ಹಿಂಜಾವೇ ಮನವಿ

ಹಿಂದು ಧರ್ಮದ ಪ್ರಮುಖ ಆಚರಣೆಗಳಲ್ಲಿ ಒಂದಾದ ಗಣೇಶೋತ್ಸವಕ್ಕೆ ಹಲವು ನಿಯಮ, ಕಟ್ಟುಪಾಡು, ನಿರ್ಬಂಧಗಳನ್ನು ಹೇರಿ ಧಾರ್ಮಿಕ ಹಕ್ಕಿನ ಮೇಲೆ ದಬ್ಬಾಳಿಕೆ ನಡೆಸಲಾಗುತ್ತಿದೆ ಎಂದು ಆರೋಪಿಸಿ, ಈ ಕ್ರಮವನ್ನು ಖಂಡಿಸಿ ಹಿಂದು ಜಾಗರಣಾ ವೇದಿಕೆ ಬಂಟ್ವಾಳ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದೆ.

ಜಾಹೀರಾತು

ಗಣೇಶೋತ್ಸವಕ್ಕೆ ವಿಧಿಸಿರುವ ನಿರ್ಬಂಧವನ್ನು ಹಿಂಪಡೆಯಬೇಕು ಎಂದು ಮನವಿಯಲ್ಲಿ ಹೇಳಲಾಗಿದೆ. ಹಿಂದೂ ವಿರೋಧಿ ಅಧಿಕಾರ ಶಾಹಿಗಳು ಈ ಹಬ್ಬವನ್ನು ಹತ್ತಿಕ್ಕಲು ಇಲ್ಲಸಲ್ಲದ ಅಡಚಣೆಗಳನ್ನು ಹೇರುತ್ತಿದ್ದು ರಾಷ್ಟ್ರೀಯ ಹಬ್ಬದ ವೈಭವವನ್ನು ಹಾಳು ಮಾಡಲು ಹೊರಟಿರುವುದು ಖಂಡನೀಯ. ವಿಧಿಸಿ ರುವ ಎಲ್ಲಾ ನಿರ್ಬಂಧ ಗಳನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು ಸಾರ್ವಜನಿಕ ಗಣೇಶೋತ್ಸವ ದ ಮೆರವಣಿಗೆಗೆ ಮುಕ್ತ ಅವಕಾಶವನ್ನು ಕಲ್ಲಿಸಬೇಕು ಮನವಿಯ ಮೂಲಕ ಒತ್ತಾಯಿಸಲಾಯಿತು. ಈ ಸಂದರ್ಭ ಹಿಂದು ಜಾಗರಣಾ ವೇದಿಕೆಯ ದಕ್ಷಿಣ ಪ್ರಾಂತ್ಯ ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ ಅಡ್ಯಂತಾಯ, ಜಿಲ್ಲಾ ಅಧ್ಯಕ್ಷ ರತ್ನಾಕರ ಶೆಟ್ಟಿ ಕಲ್ಲಡ್ಕ, ತಾಲೂಕು ಅದ್ಯಕ್ಷ ಚಂದ್ರ ಕಲಾಯಿ, ಮಹಿಳಾ ಘಟಕದ ಅದ್ಯಕ್ಷೆ ಬಬಿತಾ ಕೋಟ್ಯಾನ್,  ಜಿ.ಪಂ.ಸದಸ್ಯ ತುಂಗಪ್ಪ ಬಂಗೇರ, ತಾ.ಪಂ. ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು, ಪ್ರಮುಖರಾದ ಶರಣ್ ಕಾಮಾಜೆ, ಬಾಲಕ್ರಷ್ಣ ಕಲಾಯಿ, ಮಚ್ವೇಂದ್ರನಾಥ ಸಾಲಿಯಾನ್, ಗಣೇಶ್ ಶೆಟ್ಟಿ ಕಲ್ಲಡ್ಕ ಮತ್ತಿತರರು ಉಪಸ್ಥಿತರಿದ್ದರು.

ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಕಮಲ್ ಪಂತ್ ಜಾರಿಗೊಳಿಸಿರುವ ಆದೇಶ ಧಾರ್ಮಿಕ ಹಕ್ಕಿನ ಮೇಲಿನ ದಬ್ಬಾಳಿಕೆ ಎಂದು ಹಿಂಜಾವೇ ಅಭಿಪ್ರಾಯಪಟ್ಟಿದೆ. ಡಸಾವಿರಾರಿ ವರ್ಷಗಳಿಂದ ಭಾರತದಲ್ಲಿ ಹಿಂದು ಧಾರ್ಮಿಕ ಹಬ್ಬಗಳ ಮೆರವಣಿಗೆಗಳು ಸೂಕ್ಷ್ಮಾತಿ ಸೂಕ್ಷ್ಮ ಪ್ರದೇಶಗಳಲ್ಲಿ ನಿರಾತಂಕವಾಗಿ ನಡೆದುಕೊಂಡು ಬರುತ್ತಿವೆ. ರಾಜ್ಯ ಸರಕಾರದ ಈ ಅನವಶ್ಯಕ ಹಿಂದು ವಿರೋಧಿ ಆದೇಶ ಖಂಡಿಸಿ ಪ್ರತಿಭಟನೆ ನಡೆಸಿವೆ ಎಂದು ಅಡ್ಯಂತಾಯ ಹೇಳಿದ್ದಾರೆ.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಗಣೇಶೋತ್ಸವಕ್ಕೆ ನಿರ್ಬಂಧ ಹಿಂಪಡೆಯಲು ಹಿಂಜಾವೇ ಮನವಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*