ಜಗತ್ತಿನ ಒಡೆಯ ಗಣಪತಿಯ ಪೂಜೆ ನಿತ್ಯನಿರಂತರ: ಒಡಿಯೂರು ಶ್ರೀಗಳು

ಕತ್ತಲಿನಿಂದ ಬೆಳಕನ್ನು ಒದಗಿಸುವ ನಾಯಕ. ಜಗತ್ತಿನ ಒಡೆಯ ಗಣಪತಿಯ ಪೂಜೆ ನಿತ್ಯನಿರಂತರ ಎಂದು ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದ್ದಾರೆ.

ಜಾಹೀರಾತು

ಬಂಟ್ವಾಳ ಜಕ್ರಿಬೆಟ್ಟುವಿನಲ್ಲಿ ನಡೆಯುತ್ತಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವದ 15ನೇ ವರ್ಷಾಚರಣೆಯ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು.

ಆಧ್ಯಾತ್ಮಿಕ ಹಿನ್ನೆಲೆಯಲ್ಲೂ ಗಣಪತಿಯ ಅರಿವು ನಮಗೆ ಇಂದು ಅಗತ್ಯವಾಗಿದೆ ಎಂದು ಹೇಳಿದ ಅವರು, ನಮ್ಮೊಳಗಿರುವ ತಾಮಸೀ ಶಕ್ತಿಯನ್ನು ಹೊಡೆದು ಹಾಕಿ, ದೈವೀ ಶಕ್ತಿಯನ್ನು ಜಾಗೃತಗೊಳಿಸುವ ವಿನಾಯಕ ಸರ್ವವಂದ್ಯ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಅಧ್ಯಕ್ಷ ಎ.ಸಿ.ಭಂಡಾರಿ, ಜಾತಿ, ಮತಗಳನ್ನು ಮೀರಿ ಸಾಮರಸ್ಯದ ತಳಹದಿಯಲ್ಲಿ ಬದುಕು ಸಾಗಿಸುವ ಸನ್ನಿವೇಶದಲ್ಲಿ ಗಣೇಶೋತ್ಸವಗಳು ಸಹಕಾರಿಯಾಗುತ್ತದೆ ಎಂದರು.

ಜಾಹೀರಾತು

ಶೃಂಗೇರಿ ಶಾಸಕ ರಾಜೇಗೌಡ, ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ಡಾ. ಮುರಳೀ ಮೋಹನ ಚೂಂತಾರು, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶ ಮಾಂಬಾಡಿ, ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಮಾತನಾಡಿದರು. ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಮಾಜಿ ಸಚಿವ ಬಿ.ರಮಾನಾಥ ರೈ ಪ್ರಾಸ್ತಾವಿಕ ಮಾತನಾಡಿದರು. ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಬಿ.ಪದ್ಮಶೇಖರ ಜೈನ್, ಜಿಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಎಂ.ಎಸ್.ಮಹಮ್ಮದ್, ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ, ಸಮಿತಿಯ ಪದಾಧಿಕಾರಿಗಳಾದ ಜನಾರ್ದನ ಚಂಡ್ತಿಮಾರ್, ಮಾಯಿಲಪ್ಪ ಸಾಲಿಯಾನ್, ಪ್ರವೀಣ್ ಕಿಣಿ, ಬೇಬಿ ಕುಂದರ್, ವಾಸು ಪೂಜಾರಿ, ಪುರಸಭೆ ಸದಸ್ಯ ಗಂಗಾಧರ್, ಮಹಮ್ಮದ್ ನಂದರಬೆಟ್ಟು, ಮಹಮ್ಮದ್ ಶರೀಫ್  ಮೊದಲಾದವರು ಉಪಸ್ಥಿತರಿದ್ದ ಕಾರ್ಯಕ್ರಮವನ್ನು ರಾಜೀವ ಕಕ್ಯಪದವು ಮತ್ತು ಎಡ್ತೂರು ರಾಜೀವ ಶೆಟ್ಟಿ ನಿರೂಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಜಗತ್ತಿನ ಒಡೆಯ ಗಣಪತಿಯ ಪೂಜೆ ನಿತ್ಯನಿರಂತರ: ಒಡಿಯೂರು ಶ್ರೀಗಳು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*