ಜುಜುಬಿ ಪರಿಹಾರ ಕೊಡುವುದು ಫಲಾನುಭವಿಗಳಿಗೆ ಅವಮಾನ: ಕೆಡಿಪಿ ಸಭೆಯಲ್ಲಿ ಜನಪ್ರತಿನಿಧಿಗಳು ಗರಂ

ಕಳೆದ ಸಾಲಿನ ಪ್ರಾಕೃತಿಕ ವಿಕೋಪ ಸಂದರ್ಭ ಬೆಳೆ ನಾಶಕ್ಕೆ ಸಂಬಂಧಿಸಿ ಜುಜುಬಿ ಪರಿಹಾರ ವಿತರಣೆಯಾಗಿದ್ದು, ಇದು ರೈತರಿಗೆ ಮಾಡಿದ ಅವಮಾನ. ಅಧಿಕಾರಿಗಳು ಈ ಸಂದರ್ಭ ಫಲಾನುಭವಿಯ ಸಮಗ್ರ ಅಧ್ಯಯನ ಮಾಡಿ ಪರಿಹಾರ ಮೊತ್ತವನ್ನು ನಿಗದಿಗೊಳಿಸಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.

ಶಾಸಕರಾದ ಬಳಿಕ ಆಯೋಜಿಸಿದ ಪ್ರಥಮ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಅವರು, ರೈತರಿಗಾಗಲೀ, ಸಾರ್ವಜನಿಕರಿಗಾಗಲೀ ಪ್ರಾಕೃತಿಕ ವಿಕೋಪ ನಿಧಿಯಿಂದ ಪರಿಹಾರ ಒದಗಿಸುವ ಮೊತ್ತ ಏನೇನೂ ಸಾಲದು ಎಂದು ಹೇಳಿದರು.

ಜಾಹೀರಾತು

ಪ್ರಗತಿಪರಿಶೀಲನಾ ಸಭೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರಿಗೆ ಮಾಹಿತಿ ನೀಡುತ್ತಿರುವ ಜಿಪಂ ಸದಸ್ಯರಾದ ಮಮತಾ ಗಟ್ಟಿ ಮತ್ತು ಎಂ.ಎಸ್.ಮಹಮ್ಮದ್.

ಇದಕ್ಕೆ ದನಿಗೂಡಿಸಿದ ಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಡಿ.ಎಸ್. ಗಟ್ಟಿ, ಪ್ರಾಕೃತಿಕ ವಿಕೋಪ ನಿಧಿಯಿಂದ ಎಷ್ಟು ಮೊತ್ತ ಈ ಬಾರಿ ಬಳಕೆಯಾಗದೆ ವಾಪಸ್ ಹೋಗಿದೆ ಎಂದು ತಹಶೀಲ್ದಾರ್ ಬಳಿ ಸ್ಪಷ್ಟನೆ ಬಯಸಿದರು. ಆಗ ಉತ್ತರಿಸಿದ ತಹಶೀಲ್ದಾರ್ ಪುರಂದರ ಹೆಗ್ಡೆ, ಸುಮಾರು 70 ಲಕ್ಷ ರೂಗಳಷ್ಟು ಹಣ ವಾಪಸಾಗಿದೆ ಎಂದಾಗ ಆಕ್ರೋಶಗೊಂಡ ಮಮತಾ ಸರಕಾರದ ಹಣವನ್ನು ನೈಜ ಫಲಾನುಭವಿಗಳಿಗೆ ಒದಗಿಸಬೇಕೇ ವಿನಃ ಅದನ್ನು ಹಿಂದೆ ಮರಳಿಸುವುದಲ್ಲ ಎಂದರು. ಇದಕ್ಕೆ ದನಿಗೂಡಿಸಿದ ಜಿಲ್ಲಾ ಪಂಚಾಯತ್ ಸದಸ್ಯ ಎಂ.ಎಸ್.ಮಹಮ್ಮದ್, ಸರಕಾರದಿಂದ ದೊರಕುವ ಪರಿಹಾರವನ್ನು ನಿಗದಿಪಡಿಸುವ ಸಂದರ್ಭ ಬಡವರಿಗೆ ಉಪಯೋಗವಾಗುವಂತೆ ಮಾಡಬೇಕು ಎಂದರು. ಈ ಸಂದರ್ಭ ಮಾತನಾಡಿದ ಜಿಪಂ ಸದಸ್ಯ ರವಿಂದ್ರ ಕಂಬಳಿ, ಕೆಲ ದಿನಗಳ ಹಿಂದೆ ಸಚಿವ ಯು.ಟಿ.ಖಾದರ್ ಅವರು ನೀಡಿದ ಚೆಕ್ ಕೂಡ ಕಡಿಮೆ ಮೊತ್ತದ್ದಾಗಿದ್ದು, ಫಲಾನುಭವಿಗಳಿಗೆ ಯಾವ ಪ್ರಯೋಜನವೂ ದೊರಕುವುದಿಲ್ಲ, ಮನೆ ಪೂರ್ತಿ ಕುಸಿದರೆ, ಜುಜುಬಿ ಮೊತ್ತದ ಪರಿಹಾರ ಯಾಕೆ ಎಂದರು. ಮಮತಾ ಗಟ್ಟಿ ಮಾತನಾಡಿ, ಇಂಜಿನಿಯರುಗಳು ಎಷ್ಟು ಎಷ್ಟಿಮೇಟ್ ಮಾಡಿದರೂ ಕೇವಲ 5 ಸಾವಿರ ರೂಗಳ ಪರಿಹಾರ ಸಿಗುತ್ತದೆ. ಇದು ಯಾವ ನ್ಯಾಯ ಎಂದು ಪ್ರಶ್ನಿಸಿದರು.

ಜನವರಿಯಿಂದ ಆಗಸ್ಟ್ ವರೆಗೆ 30 ಮಲೇರಿಯಾ ಮತ್ತು 37 ಡೆಂಘೆ ಪ್ರಕರಣಗಳು ತಾಲೂಕಿನಲ್ಲಿ ಪತ್ತೆಯಾಗಿದ್ದು, ಎಲ್ಲರೂ ಗುಣಮುಖರಾಗಿದ್ದಾರೆ ಎಂದು ಆರೋಗ್ಯಾಧಿಕಾರಿ ಡಾ.ದೀಪಾ ಪ್ರಭು ಮಾಹಿತಿ ನೀಡಿದರು. ಈ ಸಂದರ್ಭ ಮಾತನಾಡಿದ ಜಿಪಂ ಸದಸ್ಯ ಎಂ.ಎಸ್.ಮಹಮ್ಮದ್, ಮಂಚಿ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದಿರುವುದನ್ನು ಗಮನ ಸೆಳೆದರು. ಬಂಟ್ವಾಳ ತಾಲೂಕಿನಲ್ಲಿ 17 ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದು, ಅವುಗಳಲ್ಲಿ 4ರಲ್ಲಿ ವೈದ್ಯರ ಕೊರತೆ ಇದೆ. ಕನ್ಯಾನ, ಅಡ್ಯನಡ್ಕ, ರಾಯಿ ಮತ್ತು ಮಂಚಿಯಲ್ಲಿ ವೈದ್ಯರಿಲ್ಲ. ಅಲ್ಲಿಗೆ ಶೀಘ್ರ ತಾತ್ಕಾಲಿಕ ನೆಲೆಯಲ್ಲಿ ವೈದ್ಯರು ನೇಮಕಗೊಳ್ಳುತ್ತಾರೆ ಎಂದು ಹೇಳಿದ ಆರೋಗ್ಯಾಧಿಕಾರಿ, ಬಂಟ್ವಾಳದಲ್ಲಿ ತಜ್ಞ ವೈದ್ಯರ ಕೊರತೆ ಇದ್ದು, ಪ್ರಸೂತಿ ತಜ್ಞೆ ಮತ್ತು ಅನಸ್ತೇಶಿಯಾ ತಜ್ಞರ ಸ್ಥಾನ ಭರ್ತಿಯಾಗಿಲ್ಲ ಎಂದರು.

ಗೋಶಾಲೆಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವ ಕುರಿತು ಮಮತಾ ಗಟ್ಟಿ ಗಮನ ಸೆಳೆದರು. ಗ್ರಾಮ ವಿಕಾಸ ಯೋಜನೆಯಡಿ 8 ಗ್ರಾಮಗಳು ಮಂಜೂರುಗೊಂಡಿವೆ ಎಂದು ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ನರೇಂದ್ರಬಾಬು ಮಾಹಿತಿ ನೀಡಿದರು. ಸಾಮಾಜಿಕ ಅರಣ್ಯ ಇಲಾಖೆಯಿಂದ ಬಂದ 6 ಲೋಡ್ ಮರದ ದಿಮ್ಮಿಗಳ ಲೆಕ್ಕ ಕಡಿಮೆಯಾಗುತ್ತಿದೆ ಎಂದು ನರಿಂಗಾನ ಗ್ರಾಪಂನಿಂದ ದೂರು ಬಂದಿದ್ದು, ಗಮನಹರಿಸುವಂತೆ ಮಮತಾ ಗಟ್ಟಿ ಹೇಳಿದರು.

ಜಾಹೀರಾತು

ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ, ತಾಪಂ ಇಒ ರಾಜಣ್ಣ, ತಹಶೀಲ್ದಾರ್ ಪುರಂದರ ಹೆಗ್ಡೆ ಉಪಸ್ಥಿತರಿದ್ದ ಸಭೆಯಲ್ಲಿ ಕೆಡಿಪಿ ಸದಸ್ಯ ಉಮೇಶ್ ಬೋಳಂತೂರು ಸಹಿತ ಜನಪ್ರತಿನಿಧಿಗಳು ವಿವಿಧ ವಿಷಯಗಳ ಕುರಿತು ಗಮನ ಸೆಳೆದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಜುಜುಬಿ ಪರಿಹಾರ ಕೊಡುವುದು ಫಲಾನುಭವಿಗಳಿಗೆ ಅವಮಾನ: ಕೆಡಿಪಿ ಸಭೆಯಲ್ಲಿ ಜನಪ್ರತಿನಿಧಿಗಳು ಗರಂ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*