ಸಮೃದ್ಧ ಭಾರತ ನಿರ್ಮಾಣ ಎಸ್.ಡಿ.ಪಿ.ಐ. ಕನಸು: ಇಲ್ಯಾಸ್ ಮುಹಮ್ಮದ್ ತುಂಬೆ

ಸಮಾಜವನ್ನು ಜೋಡಿಸುವ ಮೂಲಕ ಸಮೃದ್ಧ ಭಾರತವನ್ನು ನಿರ್ಮಿಸುವುದೇ ಪಕ್ಷದ ಮುಖ್ಯ ಉದ್ದೇಶ ಹಾಗೂ ಕನಸು ಎಂದು ಎಸ್ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ಮುಹಮ್ಮದ್ ತುಂಬೆ ಹೇಳಿದ್ದಾರೆ.

ಜಾಹೀರಾತು

ಅವರು ಸೋಮವಾರ ರಾತ್ರಿ ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ಎಸ್ಡಿಪಿಐ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಸಮಿತಿ ವತಿಯಿಂದ ನಡೆದ ಪುರಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳಿಗೆ ಮತ್ತು ಮತದಾರರಿಗೆ ಅಭಿನಂದನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಸ್ಡಿಪಿಐ ಜನ ಸಾಮಾನ್ಯರ ಪಕ್ಷವಾಗಿದ್ದು, ಸಿದ್ಧಾಂತ ಹಾಗೂ ಘೋಷಣೆ ಮೇಲೆ ನೆಲೆನಿಂತಿದೆ ಎಂದು ಹೇಳಿದರು.

ಕಾರ್ಯಕರ್ತರ ಅನಿರತ ಶ್ರಮದಿಂದ ಪಕ್ಷಕ್ಕೆ ಗೆಲುವಾಗಿದ್ದು, ಮತದಾರ ಬಾಂಧವರು ಮತ್ತೊಮ್ಮೆ ಪಕ್ಷದ ಕೈ ಹಿಡಿದು ಅವಕಾಶ ನೀಡಿದ್ದಾರೆ. ಉಳ್ಳಾಲದಲ್ಲಿ , ಬಂಟ್ವಾಳ 4, ಪುತ್ತೂರು 1 ಸ್ಥಾನಗಳನ್ನು ಗೆಲ್ಲುವ ಮೂಲಕ ಜಿಲ್ಲೆಯಲ್ಲಿ ಉತ್ತಮ ಫಲಿತಾಂಶ ಲಭಿಸಿದೆ ಎಂದರು.

ರಾಷ್ಟ್ರೀಯ ಕಾರ್ಯದರ್ಶಿ ಆಲ್ಫೋನ್ಸ್ ಫ್ರಾಂಕೋ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಯಾವುದೇ ಫಲಾಪೇಕ್ಷೆಯಿಲ್ಲದೆ ಸಮಾಜ ಸೇವೆಯ ಮೂಲಕ ಹುಟ್ಟಿಕೊಂಡ ಪಕ್ಷ ಎಸ್ಡಿಪಿಐ. ಇದು ಪಕ್ಷದ ಗೆಲುವಲ್ಲ. ಕಾರ್ಯಕರ್ತರ ಗೆಲುವಾಗಿದೆ ಎಂದ ಅವರು, ೧೨ ಅಭ್ಯರ್ಥಿಗಳಲ್ಲಿ ಅಭ್ಯರ್ಥಿಗಳು ಗೆಲ್ಲುವ ಮೂಲಕ ಬಂಟ್ವಾಳದಲ್ಲಿ ನಿರ್ಣಾಯಕವಾಗಿ ಹೊರಹೊಮ್ಮಿದೆ. ಮುಂದಿನ ದಿನಗಳಲ್ಲಿ ..ಜಿಲ್ಲೆಯಲ್ಲಿ ಎಸ್ಡಿಪಿಐ ವಿಜಯ ಪತಾಕೆ ಹಾರಿಸಲಿದೆ ಎಂದು ಭವಿಷ್ಯ ನುಡಿದರು.

ಜಾಹೀರಾತು

ವೇದಿಕೆಯಲ್ಲಿ ರಾಜ್ಯ ಉಪಾಧ್ಯಕ್ಷ ವಕೀಲ ಅಬ್ದುಲ್ ಮಜೀದ್, ರಾಜ್ಯ ಪ್ರಧಾನ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾಹುಲ್ ಹಮೀದ್ ಎಸ್.ಎಚ್., ಮಾಜಿ ಪುರಸಭಾ ಸದಸ್ಯ ಇಕ್ಬಾಲ್ ಐಎಂಆರ್, ಇಜಾಝ್ ಅಹ್ಮದ್, ಕ್ಷೇತ್ರಾಧ್ಯಕ್ಷ ಯೂಸುಫ್ ಆಲಡ್ಕ, ರಾಮಣ್ಣ ಶೆಟ್ಟಿ, ಹನೀಫ್ ಖಾನ್ ಕೊಡಾಜೆ, ಉಸ್ಮಾನ್ ಕೊಮೋರು, ಎನ್ಡಬ್ಲ್ಯೂಎಫ್ ಸದಸ್ಯರಾದ ರೂಬೀನಾ, ಶಂಸಾದ್ ಮತ್ತಿತರರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ಮುನೀಶ್ ಅಲಿ, ಇದ್ರೀಸ್ ಪಿ.ಜೆ., ಶಂಸಾದ್, ಝೀನತ್ ಫಿರೋಝ್ ಅವರನ್ನು ಸನ್ಮಾನಿಸಲಾಯಿತು.

ಮಾಜಿ ಪುರಸಭಾ ಸದಸ್ಯ ಇಕ್ಬಾಲ್ ಐಎಂಆರ್ ಸಹಿತ ಎಸ್ಡಿಪಿಐ ಅಭ್ಯರ್ಥಿಗಳನ್ನು ಅಭಿನಂದಿಸಲಾಯಿತು.

ಜಾಹೀರಾತು

ಕ್ಷೇತ್ರ ಉಪಾಧ್ಯಕ್ಷ ಕಲಂದರ್ ಪರ್ತಿಪಾಡಿ ಸ್ವಾಗತಿಸಿ, ಸಮಿತಿ ಸದಸ್ಯ ಮಲಿಕ್ ವಂದಿಸಿ, ರಹಿಮಾನ್ ಮಠ, ಸಿದ್ದೀಕ್ ನಂದರಬೆಟ್ಟು ನಿರೂಪಿಸಿದರು. ಇಸಾಕ್ ತಲಪಾಡಿ ಸಹಕರಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸಮೃದ್ಧ ಭಾರತ ನಿರ್ಮಾಣ ಎಸ್.ಡಿ.ಪಿ.ಐ. ಕನಸು: ಇಲ್ಯಾಸ್ ಮುಹಮ್ಮದ್ ತುಂಬೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*