ಸಾಲ ಮನ್ನಾಕ್ಕೆ ಬೇಡ ತಾರತಮ್ಯ, ಪ್ರಾಕೃತಿಕ ವಿಕೋಪಕ್ಕೆ ಒಳಗಾದವರಿಗೆ ಕೊಡಿ ವಿಶೇಷ ಪ್ಯಾಕೇಜ್

ಬಿ.ಸಿ.ರೋಡಿನಲ್ಲಿ ಸಹಕಾರ ಭಾರತಿ ವತಿಯಿಂದ ನಡೆಯಿತು ರೈತರ ಪ್ರತಿಭಟನೆ

ಜಾಹೀರಾತು

ಸಹಕಾರ ಭಾರತಿ ಬಂಟ್ವಾಳ ತಾಲೂಕು ವತಿಯಿಂದ ರೈತರ ಹಲವು ಸಮಸ್ಯೆಗಳಿಗೆ ಧ್ವನಿಯಾಗಿ ಪ್ರತಿಭಟನೆ ಬಂಟ್ವಾಳ ಬಿ.ಸಿ.ರೋಡಿನ ಮಿನಿ ವಿಧಾನಸೌಧ ಮುಂಭಾಗ ಬುಧವಾರ ನಡೆಯಿತು. ಅಲ್ಲಿ ಕೇಳಿಬಂದ ಬೇಡಿಕೆಗಳು ಇವು.

  • ಸಹಕಾರಿ ಸಂಘಗಳ ಮತ್ತು ವಾಣಿಜ್ಯ ಬ್ಯಾಂಕುಗಳಲ್ಲಿರುವ ಕೃಷಿಕರ ಸಾಲ ಮನ್ನಾದ ಬಗ್ಗೆ ಒಟ್ಟಿಗೆ ತಕ್ಷಣ ಅಸೂಚನೆ ಹೊರಡಿಸಬೇಕು.
  • ಸಾಲ ಮನ್ನಾದ ಬಗ್ಗೆ ಸರಕಾರವು ಸಹಕಾರಿ ಧುರೀಣರು ಮತ್ತು ಕೃಷಿಕರ ಸಭೆಯನ್ನು ಜಿಲ್ಲಾ ಮಟ್ಟದಲ್ಲಿ ಆಯೋಜಿಸಿ ಅಭಿಪ್ರಾಯ ಪಡೆಯಬೇಕು.
  • ಸಾಲ ಮನ್ನಾದ ಮೊಬಲಗನ್ನು ನಿಗದಿತ ಸಮಯದ ಒಳಗೆ ಸಹಕಾರ ಸಂಘಗಳಿಗೆ ಬಿಡುಗಡೆ ಮಾಡಬೇಕು.
  • ಸಾಲ ಮನ್ನಾವನ್ನು ವ್ಯಕ್ತಿ ಆಧರಿತವಾಗಿ ನಿರ್ಣಯಿಸಬೇಕು.
  • ಹವಾಮಾನ ಆಧರಿತ ಬೆಳೆವಿಮೆಯ ಕಂತನ್ನು ಸಾಲ ವಿತರಿಸುವಾಗಲೇ ಕಡ್ಡಾಯಗೊಳಿಸಿ ಐಚ್ಛಿಕಗೊಳಿಸಬೇಕು.
  • ಸಹಕಾರ ಸಂಘಗಳು ರೂಪೆ ಡೆಬಿಟ್ ಕಾರ್ಡ್ ಸೌಲಭ್ಯ ಹೊಂದಿರದೇ ಇದ್ದು, ಸರಕಾರ ರೂಪೆ ಡೆಬಿಟ್ ಕಾರ್ಡ್ ಮುಖಾಂತರವೇ ಸಾಲ ನೀಡುವ ನೀತಿಯಿಂದ ಕೃಷಿಕರು ದೈನಂದಿನವಾಗಿ ವ್ಯವಹರಿಸುವ ತಮ್ಮ ಸಹಕಾರಿ ಸಂಘಗಳಿಂದ ದೂರವಾಗುವ ಸಾಧ್ಯತೆ ಇದೆ. ಆದ್ದರಿಂದ ನೀತಿಯನ್ನು ಸರಕಾರ ಮೊದಲಿನಂತೆಯೇ ಮುಂದುವರಿಸಬೇಕು.
  • ಕೊಳೆರೋಗ ಅತಿವೃಷ್ಟಿಯಿಂದ ಕೃಷಿಕರು ತಮ್ಮ ಅಪಾರ ಪ್ರಮಾಣದ ಜೀವನಾಧರಿತ ಕೃಷಿಯನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದಾರೆ. ಅಂಥ ಕೃಷಿಕರ ಎಲ್ಲ ರೀತಿಯ ಸಾಲವನ್ನು ಸಂಪೂರ್ಣವಾಗಿ ಯಾವುದೇ ಷರತ್ತಿಲ್ಲದೆ ಮನ್ನಾ ಮಾಡಬೇಕು.
  • ಕೊಳೆರೋಗ ವಿಪರೀತ ಮಳೆಯಿಂದ ಸಂಪೂರ್ಣವಾಗಿ ಕೃಷಿ ನಾಶವಾಗಿರುವ ಕೃಷಿಕರಿಗೆ ಹೊಸತೋಟ ನಿರ್ಮಿಸಲು ಸಹಾಯಧನ, ಹೊಸ ಕೃಷಿ ಸಾಲವನ್ನು ತಕ್ಷಣ ನೀಡಬೇಕು.
  • ಪ್ರಾಕೃತಿಕ ವಿಕೋಪಕ್ಕೆ ಒಳಗಾದ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ
  • ರೈತ ಸಾಲ ಮನ್ನಾ ತಾರತಮ್ಯ ನೀತಿ ಬೇಡ.

ಬಂಟ್ವಾಳ ತಾಲೂಕಿನ ರೈತರು ಬೆಳೆಯುವ ಬೆಳೆ ನಾಶಗೊಂಡು ಅಡಕೆ, ಕಾಳುಮೆಣಸು, ಕೊಕ್ಕೊ ಮತ್ತಿತರ ಬೆಳೆಗಳು ವಿಪರೀತ ಮಳೆಯಿಂದಾಗಿ ಕೊಳೆರೋಗಕ್ಕೆ ತುತ್ತಾಗಿ ಸಂಪೂರ್ಣ ನಾಶಗೊಂಡಿವೆ. ಭತ್ತದ ಕೃಷಿಯೂ ನಾಶವಾಗಿದೆ ಹಲವಾರು ಅಡಕೆ ತೋಟಗಳು ವಿಪರೀತ ಕೊಳೆರೋಗಕ್ಕೆ ತುತ್ತಾಗಿ ಸಂಪೂರ್ಣ ನಾಶವಾಗಿದೆ. ಕೃಷಿಯನ್ನೇ ನಂಬಿದ ರೈತರ ಬದುಕು ಶೋಚನೀಯವಾಗಿದೆ. ಅನ್ನದಾತನ ಕಷ್ಟಕ್ಕೆ ಸರಕಾರ ತಕ್ಷಣ ಸ್ಪಂದಿಸಿ, ದಕ್ಷಿಣ ಕನ್ನಡದ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು. ರೈತರು ತಮ್ಮ ಕುಟುಂಬದ ಭವಿಷ್ಯದ ದೃಷ್ಟಿಯಿಂದ ಭದ್ರತೆಗಾಗಿ ಸಹಕಾರಿ ವ್ಯವಸಾಯ ಬ್ಯಾಂಕುಗಳಲ್ಲಿ ಠೇವಣಿಯಾಗಿ ಇಟ್ಟಿರುವ ಹಣವನ್ನು ಕೃಷಿ ಸಾಲ ಮನ್ನಾಕ್ಕೆ ಹೊಂದಾಣಿಕೆಗೊಳಿಸಬೇಕು ಎಂಬ ಸರಕಾರದ ಷರತ್ತನ್ನು ಕೈಬಿಡಬೇಕು ಎಂದು ಒತ್ತಾಯಿಸಲಾಯಿತು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಶಾಸಕ ಯು. ರಾಜೇಶ್ ನಾಯ್ಕ್ ರೈತರಿಗೆ ಸರಿಯಾದ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ತಾನೋರ್ವ ರೈತನ ನೆಲೆಯಲ್ಲಿ ಶಾಸಕನಾಗಿ ರೈತರ ಸಮಸ್ಯೆಗೆ ಶಾಶ್ವತವಾದ ಪರಿಹಾರ ಕಂಡುಕೊಳ್ಳಲು ವಿಧಾನಸಭೆಯಲ್ಲಿ ಧ್ವನಿ ಎತ್ತುವುದಾಗಿ ಹೇಳಿದ ಅವರು, ಅತಿವೃಷ್ಠಿಯಿಂದಾಗಿ ಅಡಕೆ ಕೊಳೆರೋಗ ಬಾಸಿ ಸಂಪೂರ್ಣ ನಾಶವಾಗಿದ್ದರೂ,ಸರಕಾರ ನೀಡುವ ಜುಜುಬಿ ಪರಿಹಾರ ರೈತನಿಗೆ ಮಾಡುವ ಅವಮಾನವಾಗಿದೆ ಈ ನಿಟ್ಟಿನಲ್ಲಿ ಪ್ರಾಕೃತಿಕ ವಿಕೋಪದಡಿ ರೈತನಿಗೆ ಪರಿಹಾರ ನೀಡುವಂತೆ ಈಗಾಗಲೇ ಖುದ್ದು ಮುಖ್ಯಮಂತ್ರಿಯವನ್ನು ಭೇಟಿಯಾಗಿ ಮಾನವರಿಕೆ ಮಾಡಿದ್ದು, ಜಿಲ್ಲಾಧಿಕಾರಿಯವರಲ್ಲೂ ಈ ಕುರಿತು ಚರ್ಚಿಸಿರುವುದಾಗಿ ತಿಳಿಸಿದರು.

ಜಾಹೀರಾತು

ಎಸ್.ಸಿ.ಡಿ.ಸಿ.ಸಿ.ಬ್ಯಾಂಕ್ ನ ನಿರ್ದೇಶಕ ಟಿ.ಜಿ.ರಾಜಾರಾಮ್ ಭಟ್ ಮಾತನಾಡಿ, ಮುಖ್ಯಮಂತ್ರಿಯವರು ದಿನಕ್ಕೊಂದು ಹೇಳಿಕೆ ನೀಡಿ ರೈತರನ್ನು ಗೊಂದಲಕ್ಕೆ ತಳ್ಳುತ್ತಿದ್ದಾರೆ ಎಂದು ಟೀಕಿಸಿದರು. ಸರಕಾರ ಎಚ್ಚೆತ್ತು ರೈತನ ಸಮಸ್ಯೆಯನ್ನು ಅಲಿಸಿ ವಿಶೇಷ ಪ್ಯಾಕೇಜ್ ಪ್ರಕಟಿಸಬೇಕು ಎಂದು ಆಗ್ರಹಿಸಿದರು.

ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ ಮಾತನಾಡಿ, ಇಂದು ಕೃಷಿಕರು ಸಂಕಷ್ಟದ ಸ್ಥಿತಿಯಲ್ಲಿದ್ದು, ಸರಕಾರದ ನೀತಿಯಿಂದಾಗಿ ಮತ್ತಷ್ಟು ಸಮಸ್ಯೆ ಅನುಭವಿಸುವಂತಾಗಿದೆ ಎಂದರು.

ಸಹಕಾರ ಭಾರತಿಯ ಜಿಲ್ಲಾಧ್ಯಕ್ಷ ಕೃಷ್ಣಪ್ರಸಾದ್ ಮಡ್ತಿಲ ಸಭಾಧ್ಯಕ್ಷತೆ ವಹಿಸಿದ್ದರು.ಸಹಕಾರ ಭಾರತಿ ಸಂಘಟನಾ ಕಾರ್ಯದರ್ಶಿ ಹರೀಶ್ ಆಚಾರ್ಯ,ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ವಕೀಲೆ ಸುಮನಶರಣ್ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಜಾಹೀರಾತು

ಸಹಕಾರ ಭಾರತಿಯ ಪ್ರಮುಖರಾದ ಪ್ರಸನ್ನ ಸುಳ್ಯ,  ಜಿ.ಆನಂದ,ಲಕ್ಷ್ಮಿನಾರಾಯಣ ಉಡುಪ,  ಜಿಪಂಸದಸ್ಯ ರವೀಂದ್ರ ಕಂಬಳಿ,ಜಯಶಂಕರ ಬಾಸ್ರಿಂತ್ತಾಯ,ಬಿಜೆಪಿ ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ,ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವದಾಸ ಶೆಟ್ಟಿ,ಮಂಗಳೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಸಂತೋಷ್ ಕುಮಾರ್ ಬೋಳಿಯಾರ್,ಎಪಿಎಂಸಿ ಮಾಜಿ ಅಧ್ಯಕ್ಷರಾದ ತನಿಯಪ್ಪ ಪೂಜಾರಿ,ರೋನಾಲ್ಡ್ ಡಿಸೋಜ,ರಾಜ್ಯ ಬಿಜೆಪಿ ಸಹವಕ್ತಾರೆ ಸುಲೋಚನಾ ಭಟ್ ಮೊದಲಾದವರಿದ್ದರು.

ತಾಲೂಕು ಸಹಕಾರ ಭಾರತಿ ಅಧ್ಯಕ್ಷ ಸುಧಾಕರ ರೈ ಸ್ವಾಗತಿಸಿದರು. ಮೋನಪ್ಪ ದೇವಸ್ಯ ನಿರ್ವಹಿಸಿದರು.ಬಳಿಕ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸಾಲ ಮನ್ನಾಕ್ಕೆ ಬೇಡ ತಾರತಮ್ಯ, ಪ್ರಾಕೃತಿಕ ವಿಕೋಪಕ್ಕೆ ಒಳಗಾದವರಿಗೆ ಕೊಡಿ ವಿಶೇಷ ಪ್ಯಾಕೇಜ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*