ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರಾಗಿ ಯುವ ನಾಯಕ, ಸಾಮಾಜಿಕ ಮುಂದಾಳು ಸುದೀಪ್ ಕುಮಾರ್ ಶೆಟ್ಟಿ ಮಾಣಿ ಆಯ್ಕೆಯಾಗಿದ್ದಾರೆ.
ಮಾಜಿ ಸಚಿವ ಬಿ.ರಮಾನಾಥ ರೈ ಮತ್ತು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಶಿಫಾರಸ್ಸಿನಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ದಿನೇಶ್ ಗುಂಡುರಾವ್ ಈ ಆಯ್ಕೆ ಆದೇಶ ಹೊರಡಿಸಿದ್ದಾರೆ.
ಮಾಣಿ ಗ್ರಾಮ ಪಂಚಾಯತಿಯಲ್ಲಿ ಎರಡು ಬಾರಿ ಸದಸ್ಯರಾಗಿ ಆಯ್ಕೆಗೊಂಡು ಜನಸೇವೆಯಲ್ಲಿ ನಿರತರಾಗಿರುವ ಸುದೀಪ್ ಕುಮಾರ್ ಶೆಟ್ಟಿ ಕ್ರಿಯಾಶೀಲ ನಾಯಕರಾಗಿ, ಸಮರ್ಥ ಸಂಘಟಕರಾಗಿ ಚಿರಪರಿಚಿತರಾದವರು.
ಬಿ.ಎ.ಪಧವೀದರರಾಗಿರುವ ಇವರು ಸೈಂಟ್ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಸಂಘದ ನಾಯಕರಾಗಿ ವಿದ್ಯಾರ್ಥಿ ದೆಸೆಯಲ್ಲಿಯೇ ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡವರು.ಪ್ರಸ್ತುತ ಮಾಣಿ ಯುವಕ ಮಂಡಲದ ಅಧ್ಯಕ್ಷರಾಗಿ, ಶ್ರೀ ಉಳ್ಳಾಲ್ತಿ ಸೇವಾ ಸಮಿತಿ, ಜಿಲ್ಲಾ ಅಮೆಚೂರು ಕಬಡ್ಡಿ ಎಸೋಶಿಯೇಶನ್ ಸಹಿತ ಹಲವಾರು ಸಾಮಾಜಿಕ, ದಾರ್ಮಿಕ ಸಂಘಟನೆಗಳಲ್ಲಿ ಸಕ್ರೀಯರಾಗಿದ್ದು ಜನೋಪಯೋಗಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.
Be the first to comment on "ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸುದೀಪ್ ಕುಮಾರ್ ಶೆಟ್ಟಿ"