ಹಳೇ ರಸ್ತೆಯಲ್ಲಿ ಹೊಸ ಹೊಂಡಗಳು – ಬಂಟ್ವಾಳ ಜಂಕ್ಷನ್ ನಲ್ಲಿ ಜಾಗ್ರತೆ!!!

SPOTLIGHT by www.bantwalnews.com

Editor: Harish Mambady

ಜಾಹೀರಾತು

Click for Video:

 

ಜಾಹೀರಾತು

ರಾಷ್ಟ್ರೀಯ ಹೆದ್ದಾರಿಯಲ್ಲಿ ಬಂಟ್ವಾಳ ನಾರಾಯಣಗುರು ವೃತ್ತದಿಂದ ಮುಂದೆ ಚಾರ್ಮಾಡಿ ಕಡೆ ಸಾಗುವಾಗ ಹುಷಾರು. ಅಲ್ಲಲ್ಲಿ ಹೊಂಡಗಳಿವೆ ಎಚ್ಚರಿಕೆ.

ಈಗಾಗಲೇ ಬಂಟ್ವಾಳದಿಂದ ಪುಂಜಾಲಕಟ್ಟೆವರೆಗೆ ರಸ್ತೆ ಅಭವೃದ್ಧಿಗೆ ಅನುದಾನ ಮೀಸಲಿಟ್ಟಾಗಿದೆ. ಆದರೆ ಕಾಮಗಾರಿ ಆರಂಭಗೊಳ್ಳಲು ಮುಹೂರ್ತ ನಿಗದಿಯಾಗಿಲ್ಲ. ಈ ಮಧ್ಯೆ ಬಂಟ್ವಾಳ ಪೇಟೆ, ಬೆಳ್ತಂಗಡಿ, ಬಿ.ಸಿ.ರೋಡ್, ಮೂಡುಬಿದಿರೆ ಕಡೆಗಳಿಗೆ ವಾಹನಗಳು ತಿರುಗುವ ಜಂಕ್ಷನ್ ಆಗಿರುವ ತುಂಬ್ಯ ಜಂಕ್ಷನ್ ಅತ್ಯಂತ ಅಪಾಯದ ಸ್ಥಿತಿಯಲ್ಲಿದೆ. ಇಲ್ಲಿ ವಾಹನಗಳು ಸಂಚರಿಸುವಾಗ ಹೊಂಡ ತಪ್ಪಿಸಲು ಹೊರಟರೆ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆಯಬೇಕು. ವಾಹನದಟ್ಟಣೆ ಹೆಚ್ಚಾದರೂ ರಸ್ತೆ ಅಗಲಗೊಳ್ಳದೇ ಇರುವುದು, ಇರುವ ರಸ್ತೆ ಹೊಂಡಮಯವಾಗಿರುವ ಕಾರಣ ವಾಹನ ಸಂಚಾರಕ್ಕೆ ಈ ಭಾಗದಲ್ಲಿ ತೀವ್ರ ತೊಡಕುಂಟಾಗುತ್ತಿದೆ.

ಜಾಹೀರಾತು

ಏನು ಸಮಸ್ಯೆ:

ಈ ಭಾಗದಲ್ಲಿ ರಸ್ತೆ ಹೊಂಡದ ಸಮಸ್ಯೆಯಷ್ಟೇ ಅಲ್ಲ, ಬಸ್ ಗಳು ರಸ್ತೆಯಲ್ಲೇ ಪಾರ್ಕಿಂಗ್ ಮಾಡುವ ಕಾರಣ ಟ್ರಾಫಿಕ್ ಜಾಮ್ ಗೂ ಕಾರಣವಾಗುತ್ತಿದೆ. ಹೊಂಡಮುಕ್ತ ಮತ್ತು ಅಗಲವಾದ ರಸ್ತೆ ನಿರ್ಮಾಣ ಮತ್ತು ಸುಗಮ ಟ್ರಾಫಿಕ್ ಸಂಚಾರಕ್ಕೆ ಸಾರ್ವಜನಿಕರ ಸಹಕಾರವೂ ಅಷ್ಟೇ ಮುಖ್ಯ. ಪಕ್ಕದಲ್ಲೇ ಬಸ್ ತಂಗುದಾಣವಿದ್ದರೂ ಅಲ್ಲಿ ಬಸ್ಸುಗಳು ನಿಲ್ಲುವುದಿಲ್ಲ ಎಂಬುದು ಸಾರ್ವಜನಿಕರ ದೂರಾದರೆ, ತಂಗುದಾಣದ ಪಕ್ಕ ನಿಲ್ಲುವ ವ್ಯವಸ್ಥೆ ಇಲ್ಲ, ಅಲ್ಲಿ ಹೊಂಡಗಳಿವೆ ಎಂಬುದು ಬಸ್ ನವರ ಸಮಸ್ಯೆ. ಈ ಮಧ್ಯೆ ಗಜಗಾತ್ರದ  ಹೊಂಡಗಳು ಸಮಸ್ಯೆಗೆ ಮತ್ತಷ್ಟು ತುಪ್ಪ ಎರೆಯುತ್ತಿವೆ.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಹಳೇ ರಸ್ತೆಯಲ್ಲಿ ಹೊಸ ಹೊಂಡಗಳು – ಬಂಟ್ವಾಳ ಜಂಕ್ಷನ್ ನಲ್ಲಿ ಜಾಗ್ರತೆ!!!"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*