ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಶ್ರೀ ಮಹಾಮ್ಮಾಯಿ ಅಮ್ಮನವರ ದೇವಸ್ಥಾನದಲ್ಲಿ ವಾರ್ಷಿಕ ನವರಾತ್ರಿ ಮಹೋತ್ಸವದ ನಿಮ್ಮಿತ್ತ ವಿಜಯ ದಶಮಿಯಂದು ವಿಜೃಂಭಣೆಯ ಶ್ರೀ ಚಂಡಿಕಾ ಹವನವು ಮಂಗಳೂರಿನ ರಥಬೀದಿಯ ಆಚಾರ್ಯ ಮಠದ ಶ್ರೀ ಕಾಶಿನಾಥ ಆಚಾರ್ಯರ ನೇತೃತ್ವದಲ್ಲಿ ನಡೆಯಿತು.
ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಊರ ಪರವೂರ ಭಕ್ತಾದಿಗಳಿಗೆ ದೇವ ದರ್ಶನದ ಮೂಲಕ ಇಷ್ಟಾರ್ಥ ಸಿದ್ದಿಗೆ ಶ್ರೀ ದೇವಿಯ ಗಂಧ ಪ್ರಸಾದದ ಬಳಿಕ ಚಂಡಿಕಾ ಹವನದ ಪೂರ್ಣಾಹುತಿ ನಡೆದು ತದನಂತರ ನೆರೆದ ಎಲ್ಲಾ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಿತು ಎಂದು ಬರಿಮಾರು ಶ್ರೀ ಮಹಾಮ್ಮಾಯಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ರಾಕೇಶ ಪ್ರಭು ತಿಳಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬರಿಮಾರು ಶ್ರೀ ಮಹಾಮ್ಮಾಯಿ ಅಮ್ಮನವರ ದೇವಸ್ಥಾನದಲ್ಲಿ ಚಂಡಿಕಾ ಹವನ"