ವಿದ್ಯುತ್ ಕಂಬದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಇಬ್ಬರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ಮಂಗಳವಾರ ನಡೆದಿದೆ.
ಕಂಬಳಬೆಟ್ಟು ನೂಜಿ ನಿವಾಸಿ ಜಗದೀಶ ಹಾಗೂ ಕೊಳ್ನಾಡು ಗ್ರಾಮದ ಕೋಜಿಗುರಿ ನಿವಾಸಿ ಪ್ರವೀಣ್ ಗಾಯಗೊಂಡ ಕಾರ್ಮಿಕರು. ಕೊಳ್ನಾಡು ಗ್ರಾಮದ ಪಡಾರು ಕುಡ್ತಿಕಲ್ಲು ಎಂಬಲ್ಲಿ ಹಳೆಯ ತಂತಿಗಳನ್ನು ಬದಲಾಯಿಸುತ್ತಿದ್ದ ವೇಳೆ ವಿದ್ಯುತ್ ಪ್ರವೇಶಿಸಿ ಕಂಬದಲ್ಲಿದ್ದ ಇಬ್ಬರು ಕೆಳಗಡೆ ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾಮಗಾರಿ ಹಿನ್ನೆಲೆಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ವಿದ್ಯುತ್ ಶಾಕ್: ಇಬ್ಬರು ಕಾರ್ಮಿಕರು ಗಂಭೀರ"