ಯುವಜನತೆ ದಾರಿತಪ್ಪದಂತೆ ನೋಡಿಕೊಳ್ಳಬೇಕಾಗಿರುವುದು ನಮ್ಮ ಹೊಣೆಗಾರಿಕೆ

ಜಮಾಅತೆ ಇಸ್ಲಾಮೀ ಹಿಂದ್ ಪಾಣೆಮಂಗಳೂರು ಶಾಖೆಯ ವತಿಯಿಂದ ಪ್ರವಾದಿ ಮುಹಮ್ಮದ್ (ಸ): ಮಾನವ ಕುಲದ ಶ್ರೇಷ್ಠ ಮಾರ್ಗದರ್ಶಕ ಎಂಬ ರಾಜ್ಯವ್ಯಾಪಿ ಸೀರತ್ ಅಭಿಯಾನದ ಅಂಗವಾಗಿ ಎರಡು ದಿನಗಳ ಸೀರತ್ ಸಾರ್ವಜನಿಕ ಸಭೆಯ ಸಮಾರೋಪ ಮೆಲ್ಕಾರ್ ಜಂಕ್ಷನ್‌ನಲ್ಲಿ ಶನಿವಾರ ರಾತ್ರಿ ನಡೆಯಿತು.

ಜಾಹೀರಾತು

ಸಾಂಧೀಪಿನಿ ಸಾಧನಾಶ್ರಮ ಶ್ರೀ ಕ್ಷೇತ್ರ ಕೇಮಾರು ಶ್ರೀ ಈಶ ವಿಠಲದಾಸ ಸ್ವಾಮೀಜಿ ಅವರು ಸಾರ್ವಜನಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಈ ಸಮಾಜ ಯಾಂತ್ರಿಕ ಯುಗದಲ್ಲಿ ಬದುಕುತ್ತಿದ್ದು, ಇಲ್ಲಿ ಮಾನವೀಯ ಸಂಸ್ಕೃತಿ ದಿನೇ ದಿನೇ ಕ್ಷೀಣಿಸುತ್ತಿದೆ ಎಂದು ವಿಷಾದವ್ಯಕ್ತಪಡಿಸಿದರು.

ಧರ್ಮ ಆತ್ಮಶಕ್ತಿಯನ್ನು ತುಂಬುವ ಕೆಲಸ ಮಾಡುತ್ತಿದೆ. ಆದರೆ, ಯುವ ಜನತೆ ಕೆಟ್ಟ ಚಟಗಳಿಗೆ ಸಿಲುಕಿ, ತಮ್ಮ ಆತ್ಮಶಕ್ತಿಯ ಕೊರತೆಯಿಂದ ಆತ್ಮಹತ್ಯೆಯಂತಹ ದುಷ್ಕೃತ್ಯಕ್ಕೆ ಬಲಿಯಾಗುತ್ತಿದ್ದಾರೆ ಎಂದು ಹೇಳಿದರು.

ಪೋಷಕರು ತಮ್ಮ ಮಕ್ಕಳಿಗೆ ಡಾ. ಅಬ್ದುಲ್ ಕಲಾಂ ಅವರ ದೇಶಭಕ್ತಿ ಹಾಗೂ ಅಬ್ರಹಂ ಲಿಂಕನ್ ಅವರ ಮಾತೃ ಪ್ರೇಮವನ್ನು ಕಲಿಸಕೊಡಬೇಕಾಗಿದೆ ಎಂದರು.

ಜಾಹೀರಾತು

ಸದ್ಭಾವನಾ ವೇದಿಕೆ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಅಕ್ಬರ್ ಅಲಿ ಅವರು “ಕೆಡುಕು ಮುಕ್ತ ಸಮಾಜ ಕುರಾನಿನ ಬೆಳಕಿನಲ್ಲಿ” ಎಂಬ ವಿಷಯದಲ್ಲಿ ಮಾತನಾಡಿ, ಹಿಂದಿನ ಕಾಲದಲ್ಲಿ ಮದ್ಯವನ್ನು ಕದ್ದುಮುಚ್ಚಿ ಹಾಗೂ ನಾಚಿಕೆಯಿಂದ ಪಾನ ಮಾಡುತ್ತಿದ್ದರು. ಪ್ರಸ್ತುತ ದಿನಗಳಲ್ಲಿ ಮದ್ಯಪಾನ ಉದ್ಯೋಗವಾಗಿಯೂ ಹಾಗೂ ಫ್ಯಾಷನ್ ಆಗಿ ಬೆಳೆದು ನಿಂತಿರುವುದು ಖೇದಕರ ಎಂದರು.

ಇಸ್ಲಾಂನಲ್ಲಿ ಅಮಲು ಭರಿಸುವ ಎಲ್ಲಾ ಪದಾರ್ಥಗಳನ್ನು  ನಿಷೇಧಿಸಲಾಗಿದೆ. ಇತರ ಧರ್ಮದ ಮುಖಂಡರು ಜವಾಬ್ದಾರಿ ವಹಿಸಿ, ಮದ್ಯಪಾನ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕಾಗಿದೆ. ಇದಕ್ಕೆ ಸರಕಾರವು ಸಹಕಾರವೂ ಅಗತ್ಯ ಎಂದು ಹೇಳಿದರು.

ವೇದಿಕೆಯಲ್ಲಿ ಬೋಳಂಗಡಿ ಹವ್ವಾ ಜುಮಾ ಮಸೀದಿ ಖತೀಬ್ ಯಹ್ಯಾ ತಂಙಳ್ ಮದನಿ, ಧಾರ್ಮಿಕ ಮುಂದಾಳು ಕೈಯೂರು ನಾರಾಯಣ ಭಟ್, ಗಾಣಿಗ ಸೇವಾ ಸಂಘದ ಬಂಟ್ವಾಳ ತಾಲೂಕು ಅಧ್ಯಕ್ಷ ರಘು ಸಪಲ್ಯ ಹಾಗೂ ಎಂ.ಎಚ್ ಇಕ್ಬಾಲ್ ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ಸ್ವಾಮೀಜಿ ಅವರನ್ನು ಗೌರವಿಸಲಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಯುವಜನತೆ ದಾರಿತಪ್ಪದಂತೆ ನೋಡಿಕೊಳ್ಳಬೇಕಾಗಿರುವುದು ನಮ್ಮ ಹೊಣೆಗಾರಿಕೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*