ಜಿಲ್ಲೆ ಶಾಸಕರು ಸರಕಾರದ ಗಮನಕ್ಕೆ ತಂದರೂ ನಿಯಂತ್ರಣಕ್ಕೆ ಬಾರದ ಡ್ರಗ್ ಮಾಫಿಯಾ : ನಳಿನ್ ಆರೋಪ

ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆಯಾದ ಶಾಸಕರು ವಿಧಾನಸಭೆಯಲ್ಲಿ ಗಾಂಜಾ ಮಾಫಿಯಾ ಕುರಿತು ಚರ್ಚೆ ನಡೆಸಿದರೂ ಸರಕಾರ ಗಂಭೀರವಾಗಿ ಪರಿಗಣಿಸಿಲ್ಲ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

ಜಾಹೀರಾತು

ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿದ ಬಳಿಕ ಬಂಟ್ವಾಳದ ಶಾಸಕರ ಕಚೇರಿಯಲ್ಲಿ ಶನಿವಾರ ಸಂಜೆ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಐದಾರು ವರ್ಷಗಳಿಂದ ಗಾಂಜಾ ಮಾಫಿಯಾ ಸರಕಾರವನ್ನೇ ಕಪಿಮುಷ್ಠಿಯಲ್ಲಿ ಇಟ್ಟುಕೊಂಡಿದೆ, ಗಾಂಜಾ ಮಾಫಿಯಾದ ಹಿಡಿತಕ್ಕೆ ಒಳಗಾದ ಯುವಕರು ಅತ್ಯಾಚಾರದಂಥ ಕೃತ್ಯ ಎಸಗಿದ್ದು, ಸರಕಾರ ತಕ್ಷಣ ಡ್ರಗ್ ಮಾಫಿಯಾವನ್ನು ನಿಯಂತ್ರಿಸಬೇಕು. ಇಂಥ ಘಟನೆಗಳು ಸರಕಾರದ ಆಡಳಿತ ವೈಫಲ್ಯವನ್ನು ತೋರಿಸುತ್ತದೆ. ಆರೋಪಿಗಳನ್ನು ಬಂಧಿಸಿದ ಪೊಲೀಸ್ ಇಲಾಖೆಯನ್ನು ಅಭಿನಂದಿಸುತ್ತೇನೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು, ಇದು ಇಡೀ ಜಿಲ್ಲೆ ತಲೆತಗ್ಗಿಸುವ ವಿಷಯ ಎಂದು ಹೇಳಿದರು.

ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಯ ಮನೆಗೆ ಇಂದು ಶಾಸಕ ರಾಜೇಶ್ ನಾಯ್ಕ್, ಸ್ಥಳೀಯ ಮುಖಂಡರಾದ ಚೆನ್ನಪ್ಪ ಕೋಟ್ಯಾನ್ ಮತ್ತಿತರೊಂದಿಗೆ ಭೇಟಿ ನೀಡಿದ್ದೇವೆ  ನಾನು ಮತ್ತು ಶಾಸಕರು ಸಂತ್ರಸ್ತೆಗೆ ಧೈರ್ಯ ಹೇಳಿದ್ದೇವೆ. ಈ ಕುಟುಂಬ ತೀರಾ ಬಡತನದಲ್ಲಿದ್ದು, ಸರಕಾರ ಪರಿಹಾರವನ್ನು ತಕ್ಷಣ ಶಾಸಕರ ಮೂಲಕ ನೀಡಬೇಕು ಎಂದು ಆಗ್ರಹಿಸಿದರು.

ಕೇಂದ್ರ ಸರಕಾರ ದಕ್ಷಿಣ ಕನ್ನಡ ಮತ್ತು ಕೊಡಗಿಗೆ ಒಟ್ಟು 720 ಕೋಟಿ ರೂಗಳನ್ನು ಪ್ರಾಕೃತಿಕ ಪರಿಹಾರ ಘೋಷಿಸಿದಂತೆ 546.21 ಕೋಟಿ ರೂ. ಬಿಡುಗಡೆ ಮಾಡಿದ್ದು, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಸಚಿವ ರಾಜನಾಥ ಸಿಂಗ್ ಅವರನ್ನು ಅಭಿನಂದಿಸುತ್ತೇನೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊಳೆರೋಗದಿಂದ ಅಡಕೆ ಬೆಳೆಗಾರರು ನಷ್ಟ ಅನುಭವಿಸುತ್ತಿದ್ದಾರೆ. ಇದಕ್ಕೆ ಪ್ಯಾಕೇಜ್ ಬಿಡುಗಡೆ ಮಾಡಿದರೆ ಮಾತ್ರ ರೈತರಿಗೆ ನೆರವು ನೀಡಿದಂತಾಗುತ್ತದೆ ಕೂಡಲೇ ಬೆಳೆಗಾರರಿಗೆ ಪ್ರತ್ಯೇಕ ಪ್ಯಾಜೇಜ್ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

ಜಾಹೀರಾತು

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವದಾಸ ಶೆಟ್ಟಿ, ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ದಿನೇಶ್ ಅಮ್ಟೂರು, ಜಿಪಂ ಸದಸ್ಯೆ ಕಮಲಾಕ್ಷಿ ಪೂಜಾರಿ, ತಾಪಂ ಮಾಜಿ ಸದಸ್ಯ ಮೋಹನ್ ಪಿ.ಎಸ್, ಬಿಜೆಪಿ ಕಾರ್ಯದರ್ಶಿ ರಮಾನಾಥ ರಾಯಿ ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಜಿಲ್ಲೆ ಶಾಸಕರು ಸರಕಾರದ ಗಮನಕ್ಕೆ ತಂದರೂ ನಿಯಂತ್ರಣಕ್ಕೆ ಬಾರದ ಡ್ರಗ್ ಮಾಫಿಯಾ : ನಳಿನ್ ಆರೋಪ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*