ಡಿ.7, 8ರಂದು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಬಂಟ್ವಾಳ ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನ ಡಿ.7 ಮತ್ತು 8ರಂದು ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನದ ಎ.ಕೆ.ಮಹಾಬಲ ಶೆಟ್ಟಿ ಸಭಾಂಗಣದಲ್ಲಿ ಡಾ. ಎಫ್.ಎಚ್.ಒಡೆಯರ್ ವೇದಿಕೆಯಲ್ಲಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಬಂಟ್ವಾಳ ಅಧ್ಯಕ್ಷ ಪ್ರೊ.ತುಕಾರಾಮ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಕಸಾಪ ಬಂಟ್ವಾಳ ತಾಲುಕು ಅಧ್ಯಕ್ಷ ಮೋಹನ ರಾವ್ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು.

ಜಾಹೀರಾತು

ಡಿ.7ರಂದು ಸಂಜೆ 4.05ಕ್ಕೆ ಮಾಜಿ ಶಾಸಕ ವೈ.ಎಸ್.ವಿ.ದತ್ತ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಸ್ಮರಣ ಸಂಚಿಕೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಬಿಡುಗಡೆ ಮಾಡುವರು. ಹಿರಿಯ ಸಾಹಿತಿ ಡಾ. ಏರ್ಯ ಲಕ್ಷ್ಮೀನಾರಾಯಣ ಆಳ್ವ ಹೊಸ ಕೃತಿ ಬಿಡುಗಡೆಗೊಳಿಸಲಿದ್ದಾರೆ. ಸೇವಾಂಜಲಿ ಫರಂಗಿಪೇಟೆ ಅಧ್ಯಕ್ಷ ಅರ್ಕುಳಬೀಡು ವಜ್ರನಾಥ ಶೆಟ್ಟಿ, ಉದ್ಯಮಿ ಬಿ.ಜಗನ್ನಾಥ ಚೌಟ, ಮಹಮ್ಮದ್ ಬಾವ ಎಫ್. ಭಾಗವಹಿಸಲಿದ್ದಾರೆ ಎಂದರು. ಡಿ.8ರಂದು ಸಂಜೆ ಸಮಾರೋಪ ಸಮಾರಂಭ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ಜಿಪಂ ಸದಸ್ಯ ರವೀಂದ್ರ ಕಂಬಳಿ ಡಿ.7ರಂದು ಬೆಳಗ್ಗೆ ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದು, ಕಸಾಪ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಧ್ವಜಾರೋಹಣ ಮಾಡುವರು. ಗ್ರಾಪಂ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಕನ್ನಡ ಧ್ವಜಾರೋಹಣ ನೆರವೇರಿಸುವರು. ಮಧ್ಯಾಹ್ನ 2.30ಕ್ಕೆ ತುಂಬೆ ಪಪೂ ಕಾಲೇಜಿನಿಂದ ಸೇವಾಂಜಲಿ ಸಭಾಂಗಣದವರೆಗೆ ವಿವಿಧ ಸ್ತಬ್ದ ಚಿತ್ರಗಳು ಹಾಗೂ ಬ್ಯಾಂಡ್ ವಾದನದೊಂದಿಗೆ ಕನ್ನಡ ಭುವನೇಶ್ವರಿಯ ಮೆರವಣಿಗೆ ನಡೆಯುವುದು. ತುಂಬೆ ಬಿ.ಎ.ಸಮೂಹ ಸಂಸ್ಥೆಗಳ ಬಿ.ಅಬ್ದುಲ್ ಸಲಾಂ ಉದ್ಘಾಟಿಸುವರು. 3.45ಕ್ಕೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ ವಸ್ತುಪ್ರದರ್ಶನ ಉದ್ಘಾಟಿಸುವರು. ಪುಸ್ತಕ ಪ್ರದರ್ಶನ ಮಳಿಗೆಯನ್ನು ಕರ್ನಾಟಕ ಕತಾರ್ ಸಂಘದ ಉಪಾಧ್ಯಕ್ಷ ಮೂಡಂಬೈಲು ರವಿ ಶೆಟ್ಟಿ ಉದ್ಘಾಟಿಸಲಿದ್ದಾರೆ.

ಜಾಹೀರಾತು

ಸಂಜೆ 6.05ರಿಂದ ಭಾಷೆ ಸಂಸ್ಕೃತಿ ಗೋಷ್ಠಿ ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಶಿವಪ್ರಕಾಶ್ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ವಿಷಯ ಮಂಡಿಸುವರು. ಸಂಜೆ 6.45ರಿಂದ ದೃಶ್ಯಮಾಧ್ಯಮಗಳಲ್ಲಿ ಧಾರಾವಾಹಿಗಳು ವಿಷಯದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ. ಅಜಕ್ಕಳ ಗಿರೀಶ ಭಟ್ಟ್ ಅಧ್ಯಕ್ಷತೆಯಲ್ಲಿ ನಡೆಯುವುದು. ಡಾ. ವಿಜಯಲಕ್ಷ್ಮೀ ಪೊಳಲಿ, ಡಾ. ವೀಣಾ ಪಾಲಚಂದ್ರ ವಿಷಯ ಮಂಡಿಸುವರು. 8ರಂದು ಸಾಹಿತ್ಯ ಯುವ ಸ್ಪಂದನ, ಬಂಟ್ವಾಳ  ಇತಿಹಾಸ ಮತ್ತು ಮರೆಯಲಾರದ ಮಹಾನುಭಾವರು ಗೋಷ್ಠಿ ನಡೆಯಲಿದೆ. ಸಂಜೆ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ, ಎಸ್ಸೆಸ್ಸೆಲ್ಸಿ ಸಾಧಕರಿಗೆ ಸನ್ಮಾನ ನಡೆಯುವುದು. ರಾತ್ರಿ ಭೀಷ್ಮ ಸೇನಾಧಿಪತ್ಯ ತಾಳಮದ್ದಳೆ ನಡೆಯಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸ್ವಾಗತ ಸಮಿತಿ ಅಧ್ಯಕ್ಷ ಕೃಷ್ಣಕುಮಾರ್ ಪೂಂಜ,ನಿಕಟಪೂರ್ವ ಕಸಾಪ ಅಧ್ಯಕ್ಷ ಜಯಾನಂದ ಪೆರಾಜೆ,  ಪದಾಧಿಕಾರಿಗಳಾದ ಡಾ. ನಾಗವೇಣಿ ಮಂಚಿ, ಗಂಗಾಧರ ಆಳ್ವ, ರವೀಂದ್ರ ಕುಕ್ಕಾಜೆ, ಮೋಹನ್ ಕೆ.ಶ್ರೀಯಾನ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಡಿ.7, 8ರಂದು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*