ಮಾರ್ಚ್ 4ರಿಂದ 13 – ಪೊಳಲಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ಸಂಭ್ರಮ

ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ಆರಾಧನಾ ಕ್ಷೇತ್ರ ಪೊಳಲಿಯ ಶ್ರೀ ರಾಜರಾಜೇಶ್ವರೀ ದೇವಿ ದೇವಸ್ಥಾನ ಪುನರ್ ನಿರ್ಮಾಣಗೊಳ್ಳುತ್ತಿದ್ದು ಮುಂದಿನ ವರ್ಷದ ಮಾ. 4 ರಿಂದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ಆರಂಭಗೊಂಡು, 13 ರತನಕ  ನಡೆಯಲಿದೆ. 13ರಂದು ಬ್ರಹ್ಮಕಲಶೋತ್ಸವ ದ ಬಳಿಕ ಮಾ.14ರಿಂದ ಒಂದು ತಿಂಗಳು ವಾರ್ಷಿಕ ಜಾತ್ರಾ ಮಹೋತ್ಸವ ನಡೆಯಲಿದೆ .

ಜಾಹೀರಾತು

ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಸಭಾಂಗಣದಲ್ಲಿ ಮಾಧ್ಯಮ ಗೋಷ್ಟಿ ನಡೆಸಿ ಮಾಹಿತಿ ನೀಡಿದರು.

ದೇವಳದಲ್ಲಿ ಇರಿಸಿದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದಂತೆ ದೇವಳದ ಜೀಣೋದ್ದಾರ ಕಾರ್ಯವನ್ನು ಕೈಗೊಳ್ಳಲಾಗಿದೆ. ದೇವಸ್ಥಾನದ ಎಲ್ಲಾ ಪುನರ್ ನಿರ್ಮಾಣ ಕಾಮಗಾರಿಗೆ  19 ಕೋಟಿ ಅಂದಾಜಿಸಲಾಗಿದ್ದು ಈವರೆಗೆ ದೇಣಿಗೆ ರೂಪದಲ್ಲಿ 6.63 ಕೋಟಿ ರೂಪಾಯಿ ಸಂಗ್ರಹವಾಗಿದೆ. ವಿವಿಧ ಸಮಾಜ ಹಾಗೂ ದಾನಿಗಳ ಸೇವಾ ರೂಪದಲ್ಲಿ ಸುಮಾರು 3.5 ಕೋಟಿ ವೆಚ್ಚದಲ್ಲಿ  ಕಾಮಗಾರಿ ನಿರ್ವಹಿಸಲು ಮುಂದೆ ಬಂದಿರುತ್ತಾರೆ. ಭಕ್ತರು ಹಾಗೂ ಸಂಘ ಸಂಸ್ಥೆಗಳು ಕರಸೇವೆಯ ರೂಪದಲ್ಲಿ ಕೆಲಸವನ್ನು ನಿರ್ವಹಿಸಿರುತ್ತಾರೆ. ದೇವಳದ ನಿಧಿಯಿಂದ 5 ಕೋಟಿ ಖರ್ಚು ಭರಿಸಲು  ಸರಕಾರದ ಅನಿಮತಿಯೂ ಸಿಕ್ಕಿದೆ. ಈಗಾಗಲೇ ಒಟ್ಟು  11.71 ಕೋಟಿ ಖರ್ಚು ತಗುಲಿದ್ದು  ಎಲ್ಲಾ ಖರ್ಚುಗಳನ್ನು ಜೀಣೋದ್ದಾರದ ಬಾಬ್ತು ಸಂಗ್ರಹವಾದ ದೇಣಿಗೆ ಮತ್ತು ದೇವಳದ ಖಾತೆಯ ಅಭಿವೃದ್ದಿಯಿಂದ ಸಂಗ್ರಹವಾದ 1.72 ಕೋಟಿ ಹಾಗೂ ದೇವಳದ ನಿಧಿಯಿಂದ 3.50 ಕೋಟಿ  ಭರಿಸಲಾಗಿದೆ. ಇನ್ನೂ ಬಾಕಿ ಉಳಿದಿರುವ ಕೆಲಸ ಕಾರ್ಯಗಳನ್ನು ನಿರ್ವಹಿಸಲು  ರೂ. 2.5 ಕೋಟಿ ಮೊತ್ತದ ಅಗತ್ಯತೆ ಇದ್ದು ಭಕ್ತರು ಹಾಗೂ ದಾನಿಗಳ ನೆರವು ಅಗತ್ಯ ಎಂದು ವಿನಂತಿಸಿಕೊಂಡರು.

ಈಗಾಗಲೇ ಶೇ. 70ರಷ್ಟು ಕಾರ್ಯ ಪೂರ್ಣಗೊಂಡಿದ್ದು ಇನ್ನೂ ಬಾಕಿ ಉಳಿದರುವ ಕೆಲಸವು ಮುಂದಿನ ಎರಡು ತಿಂಗಳೊಳಗಾಗಿ ಪೂರ್ಣಗೊಳ್ಳಲಿದೆ, ಮಾರ್ಚ್ 10ರಿಂದ 13 ರೊಳಗೆ ನೂತನ ಧ್ವಜಸ್ತಂಭದ ಧ್ವಜಪ್ರತಿಷ್ಠೆ ಹಾಗೂ ಪರಿವಾರ ದೈವಗಳ ಪ್ರತಿಷ್ಠೆಯೂ ನಡೆಯಲಿದೆ. ಮಾರ್ಚ್ 14ರಿಂದ ಎಂದಿನಂತೆ ಶ್ರೀ ದೇವರ ವಾರ್ಷಿಕ ಮಹೋತ್ಸವ ನಡೆಯಲಿದೆ.

ಜಾಹೀರಾತು

ಮುಂದಿನ ಜನವರಿ 15ರಿಂದ ಸಾವಿರ ಸೀಮೆಯ ಭಕ್ತಾದಿಗಳು ನಿಯಮದಂತೆ ವ್ರತಾಚರಣೆಯಲ್ಲಿ ಇರುವಂತೆ ಸೂಚಿಸಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಆಡಳಿತ ಮೊಕ್ತೇಸರ ಡಾ.ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಉಳಿಪಾಡಿಗುತ್ತು ತಾರನಾಥ ಆಳ್ವ,ಅನುವಂಶಿಕ ಮೊಕ್ತೇಶರ ಪ್ರಧಾನ ಅರ್ಚಕ ಮಾಧವ ಭಟ್, ಮೊಕ್ತೇಶರ ಚೇರ ಸೂರ್ಯನಾರಾಯಣ ರಾವ್, ಕಾರ್ಯನಿರ್ವಹಣಾಧಿಕಾರಿ ಪ್ರವೀಣ್,  ಸುಬ್ರಾಯ ಕಾರಂತ ಇದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಮಾರ್ಚ್ 4ರಿಂದ 13 – ಪೊಳಲಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ಸಂಭ್ರಮ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*