ಬಿಜೆಪಿ ಮುಕ್ತ ಭಾರತ ನಿರ್ಮಾಣದತ್ತ ಫಲಿತಾಂಶ ದಿಕ್ಸೂಚಿ: ರಮಾನಾಥ ರೈ

ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅತ್ಯಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸಿದ ಹಿನ್ನೆಯಲ್ಲಿ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳವಾರ ಬಿ.ಸಿ.ರೋಡು ಜಂಕ್ಷನ್‌ನಲ್ಲಿ ಸಂಭ್ರಮ ಆಚರಿಸಲಾಯಿತು. ಪಟಾಕಿ ಸಿಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ರಾಷ್ಟ್ರೀಯ ನಾಯಕರಿಗೆ ಜೈಕಾರ ಹಾಕಿದರು.

ಜಾಹೀರಾತು

ಈ ಸಂದರ್ಭ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣದ ಮಾತುಗಳು ಕೇಳಿ ಬರುತ್ತಿದ್ದವು ಆದರೆ ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಭೂರ್ವ ಗೆಲುವು ಸಾಧಿಸಿರುವುದು ಬಿಜೆಪಿ ಮುಕ್ತ ಭಾರತ ನಿರ್ಮಾಣವಾಗುವತ್ತ ಸಾಗುತ್ತಿದೆ ಎಂದರು.

ಮುಂದಿನ ಲೋಕಸಭಾ ಚುನಾವಣೆಗೆ ಈ ಗೆಲುವು ದಿಕ್ಸೂಚಿಯಾಗಲಿದ್ದು ಕೇಂದ್ರ ಸರಕಾರದ ಜನ ವಿರೋಧಿ ನೀತಿಯಿಂದ ಬೇಸತ್ತು ಜನ ಕಾಂಗ್ರೆಸನ್ನು ಗೆಲ್ಲಿಸಿದ್ದಾರೆ. ಮೋದಿ ನೇತೃತ್ವದ ಕೇಂದ್ರ ಸರಕಾರದಿಂದ ಬಂಡವಾಳ ಶಾಹಿಗಳಿಗೆ ಪ್ರಯೋಜನವಾಗಿದಯೇ ವಿನಃ ಜನ ಸಾಮಾನ್ಯರಿಗೆ ಏನು ಪ್ರಯೋಜನವಾಗಿಲ್ಲ ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಮಾತನಾಡಿ ಪಂಚರಾಜ್ಯಗಳ ವಿಧಾನಪರಿಚತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ದೇಶದ ಜನರಿಗೆ ಕಾಂಗ್ರೆಸ್ ಅನಿವಾರ್ಯ ಎಂಬುದನ್ನು ತೋರಿಸಿಕೊಟ್ಟಿದೆ. ಬಡವರು, ಮಧ್ಯಮವರ್ಹದವರು, ಕೂಲಿಕಾರ್ಮಿಕರಿಗೆ ತೊಂದರೆ ನೀಡಿ ದೇಶದಲ್ಲಿ ದುರಾಡಳಿತ ಮಾಡಿದ ಕೇಂದ್ರ ಸರಕಾರಕ್ಕೆ ಈ ಚುನಾವಣೆಯ ಫಲಿತಾಂಶದ ಮೂಲಕ ಜನರು ಉತ್ತರ ನೀಡಿದ್ದಾರೆ ಎಂದರು.

ಜಾಹೀರಾತು

ಜಿಲ್ಲಾ ಪಂಚಾಯತ್ ಸದಸ್ಯ ಮಂಜುಳಾ ಮಾವೆ ಪಕ್ಷ ಪ್ರಮುಖರಾದ ಬೇಬಿ ಕುಂದರ್ ಸುದೀಪ್ ಶೆಟ್ಟಿ, ಅಬ್ಬಾಸ್ ಅಲಿ, ಸದಾಶಿವ ಬಂಗೇರಾ, ಯೂಸುಫ್ ಕರಂದಾಡಿ, ಗಂಗಾಧರ, ಮಲ್ಲಿಕಾ ಶೆಟ್ಟಿ, ಜಯಂತಿ ಪೂಜಾರಿ, ವೆಂಕಪ್ಪ ಪೂಜಾರಿ, ಪ್ರಶಾಂತ್ ಕುಲಾಲ್, ಬಿ.ಪ್ರಕಾಶ್ ಶೆಟ್ಟಿ, ಪದ್ಮನಾಭ ರೈ, ಮಧುಸೂದನ್ ಶೆಣೈ, ಮಹಮ್ಮದ್ ನಂದರಬೆಟ್ಟು, ಆನಂದ ಸಾಲ್ಯಾನ್, ಮತ್ತಿತರ ಪ್ರಮುಖರು ಹಾಜರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಿಜೆಪಿ ಮುಕ್ತ ಭಾರತ ನಿರ್ಮಾಣದತ್ತ ಫಲಿತಾಂಶ ದಿಕ್ಸೂಚಿ: ರಮಾನಾಥ ರೈ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*