ಅಕ್ರಮ ಮರಳುಗಾರಿಕೆ: ಜಿಲ್ಲೆಯಲ್ಲಿ 30.76 ಲಕ್ಷ ರೂ ದಂಡ ವಸೂಲಿ

ದ.ಕ.ಜಿಲ್ಲೆಯಲ್ಲಿ 2017-18 ಮತ್ತು 2018-19 ನೇ ಸಾಲಿನಲ್ಲಿ ನವಂಬರ್ ವರೆಗೆ  ಅಕ್ರಮ ಮರಳಗಾರಿಕೆಗೆ ಸಂಬಂಧಿಸಿ  ಒಟ್ಟು 40  ಪ್ರಕರಣಗಳು ವಿವಿಧ ಠಾಣೆಯಲ್ಲಿ  ಕೇಸು ದಾಖಲಾಗಿದ್ದು,30.76 ಲಕ್ಷ ರೂ.ದಂಡ ವಸೂಲಿ ಮಾಡಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಙಾನ ಸಚಿವ ರಾಜಶೇಖರ ಪಾಟೀಲ ಅವರು ತಿಳಿಸಿದ್ದಾರೆ.

ಬೆಳಗಾವಿ ವಿಧಾನ ಮಂಡಲ ಅಧಿವೇಶನದಲ್ಲಿ ಬಂಟ್ವಾಳ ಶಾಸಕ ಯು.ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಸಚಿವರು ಲಿಖಿತ ಉತ್ತರ ನೀಡಿದ್ದಾರೆ.  2017-18,18-19 ರ ಅಕ್ಟೋಬರ್ ವರೆಗೆ 24 ಅಕ್ರಮ ಮರಳುಗಾರಿಕೆ ಸಾಗಾಟವನ್ನು ಪತ್ತೆಹಚ್ಚಿ 28.42ಲಕ್ಷ ದಂಡ ವಸೂಲಿ ಮಾಡಲಾಗಿದೆ  ಎಂದು ಶಾಸಕ ರಾಜೇಶ್ ನಾಯ್ಕ್ ಅವರ ಉಪ ಪ್ರಶ್ನೆಗೆ  ಸಚಿವರು ಉತ್ತರಿಸಿದ್ದಾರೆ.

ಜಾಹೀರಾತು

ಕಾಮಗಾರಿ ಕುಂಠಿತ:

ರಾಜ್ಯದ ಕರಾವಳಿಯ ದ.ಕ,ಉ.ಕ,ಉಡುಪಿ ಜಿಲ್ಲೆಯಲ್ಲಿ   ಮರಳು ಅಭಾವದಿಂದ ಅಭಿವೃದ್ದಿ ಕಾಮಗಾರಿ ಕುಂಠಿತಗೊಂಡಿದೆ ಎಂದು ಒಪ್ಪಿಕೊಂಡಿರುವ ಗಣಿ ಮತ್ತು ಭೂ ವಿಜ್ಙಾನ ಸಚಿವ ರಾಜಶೇಖರ ಪಾಟೀಲ್ ಅವರು ಕರಾವಳಿ ಜಿಲ್ಲೆಯ ಸಿಆರ್ ಝಡ್  ನದಿ ಪಾತ್ರಗಳಲ್ಲಿ ಸ್ಥಳೀಯರಿಗೆ ಮರಳುಗಣಿಗಾರಿಗೆ‌ ಮಾನವ ಶ್ರಮದಿಂದ ತೆರವುಗೊಳಿಸಲು ಅನಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ನಾನ್ ಸಿಆರ್ ಝಡ್ ವ್ಯಾಪ್ತಿಯಲ್ಲಿ ಗುರುತಿಸಿರುವ ಮರಳು ಬ್ಲಾಕ್ ಗಳನ್ನು ಸಂಬಂಧಪಟ್ಟ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಸಂಪ್ರದಾಯಕವಾಗಿ  ಮಾನವ ಶ್ರಮದಿಂದ ಮರಳುದಿಬ್ಬಗಳನ್ನು ತೆರವುಗೊಳಿಸುವ ವ್ಯಕ್ತಿಗೆ ಮಾತ್ರ ಇ-ಹರಾಜು ಮೂಲಕ ಮರಳುಗಾರಿಕೆ‌ಗುತ್ತಿಗೆ ನೀಡಲು ಅವಕಾಶ ನೀಡಲಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಅವರ ಮತ್ತೊಂದು ಪ್ರಶ್ನೆಗೆ ಸಚಿವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಸಿಆರ್ ಝಡ್ ವ್ಯಾಪ್ತಿಯಲ್ಲಿ 76 ಮಂದಿಗೆ ಮರಳು ದಿಬ್ಬಗಳನ್ನು ತೆರವುಗೊಳಿಸಲು ತಾತ್ಕಾಲಿಕ ಪರವಾನಿಗೆ ನೀಡಲಾಗಿದೆ.ನಾನ್ ಸಿಆರ್ ಝಡ್ ಪ್ರದೇಶದಲ್ಲಿ ಇ-ಟೆಂಡರ್,ಹರಾಜು ಪ್ರಕ್ರಿಯೆಯ ಮೂಲಕ ಗುತ್ತಿಗೆ ಮಂಜೂರು ಮಾಡಲಾಗಿದ್ದು,ದ.ಕ.ಜಿಲ್ಲೆಯಲ್ಲಿ  ಈಗಾಗಲೇ  ಎರಡು ಮರಳು ಬ್ಲಾಕ್ ಗಳು ಕಾರ್ಯ ನಿರ್ವಹಿಸುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಅಕ್ರಮ ಮರಳುಗಾರಿಕೆ: ಜಿಲ್ಲೆಯಲ್ಲಿ 30.76 ಲಕ್ಷ ರೂ ದಂಡ ವಸೂಲಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*